ಬಜಪೆ : ಮನೆಯೇ ಅಂಗನವಾಡಿ ಕೇಂದ್ರ


Team Udayavani, Mar 9, 2018, 4:32 PM IST

9-mARCH-3.jpg

ಬಜಪೆ: ಗರ್ಭಿಣಿಯರು, ತಾಯಂದಿರು ಮತ್ತು ಮಕ್ಕಳು ಆರೋಗ್ಯ ಮತ್ತು ಶಿಕ್ಷಣಕ್ಕಾಗಿ ಸರಕಾರ ಹಲವಾರು ಯೋಜನೆಗಳನ್ನು ಹಾಕಿಕೊಂಡಿದೆ. ಆದರೆ ಈ ಯೋಜನೆಗಳನ್ನು ಅರ್ಹ ಫ‌ಲಾನುಭವಿಗಳಿಗೆ ತಲುಪಿಸುವ ಕೇಂದ್ರವೇ ಸರಿಯಾಗಿಲ್ಲದಿದ್ದರೆ ಹೇಗೆ?

ಪಡುಪೆರಾರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪಡುಪೆರಾರ ಗ್ರಾಮದ ಅಂಗನವಾಡಿಯೊಂದು ಜಾಗವಿಲ್ಲದೆ ಬಜಪೆ ಗ್ರಾಮದ ಕೊರಕಂಬ್ಳದ ಖಾಸಗಿ ಮನೆಯಲ್ಲಿ ಕಾರ್ಯನಿರ್ವಹಿಸುತ್ತಿದೆ.

ಸ್ಥಳೀಯ ಆಡಳಿತದಿಂದ ನಿರ್ಲಕ್ಷ
ಅದೆಷ್ಟೋ ಸರಕಾರಿ ಜಾಗಗಳು ಖಾಲಿ ಬಿದ್ದಿದ್ದು, ಅದನ್ನು ಸಾರ್ವಜನಿಕರ ಉಪಯೋಗಕ್ಕೆ ಸದ್ಬಳಕೆ ಮಾಡಬಹುದು.  ಆದರೆ  ಸ್ಥಳೀಯ ಆಡಳಿತ ಈ ನಿಟ್ಟಿನಲ್ಲಿ ಈವರೆಗೂ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಷಾದನೀಯ.

ಅಸಮರ್ಪಕ ವ್ಯವಸ್ಥೆ
ಪಡು ಪೆರಾರ ಗ್ರಾ.ಪಂ.ನ ಉಪಾಧ್ಯಕ್ಷರ ವಾರ್ಡ್ ನಲ್ಲಿರುವ  ಈ ಅಂಗನವಾಡಿಯು 2006ರಿಂದ ಖಾಸಗಿ ಮನೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಅಂಗನವಾಡಿ ಕೇಂದ್ರದಲ್ಲಿ  ಬಜಪೆಯ 5, ಪಡುಪೆರಾರದ 6 ಮಂದಿ ಮಕ್ಕಳಿದ್ದಾರೆ.

ಕುಡುಬಿ ಹಾಗೂ ಮುಸ್ಲಿಂ ಸಮಾಜಕ್ಕೆ ಸೇರಿದ ಮಕ್ಕಳೇ ಹೆಚ್ಚಾಗಿದ್ದು, ಇಲ್ಲಿ ಸಮರ್ಪಕ ವ್ಯವಸ್ಥೆಯಿಲ್ಲದೆ ಮಕ್ಕಳೂ ಇಲ್ಲಿ ಹೇಗೆ ಇರುತ್ತಾರೋ ಎಂದು ಪ್ರಶ್ನಿಸಿಕೊಳ್ಳುವಂತಿದೆ.

ಅಂಗನವಾಡಿಯಲ್ಲಿದ್ದ ಸಮಸ್ಯೆಗಳನ್ನು ನೋಡಿದ ಸ್ಥಳೀಯರು ಈ ಮನೆಯನ್ನು ಅಂಗನವಾಡಿಗೆಂದು ಮೊದಲು ಉಚಿತ ವಾಗಿ ನೀಡಿದ್ದರು. ಈಗ ಬಾಡಿಗೆ ಪಾವತಿಸಲಾಗುತ್ತಿದೆ. ಇಕ್ಕಟ್ಟಾದ ಕೋಣೆಯಲ್ಲಿ ಮಕ್ಕಳು ಕುಳಿತುಕೊಳ್ಳಬೇಕಾದ ಪರಿ ಸ್ಥಿತಿ ಇಲ್ಲಿದೆ. ಪಡುಪೆರಾರ ಗ್ರಾಮ ಪಂಚಾಯತ್‌ ಜಾಗದಲ್ಲಿ ಅಂಗನವಾಡಿ ಕಟ್ಟಡ ನಿರ್ಮಿಸಬಹುದು. ಜಾಗ ಇದ್ದರೆ ಕಟ್ಟಡವನ್ನು ಸರಕಾರದ ಯೋಜನೆ, ದಾನಿಗಳ ಸಹಾಯ ಹಾಗೂ ನರೇಗಾ ಯೋಜನೆಯಡಿಯಲ್ಲಿ ಮಾಡಬಹುದಾಗಿದೆ ಎನ್ನು ತ್ತಾರೆ ಸ್ಥಳೀಯರು.

ಅಧ್ಯಕ್ಷರಿಗೆ ಮಾಹಿತಿ ಇಲ್ಲವಂತೆ
ಪಡುಪೆರಾರದ ಗ್ರಾಮದ ಅಂಗನವಾಡಿ ಕೇಂದ್ರ ಬಜಪೆ ಖಾಸಗಿ ಕಟ್ಟಡ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದೆಯಲ್ಲ ಈ ಬಗ್ಗೆ ಏನಂತೀರಿ ಎಂದು ಪಡುಪೆರಾರ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಶಾಂತಾ ಅವರನ್ನು ಪ್ರಶ್ನಿಸಿದರೆ, ಈ ಬಗ್ಗೆ  ತನಗೆ ಮಾಹಿತಿ ಇಲ್ಲ. ಉಪಾಧ್ಯಕ್ಷ ನೂರ್‌ ಅಹ್ಮದ್‌ ಅವರಲ್ಲಿ ಕೇಳಿ. ಅದು ಅವರ ವಾರ್ಡ್‌ ಎನ್ನುತ್ತಾರೆ.

ಬಾಡಿಗೆ ಪಾವತಿ
ಜಾಗಕ್ಕಾಗಿ ಹಲವಾರು ವರ್ಷಗಳ ಹಿಂದೆ ಇಲಾಖೆ ಹಾಗೂ ಗ್ರಾಮ ಪಂಚಾಯತ್‌ಗೆ  ಅರ್ಜಿ ನೀಡಿದ್ದೇವೆ. ಇನ್ನೂ ಆಗಿಲ್ಲ ಎನ್ನುತ್ತಾರೆ. ಈ ಕಟ್ಟಡ ಮೊದಲಿಗೆ ಬಾಡಿಗೆ ಇಲ್ಲದೇ ಉಚಿತವಾಗಿ ನೀಡಲಾಗಿತ್ತು. ಆದರೆ ಈಗ ಬಾಡಿಗೆ ಪಾವತಿಸಲಾಗುತ್ತಿದೆ.
–  ಶೋಭಾ, ಅಂಗನವಾಡಿ ಕಾರ್ಯಕರ್ತೆ

ಹಲವು ಬಾರಿ ಮನವಿ
ಈ ಅಂಗನವಾಡಿ ನಿರ್ಮಾಣಕ್ಕೆ ಅನೇಕ ಬಾರಿ ವಿಎ ಹಾಗೂ ಕಂದಾಯ ನಿರೀಕ್ಷಕ ರಿಗೆ ಜಾಗ ನೀಡಲು ಮನವಿ ಮಾಡ ಲಾಗಿದೆ. ಆದರೆ ಈ ಪ್ರದೇಶದಲ್ಲಿ ಸರಕಾರಿ ಜಾಗ ಇಲ್ಲದಿರುವುದರಿಂದ ಯಾರಾದರೂ ಜಾಗ ದಾನ ಮಾಡಲು ಮುಂದಾದರೆ ಕಟ್ಟಡ ನಿರ್ಮಾಣ ಮಾಡಲು ಸಾಧ್ಯ.
–  ಶ್ಯಾಮಲಾ, ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ, ಗ್ರಾಮಾಂತರ

ಸುಬ್ರಾಯ ನಾಯಕ್‌, ಎಕ್ಕಾರು

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.