Banking Sector: ಎಂಸಿಸಿ ಬ್ಯಾಂಕ್‌ ರಾಜ್ಯಕ್ಕೆ ವಿಸ್ತರಣೆ: ಲೋಬೋ


Team Udayavani, Sep 24, 2024, 12:52 AM IST

Banking Sector: ಎಂಸಿಸಿ ಬ್ಯಾಂಕ್‌ ರಾಜ್ಯಕ್ಕೆ ವಿಸ್ತರಣೆ: ಲೋಬೋ

ಮಂಗಳೂರು: ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಮಂಗಳೂರು ಕೆಥೋಲಿಕ್‌ ಕೋ-ಆಪರೇಟಿವ್‌ ಬ್ಯಾಂಕ್‌ (ಎಂಸಿಸಿ ಬ್ಯಾಂಕ್‌) ಅತ್ಯುತ್ತಮ ಪ್ರಗತಿ ಸಾಧಿ ಸಿದ್ದು, ಬ್ಯಾಂಕಿನ ಕಾರ್ಯ ವ್ಯಾಪ್ತಿಯನ್ನು ರಾಜ್ಯಕ್ಕೆ ವಿಸ್ತರಿಸಲಾಗುವುದು ಎಂದು ಅಧ್ಯಕ್ಷ ಅನಿಲ್‌ ಲೋಬೊ ಹೇಳಿದರು.

ಅವರು ಬ್ಯಾಂಕಿನ 106ನೇ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 2023-24ನೇ ವಿತ್ತೀಯ ವರ್ಷದಲ್ಲಿ ಶೇ.10 ಲಾಭಾಂಶ ಘೋಷಿಸಿದೆ. ಬ್ಯಾಂಕ್‌ 10.45 ಕೋ. ರೂ. ನಿವ್ವಳ ಲಾಭ ಗಳಿಸಿದೆ ಎಂದರು.

ಬ್ಯಾಂಕ್‌ ಠೇವಣಿಯಲ್ಲಿ ಶೇ. 10 ಪ್ರಗತಿ ಸಾಧಿ ಸಿ 635.70 ಕೋಟಿ ರೂ. ಠೇವಣಿ, ಒಟ್ಟು ಮುಂಗಡದಲ್ಲಿ ಶೇ 25.21 ಪ್ರಗತಿ ಸಾ ಧಿಸಿದ್ದು, 444.88 ಕೋಟಿ ರೂ. ಮುಂಗಡ, ದುಡಿಯುವ ಬಂಡವಾಳ ರೂ.752.95 ಕೋ. ರೂ. (ಪ್ರಗತಿ ಶೇ.10.03) ಮತ್ತು ಶೇರು ಬಂಡವಾಳ ರೂ.31.21 ಕೋ. ರೂ. (ಪ್ರಗತಿ ಶೇ 14.07) ಆಗಿದೆ. ಬ್ಯಾಂಕಿನ ಎನ್‌.ಪಿ.ಎ. ಪ್ರಮಾಣವು ಕಳೆದ ಆರ್ಥಿಕ ವರ್ಷದಲ್ಲಿದ್ದ ಶೇ. 1.37ರಿಂದ 1.12ಕ್ಕೆ ತಲುಪಿರುವುದು ಬ್ಯಾಂಕಿನ ಬೆಳವಣಿಗೆ ಉತ್ತಮವಾಗಿದೆ ಎಂಬುದಕ್ಕೆ ಸಾಕ್ಷಿ ಎಂದರು.

ಮುಂದಿನ ವರ್ಷ 10 ಹೊಸ ಶಾಖೆಗಳ ಆರಂಭ, ಉಡುಪಿ, ಮೂಡುಬಿದಿರೆ, ಕಾರ್ಕಳ, ಮತ್ತು ಕುಲಶೇಖರ ಶಾಖೆಗಳ ಸ್ಥಳಾಂತರ, ಡಿಜಿಟಲ್‌ ಸೇವೆಯಂತಹ ಗೂಗಲ್‌ ಪೇ, ಫೋನ್‌ ಪೇ, ಯುಪಿಎ ಮುಂತಾದ ಸೌಲಭ್ಯಗಳನ್ನು ಸದ್ಯದಲ್ಲೇ ಒದಗಿಸಲಾಗುವುದು ಎಂದರು.
ನಿರ್ದೇಶಕ ಡೇವಿಡ್‌ ಡಿ’ ಸೋಜಾ, ಸದಸ್ಯರಾದ ಎಡ್ಮಂಡ್‌ ಫ್ರಾಂಕ್‌, ರೋನ್ಸ್‌ ಬಂಟ್ವಾಳ್‌, ರೋಹನ್‌ ಮೊಂತೇರೊ, ಪಿಯುಸ್‌ ಎಲ್‌. ರೊಡ್ರಿಗಸ್‌ ಮತ್ತು ಲುವಿ ಪಿಂಟೊ ಅವರು ಸಂಸ್ಥಾಪಕರಿಗೆ ಪುಷ್ಪ ನಮನ ಸಲ್ಲಿಸಿದರು.

ಉಪಾಧ್ಯಕ್ಷ ಜೆರಾಲ್ಡ್‌ ಜೂಡ್‌ ಡಿ’ಸಿಲ್ವಾ ಸಭೆಯ ವರದಿ ಓದಿದರು. 2023-24ರ ಲೆಕ್ಕ ಪರಿಶೋಧಿತ ಹಣಕಾಸು, ಲೆಕ್ಕ ಪರಿಶೋಧನೆ ವರದಿ, 2024-25ರ ಆರ್ಥಿಕ ವರ್ಷದ ಚಟುವಟಿಕೆಗಳ ಕಾರ್ಯ ಕ್ರಮ ಮತ್ತು 2024-25ರ ಬಜೆಟ್‌ ಅನ್ನು ಮಂಡಿಸಿ, ಅನುಮೋದನೆ ಪಡೆಯಲಾಯಿತು.

ನಿರ್ದೇಶಕರಾದ ಅಂಡ್ರೂ ಡಿ’ ಸೋಜಾ, ಜೋಸೆಫ್‌ ಎಂ., ಅನಿಲ್‌ ಪತ್ರಾವೊ, ಡಾ| ಜೆರಾಲ್ಡ್‌ ಪಿಂಟೊ, ಡೇವಿಡ್‌ ಡಿ’ಸೋಜಾ, ಎಲ್‌ರೊಯ್‌ ಕಿರಣ್‌ ಕ್ರಾಸ್ಟೊ, ರೋಶನ್‌ ಡಿ’ಸೋಜಾ, ಹೆರಾಲ್ಡ್‌ ಮೊಂತೇರೊ, ಜೆ. ಪಿ. ರೊಡ್ರಿಗಸ್‌, ವಿನ್ಸೆಂಟ್‌ ಲಸ್ರಾದೊ, ಮೆಲ್ವಿನ್‌ ವಾಸ್‌, ಐರಿನ್‌ ರೆಬೆಲ್ಲೊ, ಡಾ| ಫ್ರೀಡಾ ಡಿ’ ಸೋಜಾ, ವೃತ್ತಿಪರ ನಿರ್ದೇಶಕರಾದ ಸಿ.ಜಿ. ಪಿಂಟೊ, ಸುಶಾಂತ್‌ ಸಲ್ಡಾನ್ಹಾ, ಉಪ ಮಹಾಪ್ರಬಂಧಕ ರಾಜ್‌ ಎಫ್‌. ಮಿನೇಜಸ್‌ ಉಪಸ್ಥಿತರಿದ್ದರು.

ಜಿಎಂ ಸುನಿಲ್‌ ಮಿನೇಜಸ್‌ ಸ್ವಾಗ ತಿಸಿ, ಬ್ರಹ್ಮಾವರ ಶಾಖಾ ವ್ಯವಸ್ಥಾ ಪಕ ಒವಿನ್‌ ರೆಬೆಲ್ಲೊ ನಿರೂಪಿಸಿದರು. ಅಧ್ಯಕ್ಷ ಅನಿಲ್‌ ವಂದಿಸಿದರು.

ಟಾಪ್ ನ್ಯೂಸ್

High-Court

High Court: ಮರಗಳಿಗೆ ಕತ್ತರಿ: ಸರಕಾರ, ಜಿಲ್ಲಾಡಳಿತಕ್ಕೆ ನೋಟಿಸ್‌

High-Court

High Court: ಕೋರ್ಟ್‌ ಕಲಾಪದ ವೀಡಿಯೋ ಹಂಚಿಕೆಗೆ ತಡೆ: ಇಂದು ವಿಚಾರಣೆ

pratp

Challenge: ಮಹಿಷ ದಸರಾಕ್ಕೆ ಮುಂದಾದರೆ ಚಾಮುಂಡಿ ಚಲೋ: ಪ್ರತಾಪ್‌ ಸಿಂಹ

Balachandra

Thirupathi: ಲಡ್ಡು ವಿವಾದ ಬಳಿಕ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ: ಶಾಸಕ ಬಾಲಚಂದ್ರ

Eshawar-Khandre

Mysuru Dasara: ಆನೆಗಳೊಂದಿಗೆ ಸೆಲ್ಫಿ ,ರೀಲ್ಸ್‌ , ಫೋಟೋ ನಿಷೇಧ: ಸಚಿವ ಈಶ್ವರ ಖಂಡ್ರೆ

Accident-Logo

Mysuru: ಕಾರು ಢಿಕ್ಕಿ: ಬೈಕಿನಲ್ಲಿದ್ದ ಮಗು ಸ್ಥಳದಲ್ಲೇ ಸಾವು; ಹೆತ್ತವರಿಗೆ ಗಂಭೀರ ಗಾಯ

Udupi; ಗೀತಾರ್ಥ ಚಿಂತನೆ-44: ಸ್ವಭಾವಕ್ಕೆ ತಕ್ಕುದಾಗಿ ವ್ಯಕ್ತಿಯ ಬೆಳವಣಿಗೆ

Udupi; ಗೀತಾರ್ಥ ಚಿಂತನೆ-44: ಸ್ವಭಾವಕ್ಕೆ ತಕ್ಕುದಾಗಿ ವ್ಯಕ್ತಿಯ ಬೆಳವಣಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smoor- Hongyo ಐಸ್‌ಕ್ರೀಂ ಸಹಭಾಗಿತ್ವ ಘೋಷಣೆ

Smoor- Hongyo ಐಸ್‌ಕ್ರೀಂ ಸಹಭಾಗಿತ್ವ ಘೋಷಣೆ

Sullia ನ್ಯಾಯಾಧೀಶರಿಗೆ ಮಾಹಿತಿ ನೀಡದ ವೈದ್ಯರು

Sullia ನ್ಯಾಯಾಧೀಶರಿಗೆ ಮಾಹಿತಿ ನೀಡದ ವೈದ್ಯರು

Commonwealth ಕಾರ್ಯಕಾರಿ ಸಭೆಯಲ್ಲಿ ಸ್ಪೀಕರ್‌ ಖಾದರ್‌ ಭಾಗಿ

Commonwealth ಕಾರ್ಯಕಾರಿ ಸಭೆಯಲ್ಲಿ ಸ್ಪೀಕರ್‌ ಖಾದರ್‌ ಭಾಗಿ

Aranthodu: ಕಾರುಗಳು ಢಿಕ್ಕಿ; ಪ್ರಯಾಣಿಕರು ಪಾರು

Aranthodu: ಕಾರುಗಳು ಢಿಕ್ಕಿ; ಪ್ರಯಾಣಿಕರು ಪಾರು

Sullia ಬಸ್ಸಿನಲ್ಲಿ ಅನುಚಿತ ವರ್ತನೆ; ಹಲ್ಲೆ: ಇಬ್ಬರ ಬಂಧನ

Sullia ಬಸ್ಸಿನಲ್ಲಿ ಅನುಚಿತ ವರ್ತನೆ; ಹಲ್ಲೆ: ಇಬ್ಬರ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kudali

Shivamogga: ತಿರುಪತಿ ಲಡ್ಡಿಗೆ ಅಪಚಾರ: ಕೂಡಲಿ ಶ್ರೀಗಳಿಂದ 3 ದಿನ ಉಪವಾಸ ವ್ರತ

High-Court

High Court: ಮರಗಳಿಗೆ ಕತ್ತರಿ: ಸರಕಾರ, ಜಿಲ್ಲಾಡಳಿತಕ್ಕೆ ನೋಟಿಸ್‌

High-Court

High Court: ಕೋರ್ಟ್‌ ಕಲಾಪದ ವೀಡಿಯೋ ಹಂಚಿಕೆಗೆ ತಡೆ: ಇಂದು ವಿಚಾರಣೆ

1-eqweewe

Bihar; ಮತ್ತೊಂದು ಸೇತುವೆ ಕುಸಿತ: ನಾಲ್ಕು ತಿಂಗಳಲ್ಲಿ 17ನೇ ಪ್ರಕರಣ

pratp

Challenge: ಮಹಿಷ ದಸರಾಕ್ಕೆ ಮುಂದಾದರೆ ಚಾಮುಂಡಿ ಚಲೋ: ಪ್ರತಾಪ್‌ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.