![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jun 20, 2023, 5:52 AM IST
ಬಂಟ್ವಾಳ: ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದ ಬಿ.ಸಿ.ರೋಡಿನ ಗಾಂದೋಡಿಯ ವ್ಯಕ್ತಿಯೊಬ್ಬರ ಮೃತದೇಹ ಸೋಮವಾರ ಸಜೀಪಮುನ್ನೂರಿನ ಮಂಜಲ್ಪಾದೆಯಲ್ಲಿ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.
ಗಾಂದೋಡಿ ನಿವಾಸಿ ಜನಾರ್ದನ ಸಪಲ್ಯ(53) ಮೃತ ವ್ಯಕ್ತಿಯಾಗಿದ್ದು, ಅವರು ಆಕಸ್ಮಿಕವಾಗಿ ನದಿಗೆ ಬಿದ್ದಿದ್ದಾರೋ ಅಥವಾ ನದಿಗೆ ಹಾರಿ ಆತ್ಯಹತ್ಯೆ ಮಾಡಿಕೊಂಡಿದ್ದಾರೋ ಎಂದು ಸ್ಪಷ್ಟವಾಗಿ ತಿಳಿದುಬಂದಿಲ್ಲ. ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ತೆಂಗಿನಕಾಯಿ ಕೀಳುವುದು ಸೇರಿದಂತೆ ಕೂಲಿ ಕೆಲಸ ಮಾಡಿಕೊಂಡಿದ್ದ ಜನಾರ್ದನ ಅವರು ಜೂ. 18ರಂದು ಬೆಳಗ್ಗೆ 9.30ರ ಸುಮಾರಿಗೆ ಮನೆ ಬಿಟ್ಟು ಬಂದವರು ಮರಳಿ ಬಂದಿಲ್ಲ. ಸಾಕಷ್ಟು ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಆದರೆ ಸೋಮವಾರ ಮಂಜಲ್ಪಾದೆಯಲ್ಲಿ ಪತ್ತೆಯಾದ ಮೃತದೇಹ ಪರಿಶೀಲಿಸಿದಾಗ ಅದು ಜನಾರ್ದನ ಅವರದ್ದೇ ಎಂಬುದು ತಿಳಿದುಬಂದಿದೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.