ಬಂಟ್ವಾಳ: ತುಳು ಕೂಟ ಸದಸ್ಯತ್ವ ಅಭಿಯಾನ 


Team Udayavani, Oct 27, 2017, 4:34 PM IST

27Mng-1.8.jpg

ಬಂಟ್ವಾಳ: ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸೇರ್ಪಡೆ ಮಾಡುವ ಕಾಲ ಸನ್ನಿಹಿತವಾಗಿದೆ. ಶ್ರೀಕ್ಷೇತ್ರ ಧರ್ಮಸ್ಥಳದ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ 2016ರ ಆ. 31 ರಂದು ಪ್ರಧಾನಿಯವರಿಗೆ ಈ ಕುರಿತು ಮನವಿ ನೀಡಲಾಗಿತ್ತು, ಅ.29ರಂದು ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕ್ಷೇತ್ರಕ್ಕೆ ಬರುವ ಸಂದರ್ಭ ತುಳುವನ್ನು ಸೇರ್ಪಡೆ ಮಾಡುವ ಕುರಿತು ಡಾ| ವೀರೇಂದ್ರ ಹೆಗ್ಗಡೆ ಅವರು ಪ್ರಸ್ತಾವ ಮಾಡಲಿದ್ದಾರೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ ಹೇಳಿದರು.

ಅವರು ಅ. 25ರಂದು ಜೋಡು ಮಾರ್ಗ ಸ್ವಶಾì ಕಲಾ ಮಂದಿರದಲ್ಲಿ ನಡೆದ ತುಳು ಕೂಟ ಸದಸ್ಯತ್ವ ಅಭಿಯಾನದ ಮೊದಲ ಸದಸ್ಯತ್ವ ಮೊಬಲಗು ಪಾವತಿ ಪತ್ರವನ್ನು ಪಡೆದು ಮಾತನಾಡಿದರು. 

ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಸಹಿತ ಇತರ 32 ಭಾಷೆಗಳು ಸಂವಿಧಾನದಲ್ಲಿ ಸೇರ್ಪಡೆಗಾಗಿ ಸರತಿಯಲ್ಲಿವೆ. ಈಗಾಗಲೇ 21 ಭಾಷೆಗಳ ಸೇರ್ಪಡೆ ಆಗಿದೆ. ತುಳುವಿನ ಸೇರ್ಪಡೆಯನ್ನು ಪ್ರಸ್ತುತ ನಿರ್ದಿಷ್ಟ ಕ್ರಮದಲ್ಲಿ ಮಾಡಲಾಗುತ್ತಿದೆ ಎಂದವರು ತಿಳಿಸಿದರು

ತುಳು ಕೂಟಕ್ಕೆ ಬಲ
ತುಳು ಕೂಟ ಬಂಟ್ವಾಳ ಇದರ ಅಧ್ಯಕ್ಷ ಸುದರ್ಶನ ಜೈನ್‌ ಅಧ್ಯಕ್ಷತೆ ವಹಿಸಿದ್ದರು. ಸದಸ್ಯತ್ವ ಅಭಿಯಾನದ ಮೂಲಕ ತುಳು ಕೂಟವನ್ನು ಬಲಯುತವಾಗಿ ಮಾಡಲು ಸಾಧ್ಯ ಎಂದರು. ಮುಂದಿನ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ಸಭೆಯಲ್ಲಿ ಪ್ರಸ್ತಾವನೆ, ಸಲಹೆ, ಸೂಚನೆ, ವಿವರದ ಮಂಡನೆ ನಡೆಯಿತು.  ವೇದಿಕೆಯಲ್ಲಿ ಬಂಟ್ವಾಳ ಕಸಾಪ ಅಧ್ಯಕ್ಷ ಕೆ. ಮೋಹನ ರಾವ್‌, ಯಕ್ಷಗಾನ ಹಿರಿಯ ಕಲಾವಿದ ಸರಪಾಡಿ ಅಶೋಕ ಶೆಟ್ಟಿ, ಬ್ಯಾರಿ ಸಾಹಿತ್ಯ ಪರಿಷತ್‌ ಅಧ್ಯಕ್ಷ ಅಬ್ಟಾಸ್‌ ಅಲಿ, ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾದ ಶಿವಾನಂದ ಕರ್ಕೇರ, ಸುಧಾ ನಾಗೇಶ್‌, ವಿಜಯ ಸಾಲೆತ್ತೂರು, ವಿದ್ಯಾಶ್ರೀ, ತುಳು ಕೂಟದ ಕೋಶಾಧಿಕಾರಿ ಸುಭಾಶ್ಚಂದ್ರ ಜೈನ್‌ ಮತ್ತಿತರರು ಉಪಸ್ಥಿತರಿದ್ದರು.

ಅಕಾಡೆಮಿ ನಿಕಟಪೂರ್ವ ಸದಸ್ಯ ಡಿ.ಎಂ. ಕುಲಾಲ್‌ ಸ್ವಾಗತಿಸಿದರು. ಹಾಲಿ ಸದಸ್ಯ ಗೋಪಾಲ ಅಂಚನ್‌ ಪ್ರಸ್ತಾವನೆ ನೀಡಿದರು. ಕೂಟದ ಪ್ರಮುಖರಾದ ಸೀತಾರಾಮ ಶೆಟ್ಟಿ ಕಾಂತಾಡಿ ವಂದಿಸಿ, ಕಲಾವಿದ ಎಚ್ಕೆ ನಯನಾಡು ನಿರ್ವಹಿಸಿದರು.

ತುಳು ಸಾಂಸ್ಕೃತಿಕ ಸಂಪತ್ತು ಉಳಿಸುವ ಕೆಲಸವಾಗಲಿ
ಅಕಾಡೆಮಿಯು ಗ್ರಾಮೀಣ ಪ್ರದೇಶದಲ್ಲಿ ಇರುವ ತುಳುವಿನ ಸಾಂಸ್ಕೃತಿಕ ಸಂಪತ್ತನ್ನು ಬೆಳಕಿಗೆ ತರುವ, ಸಾರ್ವತ್ರಿಕವಾಗಿ ಅದನ್ನು ಉಳಿಸಿಕೊಳ್ಳುವ ಮಹತ್ವದ ಹೊಣೆ ನಿರ್ವಹಿಸಲಿದೆ. ಬಂಟ್ವಾಳದಲ್ಲಿ ಮುಂದಿನ ಡಿ. 10ರಂದು ಪ್ರಥಮ ತುಳು ಸಾಹಿತ್ಯ ಸಮ್ಮೇಳನ ನಡೆಯಲಿದೆ . ಈಗಾಗಲೇ ತುಳು ಭಾಷೆಯ ಉಳಿಸುವಿಕೆ , ಬೆಳೆಸುವಿಕೆಯಲ್ಲಿ ಅನೇಕ ಪ್ರಯತ್ನ ನಡೆದಿವೆ. 1972ರಲ್ಲಿ ಅಡ್ಯಾರ್‌ನಲ್ಲಿ ಪ್ರಥಮ ವಿಶ್ವ ತುಳು ಸಮ್ಮೇಳನ ನಡೆದಿತ್ತು. 1989ರಲ್ಲಿ ಅಖಿಲ ಭಾರತ ತುಳು ಸಮ್ಮೇಳನ ನಡೆದಿದೆ. 2009ರಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಆಶ್ರಯದಲ್ಲಿ ಉಜಿರೆಯಲ್ಲಿ ವಿಶ್ವ ತುಳು ಸಮ್ಮೇಳನ ನಡೆದಿತ್ತು. 2010ರಲ್ಲಿ ಪುತ್ತೂರು ಸವಣೂರಿನಲ್ಲಿ ಅಖೀಲ ಭಾರತ ತುಳು ಸಮ್ಮೇಳನ ನಡೆದಿದೆ. 2012ರಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮಿಗಳ ಮಾರ್ಗದರ್ಶನದಲ್ಲಿ ತುಳುನಾಡ ಜಾತ್ರೆ, ತುಳು ತೇರ್‌ ಒಯಿಪುಗ ಆಗಿದೆ. 2015ರಲ್ಲಿ ಮಕ್ಕಳ ತುಳು ಸಾಹಿತ್ಯ ಸಮ್ಮೇಳನ ನಡೆದಿರುವುದನ್ನು ಸ್ಮರಿಸಬಹುದು.
– ಎ.ಸಿ. ಭಂಡಾರಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ 

ಟಾಪ್ ನ್ಯೂಸ್

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullal ಜು. 10- 16: ಸೋಮೇಶ್ವರ‌ ರೈಲ್ವೇಗೇಟ್‌ ಬಂದ್‌

Ullal ಜು. 10- 16: ಸೋಮೇಶ್ವರ‌ ರೈಲ್ವೇಗೇಟ್‌ ಬಂದ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

ಪರಿಸರ ಸಂರಕ್ಷಣೆಗೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ

Brijesh Chowta ಪರಿಸರ ಸಂರಕ್ಷಣೆಗೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.