![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Aug 10, 2024, 9:00 PM IST
ಬಂಟ್ವಾಳ: ವಾಮದಪದವು ಪಾಲೆದಮರ ಜಂಕ್ಷನ್ ಬಳಿ ಪೇಟೆ ಕಡೆಯಿಂದ ಆಗಮಿಸಿದ ಪಿಕ್ಅಪ್ ವಾಹನ ಢಿಕ್ಕಿ ಹೊಡೆದು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಗಾಯಗೊಂಡ ಘಟನೆ ಆ. 8ರಂದು ನಡೆದಿದೆ.
ಘಟನೆಯಲ್ಲಿ ಪಿಲಿಮೊಗ್ರು ಗ್ರಾಮ ನಿವಾಸಿ ಪುಷ್ಪಾವತಿ ಗಾಯಗೊಂಡಿದ್ದು ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಹರಿಶ್ಚಂದ್ರ ಅವರು ಪೊಲೀಸರಿಗೆ ದೂರು ನೀಡಿದ್ದು, ಚಾಲಕ ರಾಧಾಕೃಷ್ಣ ಆಚಾರ್ಯ ಎಂಬಾತ ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ವಾಹನ ಚಲಾಯಿಸಿಕೊಂಡು ಬಂದು ಮಹಿಳೆಗೆ ಢಿಕ್ಕಿ ಹೊಡೆದಿದ್ದಾನೆ ಎಂದು ಆರೋಪಿಸಲಾಗಿದೆ.
ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.