![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 15, 2023, 10:07 PM IST
ಬಂಟ್ವಾಳ: ಪೂರ್ವ ದ್ವೇಷದ ಹಿನ್ನೆಲೆಯಲ್ಲಿ ಆರೋಪಿಯು ಜೀಪಿನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರನ್ನು ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಫೆ.14ರಂದು ಬರಿಮಾರಿನಲ್ಲಿ ನಡೆದಿದೆ.
ಗ್ರಾಮದ ಮದಿಮೆತ್ತಿಮಾರು ನಿವಾಸಿ ಸನತ್ಕುಮಾರ್ ಅವರಿಗೆ ಆರೋಪಿ ಸಂಬಂಧಿಕ ಪ್ರಶಾಂತ್ಕುಮಾರ್ ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇವರೊಳಗೆ ಜಾಗದ ತಕರಾರಿದ್ದು, ಜತೆಗೆ ಬರಿಮಾರು ಪೇಟೆಯಲ್ಲಿರುವ ಸನತ್ ಅವರ ಖಾಸಗಿ ಪಡಿತರ ಅಂಗಡಿಯ ವಿಚಾರದಲ್ಲೂ ಮನಸ್ತಾಪವಿತ್ತು.
ಇದೇ ವಿಚಾರಕ್ಕೆ ಸಂಬಂಧಿಸಿ ಫೆ. 14ರಂದು ಮಧ್ಯಾಹ್ನ 3ರ ಸುಮಾರಿಗೆ ಸನತ್ ಅವರು ತಮ್ಮ ಜೀಪಿನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಮನೆಯ ಗೇಟಿನ ಬಳಿ ತಲುಪುತ್ತಿದ್ದಂತೆ ಆರೋಪಿ ಪ್ರಶಾಂತ್ಕುಮಾರ್ ಆಮ್ನಿ ಕಾರಿನಲ್ಲಿ ಬಂದು, ಸನತ್ ಅವರ ಕೆನ್ನೆಗೆ ಹೊಡೆದು ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿದ್ದಾನೆ.
ಜತೆಗೆ ಕಾರಿನಲ್ಲಿದ್ದ ಮರದ ದೊಣ್ಣೆಯಿಂದ ಹಲ್ಲೆಗೆ ಮುಂದಾಗಿದ್ದು, ಈ ವೇಳೆ ತಡೆದ ಪರಿಣಾಮ ಕೈ ಮೊಣಗಂಟು, ಬೆರಳಿಗೆ ಗಾಯವಾಗಿ ಸನತ್ ಅವರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.