ಬ್ಯಾರಿಕೇಡ್‌ ಏಕಾಏಕಿ ತೆರವು: ಅಪಘಾತ ಸಂಭವ ಭೀತಿ?

ರಾಷ್ಟ್ರೀಯ ಹೆದ್ದಾರಿಯಲ್ಲಿ ಮೂಲ್ಕಿ - ಮುಕ್ಕದವರೆಗೆ

Team Udayavani, May 27, 2022, 9:58 AM IST

haleyangadi

ಹಳೆಯಂಗಡಿ/ ಮೂಲ್ಕಿ: ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರವೇಶಿಸುವ ಮೂಲ್ಕಿ ಬಪ್ಪನಾಡು ಪ್ರದೇಶದಿಂದ ಮುಕ್ಕದವರೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಳವಡಿಸಲಾಗಿದ್ದ ಎಲ್ಲ ಬ್ಯಾರಿಕೇಡ್‌ ಗಳನ್ನು ಏಕಾಏಕಿ ತೆರವು ಮಾಡಲಾಗಿದೆ. ಇದರಿಂದ ವಾಹನಗಳು ವೇಗದಮಿತಿ ಇಲ್ಲದೇ ಸಂಚರಿಸಲಾರಂಭಿಸಿದ್ದು, ಪಾದಚಾರಿಗಳಿಗೆ ಅಪಘಾತದ ಆತಂಕ ಎದುರಾಗಿದೆ.

ಬಪ್ಪನಾಡು ದೇವಸ್ಥಾನದ ದ್ವಾರದ ಬಳಿ, ಮೂಲ್ಕಿ ಬಸ್‌ ನಿಲ್ದಾಣದ ಹತ್ತಿರ, ಕಾರ್ನಾಡು ಬೈಪಾಸ್‌, ಹಳೆಯಂಗಡಿ ಮುಖ್ಯ ಜಂಕ್ಷನ್‌, ಪಾವಂಜೆ ದೇವಸ್ಥಾನದ ಪ್ರದೇಶ, ಮುಕ್ಕದ ಮುಖ್ಯ ಜಂಕ್ಷನ್‌ನಲ್ಲಿ ವಿವಿಧ ಸಂಘ – ಸಂಸ್ಥೆಗಳು, ವ್ಯಾಪಾರಿಗಳು ಸಂಚಾರಿ ಪೊಲೀಸರ ವಿನಂತಿಯಂತೆ ನೀಡಿದ್ದ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು. ಈ ಪ್ರದೇಶದಲ್ಲಿ ಅಪಘಾತಗಳು ಸಹ ಸಾಕಷ್ಟು ನಿಯಂತ್ರಣದಲ್ಲಿತ್ತು. ಇದನ್ನು ಸ್ಥಳೀಯ ರಿಕ್ಷಾ ಚಾಲಕರು, ವ್ಯಾಪಾರಿಗಳು, ಸೇವಾ ಸಂಸ್ಥೆಗಳ ಪ್ರಮುಖರು ಬೆಳಗ್ಗೆ ಅಳವಡಿಸಿ, ರಾತ್ರಿ ಸಮಯದಲ್ಲಿ ತೆರವು ಮಾಡುತ್ತಿದ್ದರು.

ಒಂದು ಮೂಲದ ಪ್ರಕಾರ ಹಿರಿಯ ಅಧಿಕಾರಿಗಳು ಜಿಲ್ಲೆಗೆ ಭೇಟಿ ನೀಡುವುದರಿಂದ ಈ ವ್ಯವಸ್ಥೆ ಆಗಿದೆ ಎಂದು ಹೇಳಿಕೊಂಡರೂ ಅದನ್ನು ಅಧಿಕಾರಿಗಳೇ ಅಲ್ಲಗಳೆಯುತ್ತಾರೆ. ಉನ್ನತ ಅಧಿಕಾರಿಗಳ ಸೂಚನೆಯನ್ನು ಸಂಚಾರಿ ಪೊಲೀಸರು ಪಾಲಿಸಿದ್ದಾರೆ ಎಂದು ಹೇಳಲಾಗಿದೆ. ಎರಡು ದಿನಗಳಲ್ಲಿ ಬಪ್ಪನಾಡು ಹಾಗೂ ಮೂಲ್ಕಿ ಬಸ್‌ ನಿಲ್ದಾಣದ ಮುಖ್ಯ ಜಂಕ್ಷನ್‌ನಲ್ಲಿ ಟಿಪ್ಪರ್‌ ಹಾಗೂ ಇನೋವಾ ಕಾರು ಮಗುಚಿ ಬಿದ್ದ ಘಟನೆಯೂ ಸಂಭವಿಸಿವೆ. ಹಳೆಯಂಗಡಿ ಜಂಕ್ಷನ್‌ನಲ್ಲಿಯೂ ಸಣ್ಣ ಪುಟ್ಟ ಅಪಘಾತದ ಘಟನೆಗಳೂ ನಡೆದಿದ್ದು ಇದಕ್ಕೆ ವೇಗ ನಿಯಂತ್ರಕ ಇಲ್ಲದೇ ಇರುವುದು ಕಾರಣ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಹೊರಗಿನ ಪ್ರಯಾಣಿಕರಿಗೆ ತೊಂದರೆ

ಮಳೆಗಾಲದ ಸಮಯದಲ್ಲಿ ಆಗಮಿಸುವ ಹೊರಗಿನ ವಾಹನ ಪ್ರಯಾ ಣಿಕರಿಗೆ ಬ್ಯಾರಿಕೇಡ್‌ಗಳಿಂದ ತೊಂದರೆಯಾಗುತ್ತಿದೆ. ಸಂಚಾರದ ನಿಯಂತ್ರಣ ಇಲ್ಲದೇ ಬ್ಯಾರಿಕೇಡ್‌ಗಳಿಗೆ ಢಿಕ್ಕಿ ಹೊಡೆದು ಸಾಕಷ್ಟು ಸಾವು ನೋವು ಸಂಭವಿಸುತ್ತವೆ. ಸರಿಯಾದ ರಿಫ್ಲೆಕ್ಟರ್‌ ಸಹ ಇರುವುದಿಲ್ಲ, ಮುರಿದಿರುವ ಬ್ಯಾರಿಕೇಡ್‌ ಗಳು ಸಹ ಹೆದ್ದಾರಿ ಸಂಚಾರಕ್ಕೆ ಅಡಚಣೆಯಾಗಿದೆ. ಖಾಸಗಿ ಜಾಹೀರಾತುಗಳನ್ನು ಅಳವಡಿಸಿರುವುದೂ ಕಂಡು ಬಂದಿದೆ. ಕೆಲವರು ಅಂಗಡಿಗಳ ಮುಂದೆ ಅಕ್ರಮವಾಗಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ಪಾರ್ಕಿಂಗ್‌ಗೆ ತೊಂದರೆ ಕೊಡುವುದು ಕಂಡು ಬಂದಿದೆ. ಮುಖ್ಯ ಜಂಕ್ಷನ್‌ಗಳಲ್ಲಿ ಅಗತ್ಯವಿದ್ದಲ್ಲಿ ಚರ್ಚಿಸಿ ಅಳವಡಿಸುವ ಚಿಂತನೆ ಮಾಡುತ್ತೇವೆ. -ಹರಿರಾಮ್‌ ಶಂಕರ್‌, ಡಿಸಿಪಿ ಕಾನೂನು ಮತ್ತು ಸುವ್ಯವಸ್ಥೆ ಕಮಿಷನರೆಟ್‌, ಮಂಗಳೂರು

ನಾಗರಿಕರ ಬೇಡಿಕೆಗೆ ಸ್ಪಂದನೆ  

ಹಳೆಯಂಗಡಿಯ ಮುಖ್ಯ ಜಂಕ್ಷನ್‌ನಲ್ಲಿ ಏಕಾಏಕಿ ಬ್ಯಾರಿಕೇಡ್‌ ತೆರವು ಮಾಡಿರುವುದರಿಂದ ಸಾಕಷ್ಟು ದೂರುಗಳು ಸ್ಥಳೀಯ ರಿಕ್ಷಾ ಚಾಲಕರ ಸಹಿತ ನಿತ್ಯ ಪ್ರಯಾಣಿಕರಿಂದ ಬಂದಿವೆ. ದೂರವಾಣಿ ಮೂಲಕ ಪೊಲೀಸ್‌ ಅಧಿಕಾರಿಗಳಲ್ಲಿ ಮಾತನಾಡಿದ್ದೇನೆ, ಅಧಿಕೃತವಾಗಿ ಪಂಚಾಯತ್‌ನಿಂದ ಪತ್ರವನ್ನು ನೀಡುವಂತೆ ಕ್ರಮ ಕೈಗೊಳ್ಳಲಾಗಿದೆ. ಅಪಾಯಕಾರಿ ಜಂಕ್ಷನ್‌ನಲ್ಲಿ ವೇಗ ನಿಯಂತ್ರಣ ಅತೀ ಅಗತ್ಯವಾಗಿ ಬೇಕಾಗಿದೆ. -ಪೂರ್ಣಿಮಾ, ಅಧ್ಯಕ್ಷರು, ಗ್ರಾ.ಪಂ., ಹಳೆಯಂಗಡಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.