“ವಿಶ್ವ ಕೊಂಕಣಿ ಸರದಾರ’ನಿಗೆ ಪ್ರತಿಮೆಯ ಗೌರವ: ಉತ್ತರ ಪ್ರದೇಶದಲ್ಲಿ 6.5 ಅಡಿ ಎತ್ತರದ ಪ್ರತಿಮೆ ನಿರ್ಮಾಣ


Team Udayavani, Jan 26, 2023, 7:20 AM IST

“ವಿಶ್ವ ಕೊಂಕಣಿ ಸರದಾರ’ನಿಗೆ ಪ್ರತಿಮೆಯ ಗೌರವ: ಉತ್ತರ ಪ್ರದೇಶದಲ್ಲಿ 6.5 ಅಡಿ ಎತ್ತರದ ಪ್ರತಿಮೆ ನಿರ್ಮಾಣ

ಮಂಗಳೂರು: ವಿಶ್ವ ಕೊಂಕಣಿ ಕೇಂದ್ರದ ರೂವಾರಿ, ವಿಶ್ವ ಕೊಂಕಣಿ ಸರದಾರ ಬಿರುದಾಂಕಿತ ದಿ| ಬಸ್ತಿ ವಾಮನ ಶೆಣೈ ಅವರ ಸಾರ್ಥಕ ಸಾಧನೆಯನ್ನು ಶಾಶ್ವತ ವಾಗಿರಿಸುವ ಆಶಯದಿಂದ ವಿಶ್ವ ಕೊಂಕಣಿ ಕೇಂದ್ರವು ಲೋಹದ ಪ್ರತಿಮೆ ನಿರ್ಮಿಸಿ ಗೌರವ ಸಲ್ಲಿಸಲು ನಿರ್ಧರಿಸಿದೆ.

ಕೊಂಕಣಿ ಭಾಷೆ, ಸಾಹಿತ್ಯ, ಸಂಸ್ಕೃತಿ, ಸಮು ದಾಯದ ಶ್ರೇಯಸ್ಸು ಮತ್ತು ಸಂಘಟನೆಗಾಗಿ ಶ್ರಮಿಸಿದ್ದ ಅವರು ಕೊಂಕಣಿ ಸಾರಸತ್ವ ಲೋಕದಲ್ಲಿ ಅಪಾರ ಮನ್ನಣೆ, ಗೌರವಾದಾರಗಳಿಗೆ ಪಾತ್ರರಾಗಿದ್ದರು.

ಕೊಂಕಣಿ ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಿದ ನೆನಪಿನಲ್ಲಿ ನಗುಮೊಗ, ವಿನಮ್ರ ನಿಲುವಿನ ದಿ| ಬಸ್ತಿ ವಾಮನ ಶೆಣೈ ಅವರನ್ನು ಯಥಾವತ್‌ ಬಿಂಬಿಸುವ ಹಿತ್ತಾಳೆಯ 250 ಕೆ.ಜಿ. ತೂಕ
ಹಾಗೂ 6.5 ಅಡಿ ಎತ್ತರದ ಪ್ರತಿಮೆಯು ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದ ಮುಖ ಮಂಟಪದಲ್ಲಿ ಅನಾವರಣಕ್ಕೆ ಸಜ್ಜು ಗೊಂಡಿದೆ.

ಮಂಗಳೂರಿನ ವಿಭಿನ್‌ ಸಂಸ್ಥೆಯ ಉಸ್ತುವಾರಿಯಲ್ಲಿ ಈ ಪ್ರತಿಮೆಯನ್ನು ಉತ್ತರ ಪ್ರದೇಶದ ಅಲೀಘರ್‌ನ ಲೋಹ ಶಾಲೆಯಲ್ಲಿ ಮೂರು ತಿಂಗಳ ಅವಧಿಯಲ್ಲಿ ನಿರ್ಮಿಸಲಾಗಿದೆ. ಮೊದಲಿಗೆ ಆವೆ ಮಣ್ಣಿನ ಪ್ರತಿಕೃತಿಯನ್ನು ರಚಿಸಿ ಆ ಬಳಿಕ ಹಿತ್ತಾಳೆ ಲೋಹದ ಎರಕ ಹೊಯ್ಯುವ ಮೂಲಕ “ಬಸ್ತಿ ವಾಮನ ಮಾಮು’ ಅವರ ಪ್ರತಿ ರೂಪಕ್ಕೆ ಲೋಹದ ಸ್ಪರ್ಶ ನೀಡಲಾಗಿದೆ. ವಿಶ್ವ ಕೊಂಕಣಿ ಕೇಂದ್ರದ ಮಹಾ ಪೋಷಕ, ಗೌರವ ಅಧ್ಯಕ್ಷ ಡಾ| ಪಿ. ದಯಾನಂದ ಪೈ ಅವರ ಪ್ರಾಯೋಜಕತ್ವದಲ್ಲಿ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ಈ ಪ್ರತಿಮೆ ನಿರ್ಮಾಣವಾಗಿದೆ.

“ಬಸ್ತಿ ಮಾಮ್‌’ ಎಂದೇ ಜನ ಜನಿತ ರಾಗಿದ್ದ ಬಸ್ತಿ ವಾಮನ ಶೆಣೈ, 1991- 92ರಲ್ಲಿ ಕೊಂಕಣಿ ಭಾಷೆಗೆ ಸಾಂವಿಧಾನಿಕ ಸ್ಥಾನಮಾನ ಹಾಗೂ ಕೊಂಕಣಿ ಅಕಾಡೆಮಿ ಸ್ಥಾಪನೆ ಆಗ ಬೇಕೆಂಬ ಬೇಡಿಕೆಗಳನ್ನು ಮುಂದಿಟ್ಟು ಕೊಂಕಣಿ ಜಾಥಾಕ್ಕೆ ಸಿದ್ಧತೆಗಳು ನಡೆಯುತ್ತಿದ್ದಾಗ ತನ್ನ ಬ್ಯಾಂಕ್‌ ವೃತ್ತಿಯಿಂದ ನಿವೃತ್ತಿ ಪಡೆದು ಜಾಥಾದ ಸಂಚಾಲಕತ್ವ ವಹಿಸಿದವರು. ಕೊಂಕಣಿ ಭಾಷೆ ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸೇರ್ಪಡೆಗೊಂಡು ಕ‌ರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಸ್ಥಾಪನೆ‌ಗೊಳ್ಳುವಲ್ಲಿಯೂ ವಾಮನ ಶೆಣೈ ಅವರ ಪಾತ್ರ ಮಹತ್ವದ್ದು. ಸಾಮಾಜಿಕ ಸಂಘಟನೆ, ಹೋರಾಟದ ಜತೆಗೆ ಸಾಹಿತ್ಯ ಕ್ಷೇತ್ರದಲ್ಲಿಯೂ ಸಕ್ರಿಯರಾಗಿದ್ದರು. ಎರಡು ಅವಧಿಗೆ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ವಾಮನ ಶೆಣೈ ಅವರ ಸಾಧನೆಗೆ ಹಲವು ಪ್ರಶಸ್ತಿ, ಸಮ್ಮಾನಗಳ ಜತೆಗೆ ವಿಶ್ವ ಕೊಂಕಣಿ ಸರದಾರ, ವಿಶ್ವ ಸಾರಸ್ವತ ಸರದಾರ ಎಂಬ ಬಿರುದುಗಳು ಪ್ರಾಪ್ತವಾಗಿವೆ. ಮಂಗಳೂರಿನಲ್ಲಿ ವ್ಯವಸ್ಥಿತವಾದ ಕೊಂಕಣಿ ಸಾಹಿತ್ಯ, ಸಾಂಸ್ಕೃತಿಕ ವಿಶ್ವ ಕೊಂಕಣಿ ಕೇಂದ್ರವನ್ನು ದಾನಿಗಳ ನೆರವಿನಲ್ಲಿ ಸಾಕಾರಗೊಳಿಸಿದ ದಿ| ಬಸ್ತಿ ಮಾಮ್‌ ಅವರ ಪ್ರತಿಮೆ ಅದೇ ಕೇಂದ್ರದಲ್ಲಿ ಕಂಗೊಳಿಸಲಿದೆ.

ವಿಶ್ವ ಕೊಂಕಣಿ ಸರದಾರ ಬಸ್ತಿ ವಾಮನ ಶೆಣೈ ಅವರ‌ ಎಂದಿನ ವಿನಮ್ರ ನಿಲುವಿನ ಈ ವಿಗ್ರಹ ಸ್ವರೂಪ ಯಥಾವತ್ತಾಗಿ ಬಿಂಬಿತವಾಗಿದ್ದು ಅವರ ನಿಕಟವರ್ತಿಗಳಿಗೆ, ಅಭಿಮಾನಿಗಳಿಗೆ ಇದು ಸ್ಫೂರ್ತಿದಾಯಕವಾಗಿದೆ. ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ ಫೆ. 8ರಂದು ಸಂಜೆ 5ಕ್ಕೆ ಗೋವಾ ಮುಖ್ಯಮಂತ್ರಿ ಡಾ| ಪ್ರಮೋದ್‌ ಸಾವಂತ್‌ ಹಾಗೂ ಗಣ್ಯರ ಸಮ್ಮುಖದಲ್ಲಿ ಪ್ರತಿಮೆ ಅನಾವರಣಗೊಳ್ಳಲಿದೆ.
– ಗುರುದತ್‌ ಬಂಟ್ವಾಳಕರ್‌, ಸಿಇಒ, ವಿಶ್ವ ಕೊಂಕಣಿ ಕೇಂದ್ರ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.