ಬೆಳಂದೂರು: ಉದ್ಯೋಗ ಖಾತರಿಯಿಂದ ಕಿಂಡಿ ಅಣೆಕಟ್ಟು
Team Udayavani, Dec 8, 2017, 4:09 PM IST
ಬೆಳಂದೂರು: ಇಲ್ಲಿಯ ಗ್ರಾಮ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಮೂಲಕ ಗ್ರಾ.ಪಂ. ವ್ಯಾಪ್ತಿಯ ಕೂಂಕ್ಯ ಎಂಬಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸುವ ಮೂಲಕ ಜಲ ಸಂರಕ್ಷಣೆಯ ಜತೆಗೆ, ನೀರಿನ ಅಭಾವ ದಿಂದ ಕೃಷಿಗೆ ಹಾನಿಯಾಗುವ ಆತಂಕವನ್ನು ದೂರ ಮಾಡಿದ್ದಾರೆ.
ತೀವ್ರ ಬಿಸಿಲಿನ ಕಾರಣಕ್ಕೆ ಕೆರೆಗಳಲ್ಲಿ ನೀರು ಬತ್ತಿಹೋಗಿ ಕೃಷಿಗೆ ನೀರುಣಿಸಲು ಕಷ್ಟಕರವಾಗುತ್ತದೆ. ಹೀಗಾಗಿ, ಸುಮ್ಮನೆ ಹರಿದು ವ್ಯರ್ಥವಾಗುತ್ತಿರುವ ನೀರನ್ನು ಒಂದೆಡೆ ಶೇಖರಿಸಿಕೊಂಡು ಕೃಷಿಗೆ ಬಳಸುವ ಜತೆಗೆ ಮಣ್ಣಿನಲ್ಲಿ ನೀರು ಇಂಗಿ ಸುತ್ತಲಿನ ತೋಟವನ್ನು ಸದಾ ತಂಪಾಗಿ ಮಾಡುತ್ತಿದೆ.
ಬೆಳಂದೂರು ಗ್ರಾಮದ ಕೂಂಕ್ಯ ಎಂಬಲ್ಲಿನ ಕುಕ್ಕಪ್ಪ ಗೌಡರ ಮನೆ ಸಮೀಪ ಈ ಕಿಂಡಿ ಅಣೆಕಟ್ಟನ್ನು ನಿರ್ಮಿಸಲಾಗಿದೆ. ಸುಮಾರು 4.75 ಲಕ್ಷ ರೂ. ವೆಚ್ಚದಲ್ಲಿ ಉದ್ಯೋ ಖಾತರಿ ಯೋಜನೆಯ ಮೂಲಕ ಕಿಂಡಿ ಅಣೆಕಟ್ಟಿನ ನಿರ್ಮಾಣ ಮಾಡಲಾಗಿದೆ. ಸಾಮಗ್ರಿ ವೆಚ್ಚವಾಗಿ 3,39,728 ರೂ. ಹಾಗೂ ಕೂಲಿ ಮೊತ್ತವಾಗಿ 1,23,835 ರೂ. ಖರ್ಚು ಮಾಡಲಾಗಿದೆ. ಕಾಮಗಾರಿಗೆ 524 ಮಾನವ ದಿನಗಳನ್ನು ಬಳಸಿಕೊಳ್ಳಲಾಗಿದೆ.
ಜಲ ಸಂರಕ್ಷಣೆಯ ಮೂಲ
ಒಂದು ಕಡೆ ಕಿಂಡಿ ಅಣೆಕಟ್ಟನ್ನು ನಿರ್ಮಿಸಿದರೆ ಆ ಪ್ರದೇಶದ ಕೆರೆ, ಬಾವಿಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗುತ್ತದೆ. ಅನೇಕ ಕಡೆಗಳಲ್ಲಿ ಕಿಂಡಿ ಅಣೆಕಟ್ಟು ಇದ್ದರೂ ಹಲಗೆ ಅಳವಡಿಸದೆ ಹಾಗೇ ಇಡಲಾಗುತ್ತದೆ. ಇವುಗಳ ಬಳಕೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕಿದೆ. ಜತೆಗೆ ಸ್ಥಳೀಯಾಡಳಿತಗಳು ಇವುಗಳ ಅಭಿವೃದ್ಧಿ ಕುರಿತು ಗಮನ ಹರಿಸುವುದು ಆವಶ್ಯಕ.
15 ಮನೆಯವರಿಗೆ ಉಪಯೋಗ
ಉದ್ಯೋಗ ಖಾತರಿ ಯೋಜನೆಯಿಂದ ಕಿಂಡಿ ಅಣೆಕಟ್ಟು ನಿರ್ಮಿಸಬೇಕೆಂಬ ನಿರ್ದೇಶನದ ಪ್ರಕಾರ ನಾವು ಗ್ರಾ.ಪಂ.ನಿಂದ ಉದ್ಯೋಗ ಖಾತರಿ ಯೋಜನೆ ಮೂಲಕ ಕಿಂಡಿ ಅಣೆಕಟ್ಟು ನಿರ್ಮಿಸಿದ್ದೇವೆ. ಇದರಿಂದ ಸ್ಥಳೀಯ 15 ಮನೆಯವರಿಗೆ ಉಪಯೋಗವಾಗಲಿದೆ. ನೀರಿನ ಸಂರಕ್ಷಣೆಯೂ ಆಗುತ್ತದೆ.
– ಉಮೇಶ್ವರಿ ಅಗಳಿ,
ಅಧ್ಯಕ್ಷೆ, ಬೆಳಂದೂರು ಗ್ರಾ.ಪಂ.
ಪ್ರವೀಣ್ ಚೆನ್ನಾವರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Multi level parking ಇನ್ನೆಷ್ಟು ವರ್ಷ ಬೇಕು? ಬರೀ ಪಾರ್ಕಿಂಗಲ್ಲ, ಶಾಪಿಂಗ್ ಮಾಲೂ ಇದೆ!
ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ
Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡಸದೃಶ ರೀತಿ ಪ್ರಾಣಾಪಾಯದಿಂದ ಪಾರು
Nervous Disease: ಕರಾವಳಿಯಲ್ಲೂ ಬ್ರೈನ್ ಹೆಲ್ತ್ ಕ್ಲಿನಿಕ್ ಕಾರ್ಯಾರಂಭ
Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Tumkur University ಕುಲಸಚಿವ, ಇನ್ಸ್ಪೆಕ್ಟರ್ ವಜಾ ಮಾಡಿ: ಅಶ್ವತ್ಥನಾರಾಯಣ್ ಒತ್ತಾಯ
Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!
Shambhavi ಹೊಳೆಗೆ ಬಿದ್ದು ಬಾಲಕ ಸಾವು-ನಾಲ್ಕು ಮಂದಿ ಮಕ್ಕಳು ತೆರಳಿದ್ದ ವೇಳೆ ಘಟನೆ
Hiriydaka: ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು
Udupi: ಚೆಕ್ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.