ಬೆಳ್ಳಾರೆ ಪೊಲೀಸ್‌ ಠಾಣೆ: ಅಂತಿಮ ಹಂತದಲ್ಲಿ ಪೊಲೀಸ್‌ ಠಾಣೆ ಕಟ್ಟಡ ಕಾಮಗಾರಿ


Team Udayavani, Dec 20, 2022, 5:50 AM IST

ಬೆಳ್ಳಾರೆ ಪೊಲೀಸ್‌ ಠಾಣೆ: ಅಂತಿಮ ಹಂತದಲ್ಲಿ ಪೊಲೀಸ್‌ ಠಾಣೆ ಕಟ್ಟಡ ಕಾಮಗಾರಿ

ಸುಳ್ಯ: ಬೆಳ್ಳಾರೆ ಪೊಲೀಸ್‌ ಠಾಣೆಯ ಹೊಸ ಕಟ್ಟಡ ಕಾಮಗಾರಿ ಕೆಲಸ ಭರದಿಂದ ನಡೆಯುತ್ತಿದ್ದು, ಅಂತಿಮ ಹಂತಕ್ಕೆ ತಲುಪಿದೆ. 1.32 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ.

ಬೆಳ್ಳಾರೆ ಪೊಲೀಸ್‌ ಠಾಣೆ ಮೊದಲು ಸುಳ್ಯ ಪೊಲೀಸ್‌ ಠಾಣೆಯ ಹೊರ ಠಾಣೆಯಾಗಿ ಕಾರ್ಯನಿರ್ವಹಿಸುತ್ತಿತ್ತು. 2016ರ ಆ. 15ರಿಂದ ಪೂರ್ಣ ಪ್ರಮಾಣದ ಪೊಲೀಸ್‌ ಠಾಣೆಯಾಗಿ ಮೇಲ್ದರ್ಜೆಗೇರಿತ್ತು. ಠಾಣೆಯ ಮೊದಲ ಎಸ್‌ಐಯಾಗಿ ಎಂ.ವಿ. ಚೆಲುವಯ್ಯ ಅವರು ಕರ್ತವ್ಯ ನಿರ್ವಹಿಸಿದ್ದರು. ಪ್ರಸ್ತುತ ಎಸ್‌ಐ ಯಾಗಿ ಸುಹಾಸ್‌ ಆರ್‌., ಕ್ರೈಂ ಎಸ್‌ಐಯಾಗಿ ಆನಂದ ಎಂ. ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಹೊಸ ಕಟ್ಟಡ
ಬೆಳ್ಳಾರೆ ಪೊಲೀಸ್‌ ಠಾಣೆಯ ನೂತನ ಠಾಣಾ ಕಟ್ಟಡದ ಕಾಮಗಾರಿ ನಡೆಯುತ್ತಿದೆ. ಈಗಿರುವ ಪೊಲೀಸ್‌ ಠಾಣೆಯಿಂದ ಅಲ್ಪ ದೂರದಲ್ಲಿ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ಬಳಿಯ ಪೊಲೀಸ್‌ ಇಲಾಖೆಗೆ ಸೇರಿದ ಸ್ವಂತ ಜಾಗದ 0.70 ಎಕ್ರೆಯಲ್ಲಿ ಸ್ವಂತ ಕಟ್ಟಡ ನಿರ್ಮಾಣ ಆಗುತ್ತಿದೆ. ಕರ್ನಾಟಕ ರಾಜ್ಯ ಪೊಲೀಸ್‌ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯ 1.32 ಕೋ. ರೂ. ಅನುದಾನದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಉಡುಪಿಯ ಸನತ್‌ ಕುಮಾರ್‌ ರೈ ಸಂತೆಕಟ್ಟೆ ಕಾಮಗಾರಿ ನಿರ್ವಹಿಸುತ್ತಿ¨ªಾರೆ. 2022ರ ಫೆಬ್ರವರಿಯಲ್ಲಿ ಕಾಮಗಾರಿ ಆರಂಭಿಸಲಾಗಿದೆ. ಮುಂದಿನ ಒಂದು ತಿಂಗಳಲ್ಲಿ ಕಾಮಗಾರಿ ಪೂರ್ಣ ಗೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ.

21 ಗ್ರಾಮಗಳ ವ್ಯಾಪ್ತಿ
ಬೆಳ್ಳಾರೆ ಸುಳ್ಯ ತಾ|ನ ಪ್ರಮುಖ ವ್ಯಾವ ಹಾರಿಕ ಕೇಂದ್ರವಾಗಿದ್ದು, ಮುಂದಕ್ಕೆ ಹೋಬಳಿ ಕೇಂದ್ರವಾಗುವ ನಿರೀಕ್ಷೆಯೂ ಇದೆ. ಸುಳ್ಯ ಪೊಲೀಸ್‌ ವೃತ್ತ ವ್ಯಾಪ್ತಿಯಲ್ಲಿರುವ ಬೆಳ್ಳಾರೆ ಪೊಲೀಸ್‌ ಠಾಣೆ ಸುಳ್ಯ ಹಾಗೂ ಕಡಬ ತಾ|ನ ಸವಣೂರು, ಕುದ್ಮಾರು, ಬೆಳಂದೂರು, ಕಾಣಿಯೂರು, ಮುರುಳ್ಯ, ಎಡಮಂಗಲ, ಎಣ್ಮೂರು, ಕಲ್ಮಡ್ಕ, ಮುಪ್ಪೇರಿಯ, ಬಾಳಿಲ, ಕೊಡಿಯಾಲ, ಬೆಳ್ಳಾರೆ, ಪಾಲ್ತಾಡಿ, ಕೊಳ್ತಿಗೆ, ಐವರ್ನಾಡು, ಅಮರಪಟ್ನೂರು, ಅಮರಮುಟ್ನೂರು, ಕಳಂಜ, ಪೆರುವಾಜೆ, ಪುಣcಪ್ಪಾಡಿ, ಕಾಯಿ ಮಣ ಸೇರಿದಂತೆ ಒಟ್ಟು 21 ಗ್ರಾಮಗಳ ವ್ಯಾಪ್ತಿಯನ್ನು ಒಳಗೊಂಡಿದೆ. ಇಲ್ಲಿ ಪೂರ್ಣಪ್ರಮಾಣದ ಠಾಣೆಯಾಗಬೇಕೆಂಂದು ಪತ್ರಿಕೆ ಸರಕಾರದ ಗಮನವನ್ನು ಬಹಳಷ್ಟು ಹಿಂದೆಯೇ ಸೆಳೆದಿತ್ತು.

ಕ್ವಾಟ್ರರ್ಸ್‌ಗೆ ಬೇಡಿಕೆ
ಪ್ರಸ್ತುತ ಬೆಳ್ಳಾರೆ ಪೊಲೀಸ್‌ ಠಾಣೆ ಇಲಾಖೆಗೆ ಸೇರಿದ ಸಣ್ಣ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದೆ. ಅಲ್ಪ ಜಾಗವನ್ನು ಹೊಂದಿರುವ ಇಲ್ಲಿ ಇಕ್ಕಟ್ಟಿನ ಸ್ಥಿತಿಯಲ್ಲಿ ಕೆಲಸ ನಿರ್ವಹಿಸುವ ಅನಿವಾರ್ಯತೆ ಪೊಲೀಸರದ್ದು. ಠಾಣೆಯಲ್ಲಿ ಎರಡು ಎಸ್‌ಐ ಹು¨ªೆ ಭರ್ತಿಯಾಗಿದ್ದು, 30 ಮಂದಿ ಸಿಬಂದಿ ಇ¨ªಾರೆ. ಪೊಲೀಸರಿಗೆ ವಸತಿ ನಿರ್ಮಾಣಕ್ಕೆ ಜಾಗ ಇದ್ದು ಕಟ್ಟಡ ನಿರ್ಮಾಣ ಆಗಬೇಕಿದೆ.

ನಾಮಫ‌ಲಕ ಅಳವಡಿಕೆ
ಈ ನಡುವೆ ಸುಳ್ಯ ತಾ|ನ ಹೋಬಳಿ ಕೇಂದ್ರವಾಗಿರುವ ಪಂಜ ಗ್ರಾ.ಪಂ.ವ್ಯಾಪ್ತಿಯ ಐವತ್ತೂಕ್ಲು ಗ್ರಾಮದ ಸರ್ವೇ ನಂಬರ್‌ 134-2ರಲ್ಲಿ 0.29 ಎಕ್ರೆ ಜಾಗ ಪೊಲೀಸ್‌ ಇಲಾಖೆಗೆ ಸೇರಿದೆ. ಅದು ಸುಬ್ರಹ್ಮಣ್ಯ ಪೊಲೀಸ್‌ ಠಾಣೆಗೆ ಸಂಬಂಧಿಸಿದ ಜಾಗ. ಪೊಲೀಸ್‌ ಇಲಾಖೆ ವತಿಯಿಂದ ಇದೀಗ ಇಲಾಖೆಗೆ ಸೇರಿದ ಜಾಗ ಎಂದು ನಾಮ ಫ‌‌ಲಕ ಅಳವಡಿಸಲಾಗಿದೆ.

ಹೊರ ಠಾಣೆ ಬೇಡಿಕೆ ಬೆಳೆಯುತ್ತಿರುವ ಪಂಜದಲ್ಲಿ ಪೊಲೀಸ್‌ ಹೊರ ಠಾಣೆ ಬೇಕೆಂಬುದು ಇಲ್ಲಿನ ಜನರ ಆಗ್ರಹ. ಈ ಬಗ್ಗೆ ಸರಕಾರಕ್ಕೂ ಮನವಿ ಸಲ್ಲಿಸಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಜಿನ್ನಪ್ಪ ಗೌಡ ಹೇಳಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.