ಬೆಳ್ತಂಗಡಿ: ಮೊಗೆದಷ್ಟು ಬೇಡಿಕೆಗಳು ನಮ್ಮವು


Team Udayavani, Apr 21, 2018, 8:00 AM IST

Namma-Pranalike-600.jpg

ಕೃಷಿ, ಕೈಗಾರಿಕೆಗಳು, ಧಾರ್ಮಿಕ ಸ್ಥಳಗಳು, ಪ್ರವಾಸೀ ತಾಣಗಳು  ಇರುವ ಬೆಳ್ತಂಗಡಿ ದಕ್ಷಿಣ ಕನ್ನಡದ ಗ್ರಾಮಾಂತರ ವಿಧಾನಸಭಾ ಕ್ಷೇತ್ರಗಳಲ್ಲಿ ಮುಖ್ಯವಾದದ್ದು. ಬೆಳ್ತಂಗಡಿ ತಾಲೂಕು ವ್ಯಾಪ್ತಿಯನ್ನೇ ಹೊಂದಿದೆ. ಹಳ್ಳಿ ಮತ್ತು ಅರೆಪಟ್ಟಣ ಪ್ರದೇಶಗಳನ್ನು ಹೆಚ್ಚು ಪ್ರಮಾಣದಲ್ಲಿ ಹೊಂದಿರುವ ಬೆಳ್ತಂಗಡಿ ಕ್ಷೇತ್ರ ನಕ್ಸಲ್‌ ಬಾಧಿತ ಪ್ರದೇಶಗಳನ್ನೂ ಒಳಗೊಂಡಿದೆ. ಇಲ್ಲಿಯ ಜನರ ಬೇಡಿಕೆಗಳು ಹತ್ತು ಹಲವು.

1. ಎಳನೀರು- ಸಂಸೆ ರಸ್ತೆ
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿನ ನಿವಾಸಿಗಳು ತಾಲೂಕು ಕೇಂದ್ರಕ್ಕೆ ಬರಬೇಕಾದರೆ ಸುತ್ತಿಬಳಸಿ ಬರಬೇಕಿದೆ. ದಿಡುಪೆ- ಎಳನೀರು- ಸಂಸೆ ರಸ್ತೆ ಸಂಪರ್ಕ ಸಾಧ್ಯವಾದಲ್ಲಿ ಈ ಪರದಾಟ ತಪ್ಪಲಿದೆ.

2. ಎಂಡೋ – ಶಾಶ್ವತ ಪರಿಹಾರ
ಎಂಡೋಸಲ್ಫಾನ್‌ ಪೀಡಿತರಿಗೆ ಸಮರ್ಪಕ ಸೌಲಭ್ಯ ಕಲ್ಪಿಸುವ ಪ್ರಕ್ರಿಯೆ ನಡೆದಿಲ್ಲ. ವಿಶೇಷ ಆಸ್ಪತ್ರೆ ಕೈಗೂಡಿಲ್ಲ. ಕೇರಳ ಮಾದರಿ ಅಥವಾ ವಿಶೇಷ ಪ್ಯಾಕೇಜ್‌ ನಿಜವಾದ ಎಂಡೋ ಪೀಡಿತರಿಗೆ ಒದಗಿಸಬೇಕಿದೆ.

3. ನಕ್ಸಲ್‌ ಬಾಧಿತ ಪ್ರದೇಶಗಳ ಅಭಿವೃದ್ಧಿ
ಕುತ್ಲೂರು, ನಾರಾವಿ, ನಾವರ, ಸುಲ್ಕೇರಿ, ಸುಲ್ಕೇರಿ ಮೊಗ್ರು, ಶಿರ್ಲಾಲು, ಸವಣಾಲು, ನಡ, ಮಲವಂತಿಗೆ, ನಾವೂರು, ಮಿತ್ತಬಾಗಿಲು ಮೊದಲಾದ ನಕ್ಸಲ್‌ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕಾಗಿದೆ.

4. ರಸ್ತೆ ಅಭಿವೃದ್ಧಿ
ಸೀಟು- ಕಾಯರ್ತೋಡಿ, ಉಜಿರೆ- ಬೆಳಾಲು, ಪರಪ್ಪು- ಕೊಯ್ಯೂರು, ಬಳ್ಳ ಮಂಜ – ಕಲ್ಲೇರಿ, ಕುತ್ರೊಟ್ಟು- ಚಂದ್ಕೂರು, ಸೋಮಂತಡ್ಕ- ಗುಂಡಿರಸ್ತೆ, ರೇಷ್ಮೆರೋಡ್‌ -ಕಿನ್ನಿ ಗೋಳಿ- ಮದ್ದಡ್ಕ ರಸ್ತೆ ಅಭಿವೃದ್ಧಿಗೆ ಒತ್ತು ಬೇಕಿದೆ.

5. ರಾಷ್ಟ್ರೀಯ ಹೆದ್ದಾರಿ 
ಬಂಟ್ವಾಳ ವಿಲ್ಲುಪುರಂ ರಾ. ಹೆ.ತಾಲೂಕಿ ನಲ್ಲಿ ಹಾದು ಹೋಗುತ್ತದೆ. ರಸ್ತೆ ಅಗಲ ಕಿರಿದಾಗಿದ್ದು, ಅಪಘಾತಗಳು ಸಂಭವಿಸುತ್ತಿವೆ. ಬಂಟ್ವಾಳ ಹಾಗೂ ತಾಲೂಕಿನ ರಸ್ತೆ ದ್ವಿಪಥಗೊಳಿಸಲು ಸಂಬಂಧಪಟ್ಟವರಿಗೆ ಒತ್ತಾಯ ಹೇರಬೇಕಿದೆ.

6. ಸರಕಾರಿ ಆಸ್ಪತ್ರೆಗಳ ಅಭಿವೃದ್ಧಿ
ತಾಲೂಕು ಆಸ್ಪತ್ರೆ ಆಧುನೀಕರಣಗೊಳಿಸುವ ಜತೆಗೆ ಸಮರ್ಪಕ ಸಿಬಂದಿ ನಿಯೋಜಿಸಿ ಇಲ್ಲಿಯೇ ಜನರಿಗೆ ಸೌಲಭ್ಯ ದೊರೆಯುವಂತೆ ಮಾಡಬೇಕಿದೆ. ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಬೇಕಿದೆ.

7. ಕ್ರೀಡಾಂಗಣ, ಹಾಸ್ಟೆಲ್‌
ತಾಲೂಕು ಕ್ರೀಡಾಂಗಣ  ಹದಗೆಟ್ಟಿದ್ದು ತಾಲೂಕಿನ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಸಮರ್ಪಕ ಅಭಿವೃದ್ಧಿ ಮಾಡುವ ಜತೆಗೆ ಕ್ರೀಡಾ ಹಾಸ್ಟೆಲ್‌ ತೆರೆದು ತಾಲೂಕಿನ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಬೇಕಿದೆ.

8. ಪ್ರವಾಸೋದ್ಯಮ
ಗಡಾಯಿಕಲ್ಲು, ವೇಣೂರು, ಎರ್ಮಾಯಿ ಜಲಪಾತ, ಆನಡ್ಕ, ಬಂಡಾಜೆ ಜಲಪಾತ, ಶಿಶಿಲ, ಶ್ರೀಕ್ಷೇತ್ರ ಧರ್ಮಸ್ಥಳ, ಸುರ್ಯ, ಸೌತಡ್ಕ ದೇವಸ್ಥಾನ ಮೊದಲಾದ ಪ್ರೇಕ್ಷಣೀಯ ಸ್ಥಳಗಳಿದ್ದು, ಪ್ರವಾಸೋದ್ಯಮ ಕೇಂದ್ರವಾಗಿ ರೂಪಿಸಬೇಕಿದೆ.

9. ನೀರಾವರಿ
ತಾಲೂಕಿನಲ್ಲಿ ಬೇಸಗೆ ವೇಳೆಗೆ ನದಿ ತೊರೆಗಳು ಬತ್ತುತ್ತಿದ್ದು, ಕಿಂಡಿ ಅಣೆಕಟ್ಟು ಗಳನ್ನು ಎಲ್ಲೆಡೆ ನಿರ್ಮಿಸಿ, ತಾಲೂಕಿನಲ್ಲಿ ಅಂತರ್ಜಲ ವೃದ್ಧಿಗೆ ಕ್ರಮಕೈಗೊಳ್ಳಬೇಕಿದೆ.

10. ಮೆಡಿಕಲ್‌, ನರ್ಸಿಂಗ್‌ ಕಾಲೇಜು
ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಸರಕಾರಿ ಮೆಡಿಕಲ್‌ ಹಾಗೂ ನರ್ಸಿಂಗ್‌ ಕಾಲೇಜುಗಳ ಆವಶ್ಯಕತೆ ಇದೆ. ತಾಲೂಕಿನ ವಿದ್ಯಾರ್ಥಿಗಳು ಮಂಗಳೂರು ಮೊದಲಾದೆಡೆ ತೆರಳಿ ಅಭ್ಯಾಸ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

11. ಕೈಗಾರಿಕೆಗಳ ಸ್ಥಾಪನೆ
ಸಣ್ಣ ಹಾಗೂ ಗುಡಿ ಕೈಗಾರಿಕೆಗಳ ಸ್ಥಾಪನೆ ಮಾಡಬೇಕಿದೆ. ಸರಕಾರಿ ಜಾಗ ನಿಯೋಜನೆಯಾಗಿದ್ದರೂ ಬೆಳವಣಿಗೆ ಕಂಡುಬಂದಿಲ್ಲ. ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡಲ್ಲಿ ಜನತೆಗೂ ಅನುಕೂಲವಾಗಲಿದೆ.

12. ಚರಂಡಿ ವ್ಯವಸ್ಥೆ
ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಮಾಡಬೇಕಿದೆ. ಮಳೆ ಬಂದಾಗ ತಾಲೂಕಿನ ವಿವಿಧೆಡೆ ನೀರು ನಿಲ್ಲುತ್ತಿದ್ದು, ಸಮರ್ಪಕವಾಗಿ ಹರಿಯಲು ಕ್ರಮ ಕೈಗೊಳ್ಳಬೇಕಿದೆ.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

Bantwala: ಶರಣ್ ಪಂಪುವೆಲ್ ಗೆ ಸವಾಲು ಹಾಕಿದ ಶರೀಫ್: ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

police

Eid Milad: ರ್‍ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.