ಮನುಕುಲದ ಸೇವೆಯೇ ಅತ್ಯುತ್ತಮ ಕಾರ್ಯ: ಡಾ| ನಾಗಾರ್ಜುನ್
Team Udayavani, Feb 24, 2017, 2:11 PM IST
ಸುಬ್ರಹ್ಮಣ್ಯ: ಮನುಕುಲದ ಸೇವೆಯೇ ಜೀವನದ ಅತ್ಯುತ್ತಮ ಕಾರ್ಯ. ಅದನ್ನು ರೋಟರಿ ಅಂತಾರಾಷ್ಟ್ರೀಯ ಸಂಸ್ಥೆ ಮಾಡುತ್ತಾ ಬರುತ್ತಿದೆ ಎಂದು ರೋಟರಿ ಜಿಲ್ಲೆ ರಾಜ್ಯಪಾಲ ಡಾ| ನಾಗಾರ್ಜುನ್ ಆರ್.ಎಸ್. ನುಡಿದರು.
ಸುಬ್ರಹ್ಮಣ್ಯ ರೋಟರಿ ಕ್ಲಬ್ಗ ಅಧಿಕೃತ ಭೇಟಿ ಸಂದರ್ಭದಲ್ಲಿ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು.
ನೂರ ಹನ್ನೆರಡು ವರ್ಷಗಳ ಹಿಂದೆ ಹುಟ್ಟಿಕೊಂಡ ಈ ಸಂಸ್ಥೆ ಜಗತ್ತಿನಾ ದ್ಯಂತ ಜನಸಾಮಾನ್ಯರಿಗೆ ಸೇವೆ ನೀಡು ತ್ತಿರುವುದು ಶ್ಲಾಘನೀಯ. ಈ ನಿಟ್ಟಿನಲ್ಲಿ ರೋಟರಿ ಕ್ಲಬ್ ಸುಬ್ರಹ್ಮಣ್ಯ ಕಾರ್ಯ ನಿರ್ವಹಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಭಾಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ಪ್ರೊ| ಬಾಲಕೃಷ್ಣ ಪೈ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಕಡಬ, ಬಿಳಿನೆಲೆ ಕೈಕಂಬ ಹಾಗೂ ಏನೆಕಲ್ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಇ-ಲರ್ನಿಂಗ್ ಕಿಟ್ಅನ್ನು ಕೊಡುಗೆಯಾಗಿ ನೀಡಿದ ಕೇಸರಿ ದಯಾನಂದ ನಾಯಕ್ ದಂಪತಿಯನ್ನು ಸಮ್ಮಾನಿಸಲಾಯಿತು. ಸಮಾರಂಭಕ್ಕೂ ಮುನ್ನ ಓಂತ್ರಡ್ಕ, ಕಡಬ, ಮರ್ಧಾಳ, ಬಿಳಿನೆಲೆ-ಕೈಕಂಬ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಹಾಗೂ ಕೆಎಸ್ಎಸ್ ಕಾಲೇಜಿಗೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ರಾಜ್ಯಪಾಲರು ಹಸ್ತಾಂತರಿಸಿದರು.
ಕುಲ್ಕುಂದದಲ್ಲಿ ಬಡವರ ಮನೆಗೆ ಕ್ಲಬ್ನಪೂರ್ವಾಧ್ಯಕ್ಷ ಮಾಯಿಲಪ್ಪ ಸಂಕೇಶರು ನೀಡಿದ ರೋಟರಿ ಜ್ಯೋತಿಯನ್ನು ಉದ್ಘಾಟಿಸಲಾಯಿತು. ಬಿಳಿನೆಲೆ ಗೋಪಾಲಕೃಷ್ಣ ಪ್ರೌಢಶಾಲೆಗೆ ನ್ಯಾಪ್ಕಿನ್ಸ್ ಬರ್ನಿಂಗ್ ಕಿಟ್ಅನ್ನು ಸಂಸ್ಥೆಯು ಹಸ್ತಾಂತರಿಸಿತು. ಏನೆಕಲ್ನ ಪ್ರತಿಭಾನ್ವಿತ ಕಲಾವಿದರನ್ನು ಗೌರವಿಸಲಾಯಿತು.ಸವಣೂರು ವಿದ್ಯಾರಶ್ಮಿ ವಿದ್ಯಾ ಸಂಸ್ಥೆಗಳ ಸಂಚಾಲಕ ಸೀತಾರಾಮ ರೈ ಕೆ., ರೋಟರಿ ಅಸಿಸ್ಟೆಂಟ್ ಗವರ್ನರ್ ಶ್ಯಾಮಸುಂದರ ರೈ, ವಲಯ ಪ್ರತಿನಿಧಿ ಆಸ್ಕರ್ ಆನಂದ್, ನಿಕಟ ಪೂರ್ವಾಧ್ಯಕ್ಷ ಗಿರಿಧರ ಸ್ಕಂದ, ನಿಯೋಜಿತ ಅಧ್ಯಕ್ಷ ವೆಂಕಟೇಶ್ ಎಚ್.ಎಲ್., ಇನ್ನರ್ವೀಲ್ ಕ್ಲಬ್ ಅಧ್ಯಕ್ಷೆ ಸೌಮ್ಯಾ ಬಿ. ಪೈ, ಗೋಪಾಲ್ ಎಣ್ಣೆಮಜಲು ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯದರ್ಶಿ ವಿಜಯಕುಮಾರ್ ಅಮೈ ವರದಿ ವಾಚಿಸಿದರು. ಬುಲೆಟಿನ್ ಸಂಪಾದಕ ಭರತ್ ನೆಕ್ರಾಜೆ ನೇತೃತ್ವದಲ್ಲಿ ತಂದ ಬುಲೆಟಿನ್ ಅನ್ನು ಶಾಮಸುಂದರ ರೈ ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ರೋಟರಿ ರಾಜ್ಯಪಾಲ ದಂಪತಿಯನ್ನು ಸುಬ್ರಹ್ಮಣ್ಯ ಕ್ಲಬ್ ವತಿಯಿಂದ ಸಮ್ಮಾನಿಸಲಾಯಿತು.ಪ್ರೊ| ಬಾಲಕೃಷ್ಣ ಪೈ ಸ್ವಾಗತಿಸಿ, ನಿಕಟಪೂರ್ವ ಅಸಿಸ್ಟೆಂಟ್ ಗವರ್ನರ್ ರಾಮಕೃಷ್ಣ ಮಲ್ಲಾರ ನಿರೂಪಿಸಿದರು. ಕಾರ್ಯದರ್ಶಿ ವಿಜಯ ಕುಮಾರ್ ಅಮೈ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.