![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 10, 2023, 7:02 AM IST
ಸುಬ್ರಹ್ಮಣ್ಯ: ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯೆ ಭಾರತಿ ಮೂಕಮಲೆ ಅವರು ಜ. 5ರಂದು ಸುಬ್ರಹ್ಮಣ್ಯ ಠಾಣೆಗೆ ಪ್ರಿಯಕರನೊಂದಿಗೆ ಹಾಜರಾಗಿ ಆತನೊಂದಿಗೇ ತೆರಳಿದ್ದಾರೆ.
ಭಾರತಿ ಮೂಕಮಲೆ ತನ್ನ ಪ್ರಿಯಕರ ನಂದನ್ ಮತ್ತು ಅವರ ನ್ಯಾಯವಾದಿ ಮುಖಾಂತರ ಸುಬ್ರಹ್ಮಣ್ಯ ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ನಂದನ್ನೊಂದಿಗೆ ಜೀವನ ಮುಂದುವರೆಸುವ ನಿರ್ಧಾರ ಪ್ರಕಟಿಸಿದ್ದಾರೆ. ಠಾಣೆಯಲ್ಲಿ ತನ್ನ ನಿರ್ಧಾರವನ್ನು ಲಿಖೀತ ರೂಪದಲ್ಲಿ ಬರೆದು ಕೊಟ್ಟು ನಂದನ್ನೊಂದಿಗೆ ತೆರಳಿದ್ದಾರೆ.
ತನ್ನಿಬ್ಬರು ಸಣ್ಣ ಹೆಣ್ಣು ಮಕ್ಕಳನ್ನು, ಪತಿಯನ್ನು ತೊರೆದು ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಭಾರತಿ ಮತ್ತವರ ಪ್ರಿಯಕರ ನಂದನ್ ಎಷ್ಟೇ ಹುಡುಕಾಡಿದರೂ ಸಿಕ್ಕಿರಲಿಲ್ಲ. ತಿಂಗಳ ಹಿಂದೆ ವೀಡಿಯೋ ಮಾಡಿ ಹರಿಯಬಿಟ್ಟಿದ್ದ ಭಾರತಿ, ತಾನು ಪ್ರಿಯಕರನೊಂದಿಗೆ ಇರುವುದಾಗಿ ತಿಳಿಸಿದ್ದು, ತನ್ನನ್ನು ಹುಡುಕುವ ಕಾರ್ಯ ಮಾಡಬೇಡಿ ಎಂದು ಕೇಳಿ ಕೊಂಡಿದ್ದರು.
ಇದಾಗ್ಯೂ ಸುಬ್ರಹ್ಮಣ್ಯ ಪೊಲೀಸರು ಅವರ ಇರುವಿಕೆಯನ್ನು ಪತ್ತೆ ಮಾಡಲು ಕಾರ್ಯಾಚರಣೆ ನಡೆಸಿದ್ದರು. ಆದರೆ ಆ ಕಾರ್ಯ ಫಲಪ್ರದವಾಗಿರಲಿಲ್ಲ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.