Yakshagana ಹೊಸ ಮೇಳದಿಂದ ಧರ್ಮ, ಕ್ಷೇತ್ರ ಬೆಳಗಲಿ:ಹರಿನಾರಾಯಣ ಆಸ್ರಣ್ಣ

ಹಳೇಕೋಟೆ ಮಾರಿಯಮ್ಮ ಬೋಳಾರ ಮೇಳ ಉದ್ಘಾಟನೆ

Team Udayavani, Dec 10, 2023, 11:21 PM IST

Yakshagana ಹೊಸ ಮೇಳದಿಂದ ಧರ್ಮ, ಕ್ಷೇತ್ರ ಬೆಳಗಲಿ:ಹರಿನಾರಾಯಣ ಆಸ್ರಣ್ಣ

ಮಂಗಳೂರು: ಹಳೇ ಕೋಟೆ ಶ್ರೀ ಮಾರಿಯಮ್ಮ ದೇವಸ್ಥಾನ ವತಿಯಿಂದ ಹಳೇಕೋಟೆ ಶ್ರೀ ಮಾರಿಯಮ್ಮ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಆರಂಭಿಸಲಾಗಿದ್ದು, ಬೋಳಾರ ಮೇಳದ ಉದ್ಘಾಟನೆ, ಮೇಳದ ಪ್ರಥಮ ದೇವರ ಸೇವಾ ಬಯಲಾಟ ಹಾಗೂ ಸಮ್ಮಾನ ಸಮಾರಂಭ ಶನಿವಾರ ರಾತ್ರಿ ನೆರವೇರಿತು.

ಶತಮಾನದ ಚರಿತ್ರೆ ಹೊಂದಿರುವ ಪ್ರಾಚೀನ ಬೋಳಾರ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಕಟೀಲು ಆನುವಂಶಿಕ ಅರ್ಚಕ ಹರಿನಾರಾಯಣ ಆಸ್ರಣ್ಣ ಅವರು, ಯಕ್ಷಗಾನ ಇಂದು ಸೊರಗುತ್ತಿರುವುದು ನಿಜ, ಇಂತಹ ಸಂದರ್ಭದಲ್ಲೂ ಪುರಾತನ ಬೋಳಾರ ಮೇಳವನ್ನು ಈಗ ಮತ್ತೆ ಆರಂಭಿಸಲು ಹೊರಟಿರುವುದಕ್ಕೆ ಅಭಿನಂದನೆಗಳು, ಈ ಮೇಳದ ಮೂಲಕ ಧರ್ಮ, ಭಕ್ತಿಯ ಪ್ರಸಾರವಾಗಲಿ, ಜತೆಗೆ ಕ್ಷೇತ್ರವೂ ಮತ್ತಷ್ಟು ಬೆಳಗಲಿ ಎಂದು ಹಾರೈಸಿದರು.

ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ್‌ ಶೆಟ್ಟಿ ಅವರು ಮಾತನಾಡಿ, ಧರ್ಮದ ಬಗ್ಗೆ ಅರಿವು ಮೂಡಿಸುವುದಕ್ಕೆ ಯಕ್ಷಗಾನ ಅತ್ಯುತ್ತಮ ಮಾಧ್ಯಮ, ಸಮಾಜದ ಮುಂದೆ ರಾಮನಂತಹ ಆದರ್ಶವನ್ನು ಸಶಕ್ತವಾಗಿ ಇರಿಸಬಲ್ಲದಾದರೆ ಅದು ಯಕ್ಷಗಾನದ ಹಿರಿಮೆ ಎಂದರು.

ಊರಿನವರು ಹೊಸ ಮೇಳಕ್ಕೆ ಪ್ರೋತ್ಸಾಹ ಕೊಡಬೇಕು, ಮೇಳದ ವರೂ ಪೌರಾಣಿಕ ಪ್ರಸಂಗಗಳ ಜತೆಗೆ ಉತ್ತಮ ಸಂದೇಶವಿರುವ ಸಾಮಾಜಿಕ ಪ್ರಸಂಗಗಳನ್ನೂ ಪ್ರದರ್ಶಿಸಬೇಕು. ಮೇಳದವರೂ ಗುಣಮಟ್ಟ ಕಾಯ್ದುಕೊಂಡು, ಶಿಸ್ತು, ನಿಯಮಗಳನ್ನು ಕಾಯ್ದುಕೊಂಡು ಮುನ್ನಡೆಸುವುದು ಅತ್ಯಗತ್ಯ ಎಂದು ಹೇಳಿದರು.

ಶ್ರೀ ಕ್ಷೇತ್ರ ಉದ್ಯಾವರ ಮಾಡದ ಅಣ್ಣ ದೈವದ ಪಾತ್ರಿ ರಾಜ ಬೆಳ್ಚಪ್ಪಾಡ ಉದ್ಯಾವರ ಅವರು ಮಾತನಾಡಿ, ತಟಸ್ಥವಾಗಿದ್ದ ಮೇಳ ತಾಯಿ ಮಾರಿಯಮ್ಮನ ಆಶೀರ್ವಾದದಿಂದ ಮತ್ತೆ ಚೈತನ್ಯ ಪಡೆದಿದೆ, ಇದು ಯಶಸ್ವಿಯಾಗಿ ಮುಂದುವರಿಯಲಿ ಎಂದು ಶುಭ ಹಾರೈಸಿದರು.

ಮಾರಿಯಮ್ಮ ಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ. ಅಶೋಕ್‌ ಕುಮಾರ್‌ ಅಷ್ಟಮಂಗಲ ಪ್ರಶ್ನೆಯ ಫಲವಾಗಿ ಈ ಮೇಳ ಮತ್ತೆ ಆರಂಭಗೊಂಡಿದ್ದು ಎಲ್ಲರೂ ಹೊಸ ಮೇಳವನ್ನು ಪ್ರೋತ್ಸಾಹಿಸಬೇಕು ಎಂದರು.

ಮುಖ್ಯ ಅತಿಥಿಗಳಾಗಿ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ಸೀತಾರಾಮ ಎ., ಸಾಗರ್‌ ಪ್ರೊಜೆಕ್ಟ್‌ನ ಗಿರಿಧರ ಶೆಟ್ಟಿ, ಮನಪಾ ಸದಸ್ಯರಾದ ಭಾನುಮತಿ, ರೇವತಿ ಉಪಸ್ಥಿತರಿದ್ದರು.

ಹಿರಿಯ ಯಕ್ಷಗಾನ ಕಲಾವಿದರಾದ ಶಿವರಾಮ ಜೋಗಿ ಬಿ.ಸಿ.ರೋಡ್‌ ಹಾಗೂ ಬೋಳಾರ ಸುಬ್ಬಯ್ಯ ಶೆಟ್ಟಿ ಅವರನ್ನು ಮೇಳದ ಪರವಾಗಿ ಸಮ್ಮಾನಿಸಲಾಯಿತು. ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಶ್ರೀಧರ್‌ ಎಸ್‌. ಸ್ವಾಗತಿಸಿ ಸುಭಾಷ್‌ ಕಾಂಚನ್‌ ವಂದಿಸಿದರು. ಮೋಹನ್‌ರಾಜ್‌ ಬೋಳಾರ ನಿರೂಪಿಸಿದರು.

ಈ ವರ್ಷದ ಪ್ರಸಂಗಗಳು
ಶ್ರೀ ಬೋಳಾರ ಕ್ಷೇತ್ರ ಮಹಾತ್ಮೆ, ಛಲದಂಕ ಉತ್ತಂಕ, ಬಂಡಿದೈವ ಪಿಲ್ಚಂಡಿ, ಸಮರಸನಾತನಿ, ಸಿರಿದೇವಿ ಮಾತೆ¾, ಶ್ರೀ ದೇವಿ ಮಹಾತ್ಮೆ, ಮಂತ್ರ ಜಾವದೆ, ಸತ್ಯೊದ ಸ್ವಾಮಿ ಕೊರಗಜ್ಜ, ಶಬರಿಮಲೆ ಅಯ್ಯಪ್ಪ.

ಟಾಪ್ ನ್ಯೂಸ್

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.