ಗ್ರಾಮಗಳಲ್ಲಿ ತೆರೆದುಕೊಳ್ಳುತ್ತಿದೆ “ಪುಸ್ತಕ ಗೂಡು’!


Team Udayavani, Oct 8, 2021, 8:00 AM IST

ಗ್ರಾಮಗಳಲ್ಲಿ ತೆರೆದುಕೊಳ್ಳುತ್ತಿದೆ “ಪುಸ್ತಕ ಗೂಡು’!

ಮಂಗಳೂರು: ಗ್ರಾಮೀಣ ಜನರಲ್ಲಿ ಅಕ್ಷರ ಪ್ರೀತಿ ಮೂಡಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ್‌ಗಳನ್ನು “ಪುಸ್ತಕ ಗ್ರಾಮ’ಗಳಾಗಿ ಬದಲಾಯಿಸಲು “ಪುಸ್ತಕ ಗೂಡು’ ಎಂಬ ವಿನೂತನ ಪ್ರಯೋಗವು ರಾಜ್ಯದಲ್ಲಿಯೇ ಮೊದಲ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನುಷ್ಠಾನಗೊಂಡಿದೆ.

ಬಸ್‌ ನಿಲ್ದಾಣ, ಅಂಚೆ ಕಚೇರಿ, ಗ್ರಾ.ಪಂ. ಕಚೇರಿ, ಸಾರ್ವಜನಿಕ ಉದ್ಯಾನ, ಮಾರುಕಟ್ಟೆ ಪ್ರದೇಶಗಳಲ್ಲಿ ಗೂಡು ನಿರ್ಮಿಸಿ ಪುಸ್ತಕಗಳನ್ನು ಇಟ್ಟು ಜನರಿಗೆ ಸುಲಭವಾಗಿ ಓದಲು ನೆರವಾಗುವ ಪರಿಕಲ್ಪನೆಯೇ ಪುಸ್ತಕ ಗೂಡು. ದ.ಕ. ಜಿಲ್ಲಾ ಪಂಚಾಯತ್‌ ಸಿಇಒ ಡಾ| ಕುಮಾರ್‌ ಅವರ ಕನಸಿನಂತೆ ಈ ಯೋಜನೆಯನ್ನು ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಅನುಷ್ಠಾನಿಸಲು ಉದ್ದೇಶಿಸಲಾಗಿದೆ.

ಉಳಾಯಿಬೆಟ್ಟಿನಲ್ಲಿ ಆರಂಭ:

ಪೈಲಟ್‌ ಯೋಜನೆಯಾಗಿ ಜಿಲ್ಲೆಯ ಆಯ್ದ 17 ಗ್ರಾ.ಪಂ.ಗಳಲ್ಲಿ ಅನುಷ್ಠಾನ ಮಾಡಲಾಗುತ್ತಿದ್ದು, ಉಳಾಯಿಬೆಟ್ಟು ಗ್ರಾ.ಪಂ.ನಲ್ಲಿ  ಆರಂಭವಾಗಿದೆ. “ಗೂಡು’ಗಳಲ್ಲಿ ಇನ್ನು ಮುಂದೆ ಕಾದಂಬರಿ, ಕಥೆ, ಕವನ ಸೇರಿದಂತೆ ಬಗೆಬಗೆಯ ಸಾಹಿತ್ಯ ಪುಸ್ತಕಗಳು ಉಚಿತವಾಗಿ ಸಿಗಲಿವೆ. ಅಲ್ಲೇ ಓದಬಹುದು ಅಥವಾ ಮನೆಗೆ ಕೊಂಡೊಯ್ದು ಓದಿ ಮರಳಿಸಬಹುದು. ಮನೆಯಲ್ಲಿರುವ ಹಳೆಯ ಪುಸ್ತಕವನ್ನು ಗೂಡಿಗೆ ಸೇರಿಸಲೂಬಹುದು.

ಪುಸ್ತಕಗಳು ಎಲ್ಲಿಂದ?:

ಎಲ್ಲ ಪುಸ್ತಕ ಗೂಡುಗಳಿಗೆ ತಗಲುವ ವೆಚ್ಚವನ್ನು ಆಯಾ ಗ್ರಾ.ಪಂ. ಮಾಡಲಿದೆ. ಪುಸ್ತಕಗಳನ್ನು ಸಂಘ-ಸಂಸ್ಥೆ ಹಾಗೂ ಸಾರ್ವಜನಿಕರು ನೀಡುತ್ತಾರೆ. ಪ್ರತೀ ಗೂಡಲ್ಲಿ ಕನಿಷ್ಠ 30 ಪುಸ್ತಕಗಳನ್ನಿರಿಸುವ ಗುರಿ ಇದೆ.

ಆಯ್ಕೆಯಾದ ಗ್ರಾಮಗಳು :

ಮಂಗಳೂರು ತಾಲೂಕಿನ ಉಳಾಯಿಬೆಟ್ಟು, ಕೊಣಾಜೆ, ಬೆಳ್ಮ, ಬೆಳ್ತಂಗಡಿ ತಾಲೂಕಿನ ಅಳದಂಗಡಿ, ಬಂಟ್ವಾಳ ತಾಲೂಕಿನ ಕೊಳ್ನಾಡು, ಚೆನ್ನೈತ್ತೋಡಿ, ಅರಳ, ಪುತ್ತೂರು ತಾಲೂಕಿನ ಉಪ್ಪಿನಂಗಡಿ, ಕಬಕ, ಆರ್ಯಾಪು, ಕಡಬ ತಾಲೂಕಿನ ಸುಬ್ರಹ್ಮಣ್ಯ, ಅಲಂಕಾರು, ರಾಮಕುಂಜ, ಸುಳ್ಯ ತಾಲೂಕಿನ ಬೆಳ್ಳಾರೆ, ಮೂಡಬಿದಿರೆ ತಾಲೂಕಿನ ಶಿರ್ತಾಡಿ, ತೆಂಕಮಿಜಾರು, ಪುತ್ತಿಗೆ.

ಗ್ರಾಮೀಣ ಜನರಲ್ಲಿ ಪುಸ್ತಕ ಪ್ರೀತಿ ಬೆಳೆಯಬೇಕು ಎಂಬ ಸದುದ್ದೇಶದಿಂದ “ಪುಸ್ತಕ ಗೂಡು’ ಕಲ್ಪನೆಯನ್ನು ರಾಜ್ಯದಲ್ಲೇ ಮೊದಲ ಬಾರಿ ದ.ಕ. ಜಿಲ್ಲೆಯಲ್ಲಿ ಅನುಷ್ಠಾನಿಸಲಾಗಿದೆ. ಸದ್ಯ ಕೆಲವು ಗ್ರಾಮ ವ್ಯಾಪ್ತಿಯಲ್ಲಿ ಇದು ಜಾರಿಯಾಗಿ ಬಳಿಕ ಎಲ್ಲಾ ಗ್ರಾಮಗಳಿಗೆ ವಿಸ್ತರಿಸಲಾಗುವುದು.– ಡಾ| ಕುಮಾರ್‌,  ದ.ಕ. ಜಿ.ಪಂ. ಸಿಇಒ

-ದಿನೇಶ್‌ ಇರಾ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.