![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 3, 2024, 12:45 AM IST
ಕೈಕಂಬ: ಗುರುಪುರ ಪೊಳಲಿ ದ್ವಾರದ ಬಳಿ ಮಂಗಳವಾರ ಸಂಜೆ ವೇಳೆ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಅಡ್ಡಕ್ಕೆ ಬಿದ್ದ ಪರಿಣಾಮ 8 ಮಂದಿ ಗಾಯಗೊಂಡಿದ್ದಾರೆ.
ಈ ಬಸ್ ಬಿಸಿರೋಡ್ಗೆ ಹೋಗುತ್ತಿತ್ತು. ಸಂಜೆ ವೇಳೆಯಾದ ಕಾರಣ ಈ ಬಸ್ನಲ್ಲಿ ಕಾರ್ಮಿಕರು ಮತ್ತು ಉದ್ಯೋಗಿಗಳು ಬಹಳಷ್ಟು ಮಂದಿ ಇದ್ದರು. ಬಸ್ ಪೊಳಲಿ ದ್ವಾರದಿಂದ ಸ್ವಲ್ಪ ದೂರ ಹೋಗುವಷ್ಟರಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಆಡ್ಡಕ್ಕೆ ಬಿತ್ತು. ಈ ಘಟನೆಯಲ್ಲಿ ಸುಮಾರು 8 ಮಂದಿ ಗಾಯಗೊಂಡಿದ್ದಾರೆ.
ಬಸ್ಸಿನ ಬಾಗಿಲಿನ ಭಾಗ ಅಡ್ಡಕ್ಕೆ ಬಿದ್ದ ಕಾರಣ ಪ್ರಯಾಣಿಕರು ಬಲಬದಿಯ ಕಿಟಕಿ ಹಾಗೂ ಎದುರಿನ ಹಾಗೂ ಹಿಂದಿನ ಕನ್ನಡಿ ಒಡೆದು ಹೊರಗೆ ಬಂದರು.
ಸ್ಥಳಕ್ಕೆ ಬಜಪೆ ಇನ್ಸ್ಪೆಕ್ಟರ್ ಸಂದೀಪ್ ಹಾಗೂ ಸಿಬಂದಿ ಆಗಮಿಸಿದ್ದು, ಗಾಯಾಳುಗಳನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲು ನೆರವಾದರು. ಈ ಘಟನೆಯಿಂದ ಸುಮಾರು ಒಂದೂವರೆ ಗಂಟೆಗಳ ಕಾಲ ಪೊಳಲಿ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು . ಕ್ರೇನ್ ಮೂಲಕ ಬಸ್ ಅನ್ನು ಪಕ್ಕಕ್ಕೆ ಸರಿಸಲಾಯಿತು. ರಸ್ತೆಯ ಎಡಬದಿಯಲ್ಲಿ ದೊಡ್ಡ ಕಂದಕ ಇರುವ ಕಾರಣ ಒಂದು ವೇಳೆ ಬಸ್ ಆ ಕಡೆಗೆ ಬಿದ್ದಿದ್ದರೆ ಭಾರೀ ಅನಾಹುತವಾಗುವ ಸಾಧ್ಯತೆಯಿತ್ತು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.