Veerappa Moily; ಪದ್ಮರಾಜ್‌ ಮೂಲಕ ದ.ಕ. ಜಿಲ್ಲೆಯ ಅಭಿವೃದ್ಧಿ, ಹಿಂದುಳಿದ ವರ್ಗಕ್ಕೆ ಶಕ್ತಿ


Team Udayavani, Apr 22, 2024, 12:19 AM IST

Veerappa Moily; ಪದ್ಮರಾಜ್‌ ಮೂಲಕ ದ.ಕ. ಜಿಲ್ಲೆಯ ಅಭಿವೃದ್ಧಿ, ಹಿಂದುಳಿದ ವರ್ಗಕ್ಕೆ ಶಕ್ತಿ

ಉಳ್ಳಾಲ: ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಇತಿಹಾಸ ಮರುಕಳಿಸಲಿದ್ದು, ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧೆಯಲ್ಲಿರುವ ಪದ್ಮರಾಜ್‌ ಆರ್‌. ಪೂಜಾರಿ ಅವರ ಗೆಲುವು ನಿಶ್ಚಿತ. ಅವರ ಗೆಲುವಿನೊಂದಿಗೆ ದ.ಕ. ಜಿಲ್ಲೆಯ ಅಭಿವೃದ್ಧಿ ಹಾಗೂ ಹಿಂದುಳಿದ ವರ್ಗದ ಜನರಿಗೆ ಶ್ರೇಯಸ್ಸು ಲಭ್ಯವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಅಭಿಪ್ರಾಯಪಟ್ಟರು.

ಮಂಗಳೂರು ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್‌ ಆರ್‌. ಪೂಜಾರಿ ಪರವಾಗಿ ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಲ್ಯ ನಾರಾಯಣಗುರು ಮಂದಿರದಿಂದ ಉಳ್ಳಾಲ ಕೋಡಿವರೆಗೆ ನಡೆದ ರೋಡ್‌ಶೋ ಸಂದರ್ಭ ಬೃಹತ್‌ ವಾಹನ ಜಾಥಾದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಈ ಬಾರಿ ಕಾಂಗ್ರೆಸ್‌ ಸುಶಿಕ್ಷಿತ, ಸಾಮಾಜಿಕ ನ್ಯಾಯ ನೀಡುವ ಕಾನೂನು ಪದವೀಧರರಾಗಿರುವ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ದ.ಕ. ಜಿಲ್ಲೆಯ ಬಿಜೆಪಿಯ ಮೂರು ದಶಕಗಳ ಆಡಳಿತ ಈ ಬಾರಿ ಕೊನೆಗೊಳ್ಳಲಿದೆ ಮತ್ತು ದೇಶದಲ್ಲಿಯೂ ಕಾಂಗ್ರೆಸ್‌ ಬಹುಮತ ಪಡೆಯಲಿದೆ ಎಂದರು.

ಗ್ಯಾರಂಟಿಯೇ ಶ್ರೀರಕ್ಷೆ: ಪದ್ಮರಾಜ್‌
ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್‌ ಆರ್‌. ಪೂಜಾರಿ ಮಾತನಾಡಿ, ಈ ಬಾರಿ ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವು ನಿಶ್ಚಿತ. ಕಾಂಗ್ರೆಸ್‌ ಆಡಳಿತದ ಕಾಲದಲ್ಲಿದ್ದ ತುಳುನಾಡಿನ ವೈಭವ ಈ ಮೂಲಕ ಮರಳಿ ಬರಲಿದೆ. ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಸಂಸದರಾಗಿ, ಕೇಂದ್ರ ಹಣಕಾಸು ಸಚಿವರಾಗಿ ಬಡವರ ಕಣ್ಣೊರೆಸುವ ಕಾರ್ಯ ಮಾಡಿದ್ದ ಜನಾರ್ದನ ಪೂಜಾರಿ ಅವರ ಆದರ್ಶವನ್ನಿಟ್ಟುಕೊಂಡು ಸಮಾಜ ದಲ್ಲಿರುವ ಬಡಜನರ ಕಣ್ಣೊರೆಸುವ ಕಾರ್ಯ ನಡೆಸುತ್ತೇನೆ ಎಂದರು.

ಪದ್ಮರಾಜ್‌ಗೆ ಗೆಲುವು: ನಿಕೇತ್‌
ಕೆಪಿಸಿಸಿ ವಕ್ತಾರ ನಿಕೇತ್‌ರಾಜ್‌ ಮೌರ್ಯ ಮಾತನಾಡಿ, ಈ ಬಾರಿ ಕೇಸರಿ ಶಾಲು ಮತ್ತು ಹಳದಿ ಶಾಲು ಹಾಕಿದವರು ಪದ್ಮರಾಜ್‌ ಜತೆಗಿದ್ದಾರೆ. ಈ ನಿಟ್ಟಿನಲ್ಲಿ ಲಕ್ಷಾಂತರ ಮತಗಳ ಅಂತರದಲ್ಲಿ ಪದ್ಮರಾಜ್‌ ಜಯಶಾಲಿಯಾಗಲಿದ್ದಾರೆ. ಶಿಕ್ಷಣ, ಆರೋಗ್ಯ ನಮ್ಮ ಉಸಿರಾಗಿದ್ದು, ತುಳು ಭಾಷೆಗೋಸ್ಕರ ಪದ್ಮರಾಜ್‌ ಸಂಸತ್ತಿನಲ್ಲಿ ಧ್ವನಿಯೆತ್ತಲಿ¨ªಾರೆ ಎಂದರು.

ಸಿನೆಮಾ ನಟಿ ಕಾವ್ಯಾ ಶಾ, ವಿಧಾನಪರಿಷತ್‌ ಸದಸ್ಯ ಹರೀಶ್‌ ಕುಮಾರ್‌, ರಾಜೀವ್‌ ಗಾಂಧಿ ವಿ.ವಿ. ಸಿಂಡಿಕೇಟ್‌ ಸದಸ್ಯ ಯು.ಟಿ. ಇಫ್ತಿಕರ್‌ ಫ‌ರೀದ್‌, ಮಹಿಳಾ ಕಾಂಗ್ರೆಸ್‌ ಜಿಲ್ಲಾಧ್ಯಕ್ಷೆ ಶಾಲೆಟ್‌ ಪಿಂಟೋ, ಉಳ್ಳಾಲ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಮೇಶ್‌ ಶೆಟ್ಟಿ ಬೋಳಾÂರು, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ, ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್‌, ಗೇರು ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಕೃಪಾ ಆಳ್ವಾ ಉಪಸ್ಥಿತರಿದ್ದರು.

ಕಾಂಗ್ರೆಸ್‌ ಕಾಲದಲ್ಲಿ ಅಭಿವೃದ್ಧಿ, ಬಿಜೆಪಿಯಿಂದ ಭಾಷಣ ಮಾತ್ರ
ದ.ಕ. ಜಿಲ್ಲೆಯ ಜನರು ಈ ಬಾರಿ ಬದಲಾವಣೆ ನಿರೀಕ್ಷಿಸುತ್ತಿದ್ದಾರೆ. 33 ವರ್ಷದ ಹಿಂದೆ ಜಿಲ್ಲೆಯಲ್ಲಿ ಆದ ಯೋಜನೆಗಳೇ ಈಗ ನೆನಪಿನಲ್ಲಿವೆ. ಕಾಂಗ್ರೆಸ್‌ ಸಂಸದರು ಕೊಟ್ಟಂತಹ ಯೋಜನೆಗಳು, ಮಂಗಳೂರು ವಿಮಾನ ನಿಲ್ದಾಣ, ಎಂಆರ್‌ ಪಿಎಲ್ , ಎಂಸಿಎಫ್, ಕೆಐಒಸಿಎಲ್ , ಎನ್‌ಎಂಪಿಟಿ, ಎನ್‌ ಐಟಿಕೆ ಸಹಿತ ವಿವಿಧ ಯೋಜನೆಗಳು ಕಾಂಗ್ರೆಸ್‌ ಸಂಸದರು ಇದ್ದ ಕಾಲದಲ್ಲಿ ನಡೆದದ್ದಾಗಿದೆ. 1991ರಿಂದ ಬಿಜೆಪಿ ಆಡಳಿತದಲ್ಲಿ ಇಂತಹ ಯಾವುದಾದರು ಒಂದು ಯೋಜನೆಯನ್ನು ಮಾಡಿದೆ ಎಂದು ಹೇಳುವ ಧೈರ್ಯ ಮಾಡಲಿ ಎಂದು ಪದ್ಮರಾಜ್‌ ಅರ್‌. ಪೂಜಾರಿ ತಿಳಿಸಿದರು.

ಟಾಪ್ ನ್ಯೂಸ್

Transfer of 23 IAS officers including five District Collectors

IAS transfer; ಐವರು ಜಿಲ್ಲಾಧಿಕಾರಿಗಳು ಸೇರಿ 23 ಐಎಎಸ್ ಅಧಿಕಾರಿಗಳ ವರ್ಗಾವಣೆ

4-punjalkatte

Ajilamogaru: ನೀರು ಪಾಲಾದ ಮೈಕಲ್ ರ ಮೃತದೇಹ ಪತ್ತೆ

Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ಆಯ್ಕೆ

Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ನಿಯೋಜನೆ

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

2-kushtagi

ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ; ಚಾಲಕ ಸಾವು; ಹಲವು ಪ್ರಯಾಣಿಕರಿಗೆ ಗಾಯ

vidhana-Soudha

Karnataka Government: 7ನೇ ವೇತನ ಆಯೋಗದ ಶಿಫಾರಸಿಗೆ ಎಳ್ಳುನೀರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Transfer of 23 IAS officers including five District Collectors

IAS transfer; ಐವರು ಜಿಲ್ಲಾಧಿಕಾರಿಗಳು ಸೇರಿ 23 ಐಎಎಸ್ ಅಧಿಕಾರಿಗಳ ವರ್ಗಾವಣೆ

4-punjalkatte

Ajilamogaru: ನೀರು ಪಾಲಾದ ಮೈಕಲ್ ರ ಮೃತದೇಹ ಪತ್ತೆ

3-kushtagi

Kushtagi: ಕಳ್ಳರ ಅಟ್ಟಹಾಸಕ್ಕೆ 13 ಶ್ರೀಗಂಧದ ಮರ ಬಲಿ

Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ಆಯ್ಕೆ

Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ನಿಯೋಜನೆ

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.