ಕಾಂಗ್ರೆಸ್‌ನ ರಕ್ಷಣಾತ್ಮಕ ಆಟ!?


Team Udayavani, Apr 18, 2018, 8:20 AM IST

Vote-Congress-17-4.jpg

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ 8 ಮತ್ತು ಉಡುಪಿಯ ಎಲ್ಲ 5 ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಹಾಗೆ ನೋಡಿದರೆ, ಎಲ್ಲ ಅಭ್ಯರ್ಥಿಗಳ ಹೆಸರು ನಿರೀಕ್ಷಿತವೇ ಆಗಿತ್ತು. ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಸಾಕಷ್ಟು ಜಿಜ್ಞಾಸೆ ಪಕ್ಷದ ವಲಯದಲ್ಲಿ ಮತ್ತು ಮಾಧ್ಯಮಗಳಲ್ಲಿ ನಡೆದಿತ್ತು. ಆದರೆ ಪಕ್ಷ ಕ್ರಿಕೆಟ್‌ ಆಟದ ಪರಿಭಾಷೆಯಲ್ಲಿ ರಕ್ಷಣಾತ್ಮಕವಾಗಿ ಆಡಿತು!

ಕಾಂಗ್ರೆಸ್‌ನ 13 ಅಭ್ಯರ್ಥಿಗಳ ಕುರಿತು ವಿಶ್ಲೇಷಣೆ ನಡೆಸುವಾಗ ದ.ಕ. ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಒಟ್ಟು ಸ್ಪರ್ಧೆಯ ಸಂಖ್ಯೆಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಇದು ಅವರು ಬಂಟ್ವಾಳ ಕ್ಷೇತ್ರದಿಂದ ನಡೆಸಲಿರುವ 8ನೇ ಸ್ಪರ್ಧೆ. 1985ರಲ್ಲಿ ಪ್ರಥಮ ಬಾರಿಗೆ ಕಣಕ್ಕೆ ಇಳಿದಾಗ ಅವರಿಗೆ 33ರ ಹರೆಯ. ಅಲ್ಲಿಂದ ಹ್ಯಾಟ್ರಿಕ್‌ ಸಹಿತ ಸತತ 4 ಬಾರಿ ಗೆದ್ದರು. 2004ರಲ್ಲಿ ಬಿಜೆಪಿಗೆ ಸೋತರು. ಮತ್ತೆ ಕಳೆದೆರಡು ಚುನಾವಣೆಗಳಲ್ಲಿ ಜಯಿಸಿದರು. ಆರು ಬಾರಿ ಅವರ ಗೆಲುವು ಕೂಡ ಕಾಂಗ್ರೆಸ್‌ನ ಇನ್ನೊಂದು ಸಾಧನೆ. (ಕಾರ್ಕಳದಲ್ಲಿ ಎಂ. ವೀರಪ್ಪ ಮೊಯಿಲಿ ಅವರು ಸತತ 6 ಬಾರಿ ಜಯಿಸಿದ್ದರು.)


1980ರ ದಶಕದಲ್ಲಿ ಮಂಗಳೂರಲ್ಲಿ ಕಾಂಗ್ರೆಸ್‌ ಪ್ರಚಾರ. — ಸಂಗ್ರಹ ಚಿತ್ರ: ಯಜ್ಞ

ಈ ಬಾರಿಯ ಕಾಂಗ್ರೆಸ್‌ ಅಭ್ಯರ್ಥಿಗಳ ಪೈಕಿ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್‌ ಅವರಿಗೆ ಮೂಡಬಿದಿರೆಯಿಂದ ಇದು ಸತತ 5ನೇ ಸ್ಪರ್ಧೆ. ವಿನಯಕುಮಾರ್‌ ಸೊರಕೆ ಅವರಿಗೆ 5ನೇ ಸ್ಪರ್ಧೆ (ಪುತ್ತೂರು 3, ಕಾಪು 2ನೇ). ಬೈಂದೂರಿನ ಗೋಪಾಲ ಪೂಜಾರಿ ಅವರಿಗೆ 6ನೇ ಸ್ಪರ್ಧೆ. ಮಂಗಳೂರಿನಲ್ಲಿ ಯು.ಟಿ. ಖಾದರ್‌, ಕಾರ್ಕಳದಲ್ಲಿ ಎಚ್‌. ಗೋಪಾಲ ಭಂಡಾರಿ, ಸುಳ್ಯದಲ್ಲಿ ಡಾ| ರಘು ಅವರಿಗೆ ಇದು 4ನೇ ಸ್ಪರ್ಧೆ. ಉಡುಪಿಯ ಪ್ರಮೋದ್‌ ಮಧ್ವರಾಜ್‌ಗೆ 4ನೇ (ಒಮ್ಮೆ ಬ್ರಹ್ಮಾವರ) ಸ್ಪರ್ಧೆ. ಬೆಳ್ತಂಗಡಿಯಲ್ಲಿ ಕಾಂಗ್ರೆಸ್‌ ನಿಂದ ಕೆ. ವಸಂತ ಬಂಗೇರ ಅವರಿಗೆ ಮೂರನೇ ಸ್ಪರ್ಧೆ. ಮಂಗಳೂರು ದಕ್ಷಿಣದಿಂದ ಜೆ.ಆರ್‌. ಲೋಬೋ, ಮಂಗಳೂರು ಉತ್ತರದಿಂದ ಮೊದಿನ್‌ ಬಾವಾ, ಪುತ್ತೂರಿನಿಂದ ಶಕುಂತಳಾ ಶೆಟ್ಟಿ ಸತತ 2ನೇ ಬಾರಿ ಕಣದಲ್ಲಿದ್ದಾರೆ. ಉಭಯ ಜಿಲ್ಲೆಗಳಲ್ಲಿ ಪ್ರಥಮ ಬಾರಿಗೆ ಸ್ಪರ್ಧಾಕಣದಲ್ಲಿರುವವರು ಕುಂದಾಪುರದಿಂದ ರಾಕೇಶ್‌ ಮಲ್ಲಿ ಅವರು.

ಇಲ್ಲಿ ಕೆಲವು ಹಿರಿಯ ಅಭ್ಯರ್ಥಿಗಳು ಇನ್ನೂ ಹೆಚ್ಚು ಚುನಾವಣೆಗಳಲ್ಲಿ ಸ್ಪರ್ಧಿಸಿದ ಅನುಭವಿಗಳು. ಬಂಗೇರಗೆ 9ನೇ ಚುನಾವಣೆ. ಶಕುಂತಳಾ ಶೆಟ್ಟರಿಗೆ 4ನೇ ಚುನಾವಣೆ. ಕಾಂಗ್ರೆಸ್‌ನಿಂದ ಅವರು ಸ್ಪರ್ಧಿಸುತ್ತಿರುವ ಸಂಖ್ಯೆಯನ್ನು ಮಾತ್ರ ಇಲ್ಲಿ ಉಲ್ಲೇಖೀಸಲಾಗಿದೆ. ಕಾಂಗ್ರೆಸ್‌ಗೆ ಸಂಬಂಧಿಸಿ ಚುನಾವಣಾ ತಯಾರಿ ಚುರುಕುಗೊಂಡಿವೆ. ಕೆಲವೆಡೆ ಅತೃಪ್ತಿಯೂ ಕಾಣಿಸುತ್ತಿದೆ. ನಾಮಪತ್ರ ಸಲ್ಲಿಕೆಯು ಪಕ್ಷದ ಒಟ್ಟು ಪ್ರಚಾರ ಕಾರ್ಯಕ್ಕೆ ವೇಗವರ್ಧಕವಾಗಬಹುದು.

— ಮನೋಹರ ಪ್ರಸಾದ್‌

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-bantwala-1

Bantwala: ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ; ಪತ್ನಿ ಮೃತ್ಯು, ಪತಿ ಗಂಭೀರ

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.