ವಿಶ್ವದ ಎದುರು ಭಾರತ ಶಕ್ತಿಯಾಗಿ ಹೊರಹೊಮ್ಮುತ್ತಿದೆ : ಕ್ಯಾ| ಕಾರ್ಣಿಕ್‌


Team Udayavani, Jun 15, 2022, 12:52 AM IST

ವಿಶ್ವದ ಎದುರು ಭಾರತ ಶಕ್ತಿಯಾಗಿ ಹೊರಹೊಮ್ಮುತ್ತಿದೆ : ಕ್ಯಾ| ಕಾರ್ಣಿಕ್‌

ಮಂಗಳೂರು : 2014 ಹಾಗೂ 2019ರ ಲೋಕಸಭಾ ಚುನಾವಣೆಯಲ್ಲಿ ಗೆಲುವಿನ ಬಳಿಕ ದೇಶದಲ್ಲಿ ಸಾಂಸ್ಕೃತಿಕ ಪುನರುತ್ಥಾನ, ರಾಷ್ಟ್ರೀಯ ಮೌಲ್ಯಗಳ ಪ್ರತಿಬಿಂಬ, ದೇಶದ ಕಾನೂನಿನಲ್ಲಿ ಅಗತ್ಯ ಬದಲಾವಣೆ ಸೇರಿದಂತೆ ಅನೇಕ ನಿರ್ಧಾರಗಳನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕೈಗೊಂಡಿದೆ. ವಿಶ್ವದ ಎದುರು ಭಾರತ ಶಕ್ತಿಯಾಗಿ ಹೊರಹೊಮ್ಮುತ್ತಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಕ್ಯಾ| ಗಣೇಶ್‌ ಕಾರ್ಣಿಕ್‌ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಕೋವಿಡ್‌ ಬಳಿಕ ಜಗತ್ತಿನಲ್ಲಿ ಆರ್ಥಿಕ ವ್ಯತ್ಯಯಗಳು ಸಂಭವಿಸಿದಾಗ ಭಾರತದ ಜಿಡಿಪಿ, ಕರೆನ್ಸಿ ಇತರ ದೇಶಗಳಿಗೆ ಹೋಲಿಸಿದರೆ ಅಷ್ಟಾಗಿ ಅಪಮೌಲ್ಯವಾಗಿಲ್ಲ. ಅಮೆರಿಕದಲ್ಲಿ ಕೂಡ ಹಣದುಬ್ಬರ ಪರಿಸ್ಥಿತಿ ಉಂಟಾಗಿದೆ ಎಂದರು.

ಉಕ್ರೇನ್‌ ಯುದ್ಧ ಸಂದರ್ಭ ಭಾರತ ರಾಜತಾಂತ್ರಿಕವಾಗಿ ನಿಲುವು ತೆಗೆದುಕೊಂಡಿದೆ. ಭಾರತದ ಡಿಜಿಪಿ ಶೇ. 8.7ರ ಬೆಳವಣಿಗೆ ಬಗ್ಗೆ ವಿಶ್ವ ಹಣಕಾಸು ಸಂಸ್ಥೆ ಹೇಳಿದೆ. ಭಾರತದಲ್ಲಿ ನಿರುದ್ಯೋಗ ಬೃಹತ್‌ ಸಂಖ್ಯೆಯಲ್ಲಿ ಇರುತ್ತಿದ್ದರೆ, ಅಗಾಧ ಪ್ರಮಾಣದಲ್ಲಿ ಜಿಎಸ್‌ಟಿ ಸಂಗ್ರಹ ಹೇಗೆ ಸಾಧ್ಯ? ಇನ್ನೂ ಸಾಕಷ್ಟು ಉದ್ಯೋಗ ಸೃಷ್ಟಿಯಾಗಬೇಕಾಗಿದ್ದು, ಅದಕ್ಕಾಗಿ ಕೌಶಲ ಸುಧಾರಣೆಯಾಗಬೇಕಿದೆ, ಅದಕ್ಕೆ ಪೂರಕವಾಗಿ ಸ್ಕಿಲ್‌ ಇಂಡಿಯಾ ಮಾದರಿಯ ಯೋಜನೆ ರೂಪಿಸಲಾಗಿದೆ ಎಂದರು.

ಪ್ರವಾದಿ ನಿಂದನೆ ಆರೋಪಕ್ಕೆ ಒಳಗಾದ ಬಿಜೆಪಿ ಮಾಜಿ ವಕ್ತಾರೆ ನೂಪುರ ಶರ್ಮಾ ಮಾಡಿರುವ ಪ್ರವಾದಿ ನಿಂದನೆಯಂತಹ ಘಟನೆ ನಡೆದಾಗ ಆ ಬಗ್ಗೆ ಕೇಂದ್ರ ಸರಕಾರವೇ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ. ಅಂತಾರಾಷ್ಟ್ರೀಯ ಸ್ತರದಲ್ಲಿ ವಿವಾದ ತಲೆದೋರಿದ ಕಾರಣ ಪಕ್ಷ ಕೂಡ ನೂಪುರ ಶರ್ಮಾ ಅವರನ್ನು ಹುದ್ದೆಯಿಂದ ವಜಾಗೊಳಿಸುವ ತೀರ್ಮಾನ ಕೈಗೊಳ್ಳಬೇಕಾಯಿತು ಎಂದರು.

ಸಂವೇದನಾಶೀಲ ಸರಕಾರ
ಪ್ರಧಾನಿಯಾಗಿ ನರೇಂದ್ರ ಮೋದಿ 8 ವರ್ಷಗಳಲ್ಲಿ ಅಮೋಘ ಸಾಧನೆ ಮಾಡಿದ್ದಾರೆ. ಎಲ್ಲ ಕ್ಷೇತ್ರಗಳಲ್ಲೂ ಗಮನಾರ್ಹ ಸಾಧನೆ ಮಾಡುವ ಮೂಲಕ ಇದೊಂದು ಸಂವೇದನಾಶೀಲ ಸರಕಾರವಾಗಿದೆ. ಸ್ವತ್ಛ ಭಾರತ್‌, ಮನ್‌ಕಿ ಬಾತ್‌, ಆಂತರಿಕ ಭದ್ರತೆ, ಪಾರದರ್ಶಕತೆ, ಮೂಲಸೌಕರ್ಯ, ವಿದೇಶಾಂಗ ನೀತಿ, ಚೀನ ವಿರುದ್ಧ ಆಮದು ನೀತಿ, ಆತ್ಮನಿರ್ಭರ ಭಾರತ ಪರಿಕಲ್ಪನೆ, ಕೋವಿಡ್‌ ಲಸಿಕೆ ಪೂರೈಕೆ, ಗರೀಬ್‌ ಕಲ್ಯಾಣ್‌ ಯೋಜನೆ, ಕೃಷಿ ಆದಾಯ, ಹೊಸ ಶಿಕ್ಷಣ ನೀತಿ, ಎನ್‌ಆರ್‌ಸಿ, ಸಿಎಎ, ಜಾಗತಿಕ ಉತ್ಪಾದನಾ ಕೇಂದ್ರವಾಗಿಸಲು ಕೈಗೊಂಡ ಕ್ರಮಗಳು ಭಾರತದ ಬಗ್ಗೆ ಮೋದಿ ಅವರ ವಿಶ್ವಾಸ ನಾಯಕತ್ವದ ಪರಿಣಾಮಕ್ಕೆ ಸಾಕ್ಷಿಯಾಗಿದೆ. ಭ್ರಷ್ಟಾಚಾರ ರಹಿತವಾಗಿ, ಅಭಿವೃದ್ಧಿಯನ್ನು ಚುನಾವಣೆಯಲ್ಲಿ ಪ್ರಮುಖ ವಿಷಯವನ್ನಾಗಿ ಗೆಲ್ಲಲಾಗಿದೆ ಎಂದರು.
ಮುಡಾ ಅಧ್ಯಕ್ಷ ಹಾಗೂ ಬಿಜೆಪಿ ವಕ್ತಾರ ರವಿಶಂಕರ ಮಿಜಾರು, ರಂದೀಪ್‌ ಕಾಂಚನ್‌, ಸಂದೇಶ್‌ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.