Church ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ ಆಚರಣೆ
Team Udayavani, Sep 9, 2024, 12:52 AM IST
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲಾದ್ಯಂತ ರವಿವಾರ ಕೆಥೋಲಿಯನ್ನರು ಮೊಂತಿ ಹಬ್ಬವನ್ನು ಅದ್ದೂರಿಯಿಂದ ಆಚರಿಸಿದರು.
ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅ| ವಂ| ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ರೊಸಾರಿಯೋ ಕೆಥೆಡ್ರಲ್ನಲ್ಲಿ ತೆನೆ ಆಶೀರ್ವದಿಸಿ ಹಬ್ಬದ ಬಲಿಪೂಜೆ ಅರ್ಪಿಸಿದರು.
ಬಲಿಪೂಜೆಯಲ್ಲಿ ಪ್ರವಚನ ನೀಡಿದ ಅವರು, ತಾಯಿಯಾಗಿ ಜಗತ್ತಿಗೆ ಆದರ್ಶವಾಗಬೇಕಾದ ಸ್ತ್ರೀಯರ ಮೇಲೆ ನಿರಂತರ ಹಲ್ಲೆ, ಅತ್ಯಾಚಾರ ಗಳು ನಡೆಯುತ್ತಿರುವುದು ವಿಷಾದ ನೀಯ. ತಾಯಿಯನ್ನು ಜಗತ್ತಿನಲ್ಲಿ ಮೀರಿಸಲು ಯಾರಿಂದಲೂ ಅಸಾಧ್ಯ ಎಂದರು. ಚರ್ಚ್ನ ಪ್ರಧಾನ ಧರ್ಮ ಗುರು ವಂ. ಅಲ್ಫೆಡ್ ಪಿಂಟೊ ಬಲಿಪೂಜೆಯಲ್ಲಿದ್ದರು.
ಉಡುಪಿಯ ಶೋಕಮಾತಾ ಚರ್ಚ್ ನಲ್ಲಿ ಧರ್ಮಗುರು ರೆ| ಫಾ| ಚಾರ್ಲ್ಸ್ ಮಿನೇಜಸ್ ತೆನೆಗಳಿಗೆ ಆಶೀರ್ವದಿಸಿ ವಿಶೇಷ ಬಲಿಪೂಜೆ ನಡೆಸಿದರು.
ಮಹಿಳೆಯರು ಮತ್ತು ಮಕ್ಕಳು ಹೂವುಗಳನ್ನು ಕೊಂಡೊಯ್ದು ಮೇರಿ ಮಾತೆಗೆ ಅರ್ಪಿಸಿ ಭಕ್ತಿಯಿಂದ ನಮನ ಸಲ್ಲಿಸಿದರು. ದೇವಾಲಯಗಳಲ್ಲಿ ಶ್ರದ್ಧೆ ಮತ್ತು ಭಕ್ತಿಪೂರ್ವಕ ಧಾರ್ಮಿಕ ಕಾರ್ಯಗಳು ನಡೆದ ಬಳಿಕ ಭತ್ತದ ತೆನೆಯನ್ನು ಮನೆಗೆ ತಂದು ಹೊಸ ಅಕ್ಕಿಯ ಅನ್ನ ತಯಾರಿಸಿ ಕುಟುಂಬಿಕರು ಸಹಭೋಜನ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudubidire: 77 ಕೋ.ರೂ. ವೆಚ್ಚದ ಅಮೃತ್ 2.0 ನೀರಿನ ಯೋಜನೆಗೆ ಚಾಲನೆ
Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ
Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ
Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು
Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.