ಮುಂದಿನ ವರ್ಷದಿಂದ ಮಂಗಳೂರು ದಸರಾ ಮೆರವಣಿಗೆ ಸ್ವರೂಪ ಬದಲು!


Team Udayavani, Oct 22, 2018, 11:42 AM IST

22-october-6.gif

ಮಹಾನಗರ: ಮಂಗಳೂರು ದಸರಾ ಶೋಭಾಯಾತ್ರೆ ವೈಭವದಿಂದ ನಡೆದಿದ್ದು, ದೇಶ-ವಿದೇಶದ ಲಕ್ಷಾಂತರ ಮನಸೂರೆಗೊಳಿಸುವಲ್ಲಿ ಯಶಸ್ವಿಯಾಗಿದೆ. ಮುಂದಿನ ದಿನಗಳಲ್ಲಿ ಈ ಶೋಭಾಯಾತ್ರೆಯನ್ನು ಮತ್ತಷ್ಟು ವ್ಯವಸ್ಥಿತವಾಗಿ ನಡೆಸುವ ಉದ್ದೇಶದಿಂದ ದೇವಸ್ಥಾನ ಆಡಳಿತ ಮಂಡಳಿ ಮೆರವಣಿಗೆ ಸ್ವರೂಪದಲ್ಲಿ ಬದಲಾವಣೆ ಮಾಡಲು ನಿರ್ಧರಿಸಿದೆ.

ಜನಸಂಚಾರ ನಿಭಾಯಿಸುವುದು ಕಷ್ಟ
ಮಂಗಳೂರು ದಸರಾದ ಈ ಬಾರಿಯ ಶೋಭಾಯಾತ್ರೆ ವೈಭವವನ್ನು ತೆರೆದಿಡುವಲ್ಲಿ ಯಶಸ್ವಿಯಾಯಿತಾದರೂ, ಜನಸಾಗರ ಹಾಗೂ ಟ್ಯಾಬ್ಲೋಗಳ ಒತ್ತಡದಿಂದ ಮೆರವಣಿಗೆ ನಿರೀಕ್ಷಿತ ಸಮಯದಲ್ಲಿ ಮುಗಿಸಲು ಈ ಬಾರಿಯೂ ಸಾಧ್ಯವಾಗಿಲ್ಲ. ಈ ಬಾರಿ ಮೆರವಣಿಗೆ ಅವಧಿ 12 ಗಂಟೆಗೆ ಸೀಮಿತಗೊಳಿಸಿದ್ದರೂ, ಶುಕ್ರವಾರ ಸಂಜೆ 4ಗಂಟೆಗೆ ಹೊರಟ ಮೆರವಣಿಗೆ ಶನಿವಾರ ಬೆಳಗ್ಗಿನ ಜಾವ 6.30ರ ವರೆಗೆ ನಡೆಯುವ ಮೂಲಕ 14.30 ಗಂಟೆ ಸಮಯ ತಗುಲಿತು. ಅದರಲ್ಲೂ 1 ಕಿಲೋ ಮೀಟರ್‌ ಮೆರವಣಿಗೆ ತಲುಪಲು 8 ಗಂಟೆ ಅವಧಿ ತಲುಪಿದೆ. ಟ್ಯಾಬ್ಲೋ, ವಾಹನ, ಜನಸಂಚಾರವನ್ನು ನಿಭಾಯಿಸುವುದೇ ಪೊಲೀಸರಿಗೆ, ಸಂಘಕಟರಿಕೆಗೆ ದೊಡ್ಡ ತಲೆನೋವಾಗಿತ್ತು.

ಮಂಗಳೂರು ದಸರಾ ವೈಭವವನ್ನು ಎಲ್ಲರಿಗೆ ವೀಕ್ಷಿಸಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮೆರವಣಿಗೆಯನ್ನು ಈ ಬಾರಿ ಯಾವುದೇ ತೊಡಕಿಲ್ಲದೆ ಒಟ್ಟು ಸಮಯ 12 ಗಂಟೆಯೊಳಗೆ ಮುಗಿಸಬೇಕು ಎಂದು ದೇಗುಲದ ಆಡಳಿತ ಮಂಡಳಿ ನಿರ್ಧರಿಸಿತ್ತು. ಆದರೆ ಈ ಬಾರಿ ತಡವಾದ ಕಾರಣ ಮುಂದಿನ ವರ್ಷದಿಂದ ಶೋಭಾಯಾತ್ರೆ ಸ್ವರೂಪದಲ್ಲಿ ಬದಲಾವಣೆ ಮಾಡಲು ನಿರ್ಧರಿಸಲಾಗಿದೆ.

ಹಸಿರು ಕೊಡೆ, ಡೊಳ್ಳು ಕುಣಿತ ಸೇರಿದಂತೆ ರಾಜ್ಯದ ಎಲ್ಲ ಕಲಾ ತಂಡದ ಮೆರವಣಿಗೆ ಪ್ರಾರಂಭದಲ್ಲಿ ಸಾಗಲಿದೆ. ಅನಂತರ ನವದುರ್ಗೆಯರ ಸಹಿತ ಶ್ರೀ ಶಾರದೆ ದೇವರ ಮೂರ್ತಿಗಳು ಸಾಗಲಿದೆ. ಅನಂತರ ಬಗೆ ಬಗೆಯ ಟ್ಯಾಬ್ಲೋಗಳಿಗೆ ಅವಕಾಶ ನೀಡಲು ಚಿಂತಿಸಲಾಗಿದೆ. ಈ ಮೂಲಕ ಮೆರವಣಿಗೆಯನ್ನು ಆದಷ್ಟು ಬೇಗನೆ ಮುಗಿಸುವಂತೆ ಮಾಡುವುದು ಆಯೋಜಕರ ನಿರ್ಧಾರ. 

 ಡಿಜೆ, ಎಲ್‌ಇಡಿಗೆ ಕೊಕ್‌
ಮಂಗಳೂರು ದಸರಾ ಈಗಾಗಲೇ ಜನಪ್ರಿಯಗೊಂಡಿದ್ದು, ಲಕ್ಷಾಂತರ ಮಂದಿ ಭಾಗವಹಿಸುತ್ತಿದ್ದಾರೆ. ಈ ಮೆರವಣಿಗೆಯನ್ನು ಮತ್ತಷ್ಟು ಕ್ರೀಯಾತ್ಮಕವನ್ನಾಗಿಸುವ ಉದ್ದೇಶದಿಂದ ಮುಂದಿನ ವರ್ಷಗಳಲ್ಲಿ ಕ್ರಿಯಾಶೀಲ ಸ್ತಬ್ದಚಿತ್ರಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ನಮ್ಮ ನೆಲದ ಸಂಸ್ಕೃತಿ, ಕಂಪನ್ನು ಪಸರಿಸುವ ತಂಡಗಳಿಗೆ ಮಾತ್ರ ಕಲಾಪ್ರರ್ಶನಕ್ಕೆ ಅವಕಾಶ. ಡಿಜೆ ಹಾಡು, ನೃತ್ಯ, ಎಲ್‌ಇಡಿ ಸ್ಕ್ರೀನ್‌ ಬಳಸಿದ ಟ್ಯಾಬ್ಲೋಗಳಿಗೆ ಅವಕಾಶ ನೀಡುವುದಿಲ್ಲ.
 - ಪದ್ಮರಾಜ್‌ ಆರ್‌.,
    ಕೋಶಾಧಿಕಾರಿ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.