Cheque Bounce Cases: ನಟಿ ಪದ್ಮಜಾ ರಾವ್ ಗೆ ಕಾರಾಗೃಹ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ


Team Udayavani, Aug 27, 2024, 12:37 PM IST

Cheque Bounce Cases: ನಟಿ ಪದ್ಮಜಾ ರಾವ್ ಗೆ ಕಾರಾಗೃಹ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ

ಮಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಪದ್ಮಜಾ ರಾವ್‌ ಅವರಿಗೆ ಮಂಗಳೂರಿನ 8ನೇ ಜೆಎಂಎಫ್‌ಸಿ ನ್ಯಾಯಾಲಯವು ಮೂರು ತಿಂಗಳು ಸಾದಾ ಕಾರಾಗೃಹ ಶಿಕ್ಷೆ ಹಾಗೂ 40.20 ಲಕ್ಷ ರೂದಂಡ ವಿಧಿಸಿ ಆದೇಶ ನೀಡಿದೆ.

ನಟಿ ಪದ್ಮಜಾ ರಾವ್‌ ಅವರು 40 ಲ.ರೂ ಸಾಲ ಪಡೆದಿದ್ದರು. ಇದಕ್ಕೆ ಭದ್ರತೆಯಾಗಿ 2020ರ ಜೂನ್‌ 17ರಂದು ಐಸಿಐಸಿಐ ಬ್ಯಾಂಕಿನ ಬೆಂಗಳೂರಿನ ಬನಶಂಕರಿ ಶಾಖೆಯಲ್ಲಿರುವ ತಮ್ಮ ಖಾತೆಯ ಚೆಕ್‌ ನೀಡಿದ್ದರು. ಈ ಚೆಕ್‌ ಅನ್ನು ನಗದೀಕರಿಸಲು ಹಾಕಿದಾ ಅವರ ಖಾತೆಯಲ್ಲಿ ಅಷ್ಟೊಂದು ಮೊತ್ತ ಇರಲಿಲ್ಲ. 15 ದಿನಗಳ ಒಳಗೆ ಸಾಲದ ಹಣ ಪಾವತಿಸುವಂತೆ ‌2020ರ ಜೂನ್ 30ರಂದು ಪದ್ಮಜಾ ರಾವ್‌ ಅವರಿಗೆ ನೋಟಿಸ್‌ ನೀಡಿದರೂ ಅವರು ಹಣ ಪಾವತಿಸಿರಲಿಲ್ಲ ಎಂದು ‘ವೀರೂ ಟಾಕೀಸ್‌’ ಸಂಸ್ಥೆಯ ಮಾಲೀಕ, ಮಂಗಳೂರು ಮೇರಿಹಿಲ್ ನಿವಾಸಿ ವೀರೇಂದ್ರ ಶೆಟ್ಟಿ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.

ಸಮನ್ಸ್‌ ಜಾರಿಯಾದ ಬಳಿಕ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗಿದ್ದ ಪದ್ಮಜಾ ರಾವ್‌ ಅವರು ‘ನಾನು ದೂರುದಾರರಿಂದ ಯಾವುದೇ ಸಾಲ ಪಡೆದಿಲ್ಲ ಹಾಗೂ ಅವರಿಗೆ ಯಾವುದೇ ಚೆಕ್‌ ನೀಡಿಲ್ಲ’ ಎಂದು ಹೇಳಿಕೆ ನೀಡಿದ್ದರು.

52.70 ಲಕ್ಷ ರೂ.ವಂಚನೆ ಮಾಡಿದ ಬಗ್ಗೆ ವೀರೇಂದ್ರ ಶೆಟ್ಟಿ ವಿರುದ್ಧ ಬೆಂಗಳೂರಿನ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ 2020 ಮಾರ್ಚ್‌ 23ರಂದು ದೂರು ದಾಖಲಿಸಿದ್ದಕ್ಕೆ ಪ್ರತಿಯಾಗಿ ತಮ್ಮ ಕಕ್ಷಿದಾರರ ವಿರುದ್ಧ ಈ ಆರೋಪ ಮಾಡಿದ್ದಾರೆ. ಅವರ ಮನೆಯಿಂದ ಚೆಕ್‌ ಕಳವು ಮಾಡಿ ಸಹಿಯನ್ನು ಪೋರ್ಜರಿ ಮಾಡಲಾಗಿದೆ’ ಎಂದು ಪದ್ಮಜಾ ರಾವ್‌ ಪರ ವಕೀಲರು ವಾದಿಸಿದ್ದರು. ಆದರೆ, ಇದಕ್ಕೆ ಪೂರಕ ಪುರಾವೆಗಳನ್ನು ಒದಗಿಸುವಲ್ಲಿ ಅವರು ವಿಫಲರಾಗಿದ್ದರು.

8ನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಫವಾಜ್‌ ಪಿ.ಎ ಅವರು, ‘ಪದ್ಮಜಾ ರಾವ್‌ ಅವರು 40.20 ಲಕ್ಷ ರೂ.ದಂಡ ಪಾವತಿಸಬೇಕು. ಅದರಲ್ಲಿ 40.17 ಲ.ರೂಗಳನ್ನು ದೂರುದಾರರಿಗೆ ನೀಡಬೇಕು. 3,000 ರೂ.ಗಳನ್ನು ಸರಕಾರಕ್ಕೆ ಪಾವತಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Crossing Border: ತಮಿಳುನಾಡಿನ 8 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ಟಾಪ್ ನ್ಯೂಸ್

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

aatishi

Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ

1

Vishnuvardhan Birthday: ವಿಷ್ಣುವರ್ಧನ್‌ ಜನ್ಮದಿನ ಆಚರಿಸಲು ಫ್ಯಾನ್ಸ್‌  ರೆಡಿ

1-pti

Army;ಕಮರಿಗೆ ಬಿದ್ದ ವಾಹನ: ಪ್ಯಾರಾಟ್ರೂಪರ್ ಮೃ*ತ್ಯು,5 ಕಮಾಂಡೋಗಳಿಗೆ ಗಾಯ

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panamburu

Mangaluru: ಕಿರಿದಾಗುತ್ತಿದೆ‌ ಪಣಂಬೂರು ಬೀಚ್‌! ಇನ್ನೂ ಖಚಿತವಾಗದ ಕಾರಣ

Pililkula

Biological Park: ಪಿಲಿಕುಳಕ್ಕೆ ಪೆಂಗ್ವಿನ್‌, ಅನಕೊಂಡ ತರಿಸುವ ಮಹತ್ವದ ನಿರ್ಧಾರ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

Cap-Brijesh-Chowta

MSEZ: ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್‌ನಲ್ಲಿ ಉದ್ಯೋಗ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

1-dde

Edneer ಶ್ರೀ ಚಾತುರ್ಮಾಸ್ಯ; ಪದಯಾನ ತಂಡದ ಭರತನಾಟ್ಯ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.