ಗರಿಗಳ ರವಿವಾರ ಆಚರಣೆ, ಕ್ರೈಸ್ತರ ಪವಿತ್ರ ಸಪ್ತಾಹ ಆರಂಭ


Team Udayavani, Apr 10, 2017, 3:06 PM IST

gari.jpg

ಮಂಗಳೂರು/ಉಡುಪಿ: ಎರಡು ಸಾವಿರ ವರ್ಷಗಳ ಹಿಂದೆ ಯೇಸು ಕ್ರಿಸ್ತರು ಜೆರುಸಲೆಮಿಗೆ ಪ್ರವೇಶ ಮಾಡುವಾಗ ಅಲ್ಲಿನ ಜನರು ಸಂಭ್ರಮದಿಂದ ಸ್ವಾಗತಿಸಿದ ಘಟನೆಯನ್ನು ಸ್ಮರಿಸಿ ಕ್ರೈಸ್ತರು ಎ. 9ರಂದು ಗರಿಗಳ ರವಿವಾರ ಆಚರಿಸಿದರು.

ಮಂಗಳೂರಿನಲ್ಲಿ ಬಿಷಪ್‌ ರೈ| ರೆ| ಡಾ| ಅಲೋಶಿಯಸ್‌ ಪಾವ್‌É ಡಿ’ಸೋಜಾ ರೊಜಾರಿಯೋ ಕೆಥೆಡ್ರಲ್‌ನಲ್ಲಿ ಮತ್ತು ಉಡುಪಿ ಬಿಷಪ್‌ ರೈ| ರೆ| ಡಾ| ಜೆರಾಲ್ಡ್‌ ಐಸಾಕ್‌ ಲೋಬೋ ತೊಟ್ಟಂ ಸಂತ ಅನ್ನಮ್ಮ ಮಾತೆ ಚರ್ಚ್‌ನಲ್ಲಿ ನಡೆದ ವಿಶೇಷ ಪ್ರಾರ್ಥನೆ ಮತ್ತು ಬಲಿ ಪೂಜೆಯಲ್ಲಿ ಪಾಲ್ಗೊಂಡು ಸಂದೇಶ ನೀಡಿದರು.

ಮಂಗಳೂರಿನಲ್ಲಿ ಕೆಥೆಡ್ರಲ್‌ನ ಧರ್ಮಗುರು ಫಾ| ಜೆ.ಬಿ. ಕ್ರಾಸ್ತಾ, ತೊಟ್ಟಂನಲ್ಲಿ ಧರ್ಮಗುರು ಫಾ| ಫ್ರಾನ್ಸಿಸ್‌ ಕರ್ನೆಲಿಯೊ, ಇತರ ಗುರುಗಳು ಉಪಸ್ಥಿತರಿದ್ದರು. ಎಲ್ಲ ಚರ್ಚ್‌ಗಳಲ್ಲಿ ಸ್ಥಳೀಯ ಧರ್ಮಗುರುಗಳ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.

ಆಚರಣೆ ಹೀಗೆ ನಡೆಯಿತು
ಬಲಿ ಪೂಜೆಗೆ ಮೊದಲು ತೆಂಗಿನ ಗರಿಗಳನ್ನು ಚರ್ಚ್‌ ಆವರಣದಲ್ಲಿ ಧರ್ಮಗುರುಗಳು ಆಶೀರ್ವಚಿಸಿದರು. ಬಳಿಕ ಅವುಗಳನ್ನು ಭಾಗವಹಿಸಿದ್ದ ಎಲ್ಲ ಕ್ರೈಸ್ತರಿಗೆ ವಿತರಿಸಲಾಯಿತು. ಅವುಗಳನ್ನು ಹಿಡಿದು ಕ್ರೈಸ್ತರು ಯೇಸು ಕ್ರಿಸ್ತರಿಗೆ ಜೈಕಾರ ಹಾಕುತ್ತಾ ಮೆರವಣಿಗೆಯಲ್ಲಿ ಚರ್ಚ್‌ ಒಳಗೆ ಪ್ರವೇಶಿಸಿದರು. ಅಲ್ಲಿ ಬಲಿ ಪೂಜೆ ನಡೆಯಿತು.

ಯೇಸು ಕ್ರಿಸ್ತರಿಗೆ ಶಿಲುಬೆಯ ಶಿಕ್ಷೆ ವಿಧಿಸುವಲ್ಲಿಂದ ಹಿಡಿದು ಅವರು ಶಿಲುಬೆಗೇರಿ ಮರಣ ಹೊಂದಿ, ದೇಹವನ್ನು ಸಮಾಧಿ ಮಾಡುವ ವರೆಗಿನ ಕಥಾನಕವನ್ನು ಬೈಬಲ್‌ನಿಂದ ವಾಚಿಸಲಾಯಿತು. ಧರ್ಮಗುರು ಪ್ರವಚನ ನೀಡಿದರು.

ಹಿನ್ನೆಲೆ: ಯೇಸು ಕ್ರಿಸ್ತರು ಬೆಥಾನಿಯಾದಿಂದ ದೇವನಗರಿ ಎಂದೇ ಹೇಳಲಾದ ಜೆರುಸಲೆಮಿಗೆ ಪ್ರವೇಶ ಮಾಡುವಾಗ ಅಲ್ಲಿನ ಜನರು “ಒಲಿವ್‌’ ಮರದ ಗರಿಗಳನ್ನು ಹಿಡಿದು ವೈಭವದಿಂದ ಸ್ವಾಗತಿಸಿ ಬರಮಾಡಿಕೊಂಡಿದ್ದರು ಎಂಬ ಉಲ್ಲೇಖ ಬೈಬಲ್‌ನಲ್ಲಿದೆ. ಈ ಹಿನ್ನೆಲೆಯಲ್ಲಿ ಗರಿಗಳ ರವಿವಾರ ಆಚರಿಸಲಾಗುತ್ತದೆ. ಪ್ರಸ್ತುತ ಇಲ್ಲಿ ಒಲಿವ್‌ ಮರದ ಗರಿಗಳ ಬದಲು ತೆಂಗಿನ ಗರಿಗಳನ್ನು ಸಾಂಕೇತಿಕವಾಗಿ ಹಿಡಿದು ಪ್ರಾರ್ಥನೆ ಸಲ್ಲಿಸಲಾಗುತ್ತದೆ. ಗರಿಗಳ ರವಿವಾರ ಆಚರಣೆಯೊಂದಿಗೆ ಕ್ರೈಸ್ತರ ಪವಿತ್ರ ಸಪ್ತಾಹ ಆರಂಭಗೊಳ್ಳುತ್ತದೆ.

ಕಾಸರಗೋಡು: ಮಂಗಳೂರು ಧರ್ಮಪ್ರಾಂತಕ್ಕೆ ಒಳಪಟ್ಟ ಕಾಸರಗೋಡು ವಲಯದ ಎಲ್ಲ ಚರ್ಚ್‌ ಹಾಗೂ ಜಿಲ್ಲೆಯ ಇತರ ಚರ್ಚ್‌ಗಳಲ್ಲಿ ಗರಿಗಳ ರವಿವಾರ ವಿಶೇಷ ಪ್ರಾರ್ಥನೆ, ಬಲಿಪೂಜೆಯೊಂದಿಗೆ ನಡೆಯಿತು. ತೆಂಗಿನ ಗರಿಗಳನ್ನು ಹಿಡಿದು ಕ್ರೈಸ್ತರು ಬಲಿ ಪೂಜೆಯಲ್ಲಿ ಪಾಲ್ಗೊಂಡರು.

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

7

Mangaluru: ನಿತ್ಯ ಟ್ರಾಫಿಕ್‌ ಜಾಮ್‌ ಗೋಳು; ವಾಹನ ಸವಾರರ ಪರದಾಟ

Crime

Mangaluru: ಬಸ್‌ ನಿರ್ವಾಹಕನ ಕೊಲೆ; ಆರೋಪಿಗಳ ಸುಳಿವು ಲಭ್ಯ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.