Mangaluru ಕರಾವಳಿಯ ಭದ್ರತೆಯಲ್ಲಿ ಕೋಸ್ಟ್‌ಗಾರ್ಡ್‌ ಮಹತ್ವದ ಪಾತ್ರ

ಮೈಟ್‌ನಲ್ಲಿ ನಡೆದ ವಿಚಾರಗೋಷ್ಠಿಯಲ್ಲಿ ಕಮಾಂಡೆಂಟ್‌ ಡಿಐಜಿ ಮಿಶ್ರ

Team Udayavani, Sep 2, 2023, 12:29 AM IST

Mangaluru ಕರಾವಳಿಯ ಭದ್ರತೆಯಲ್ಲಿ ಕೋಸ್ಟ್‌ಗಾರ್ಡ್‌ ಮಹತ್ವದ ಪಾತ್ರ

ಮಂಗಳೂರು: ಭಾರತೀಯ ಕೋಸ್ಟ್‌ ಗಾರ್ಡ್‌ ರಾಷ್ಟ್ರದ ಕರಾವಳಿ ಪ್ರದೇಶಗಳ ಭದ್ರತೆಯನ್ನು ಖಾತ್ರಿಪಡಿಸುವಲ್ಲಿ ಮತ್ತು ಕಡಲ್ಗಳ್ಳತನ, ಕಳ್ಳಸಾಗಣೆ, ಭಯೋತ್ಪಾದನೆ ಮತ್ತು ಕಾನೂನುಬಾಹಿರ ಚಟುವಟಿಕೆಗಳಂತಹ ವಿವಿಧ ಬೆದರಿಕೆಗಳಿಂದ ರಕ್ಷಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಕರಾವಳಿ ಕಾವಲು ಪಡೆ ಕರ್ನಾಟಕದ ಕಮಾಂಡೆಂಟ್‌ ಡಿಐಜಿ ಪಿ. ಕೆ. ಮಿಶ್ರ ಹೇಳಿದರು.

ಮಂಗಳೂರು ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಮತ್ತು ಎಂಜಿನಿಯರಿಂಗ್‌-ಮೈಟ್‌ ಇದರ ಏರೋನಾಟಿಕಲ್‌ ಎಂಜಿನಿಯರಿಂಗ್‌ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾದ “ಭಾರತೀಯ ಕರಾವಳಿ ಕಾವಲು ಪಡೆ ಸವಾಲುಗಳು ಮತ್ತು ಅವಕಾಶಗಳು’ ವಿಚಾರದ ಬಗ್ಗೆ ಒಂದು ದಿನದ ವೃತ್ತಿ ಮಾರ್ಗದರ್ಶನ ವಿಚಾರಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕೋಸ್ಟ್‌ಗಾರ್ಡ್‌ ಭಾರತದ ಕಡಲ ಹಿತಾಸಕ್ತಿಗಳನ್ನು ಕಾಪಾಡುವ ಮತ್ತು ದೇಶದ ಪ್ರಾದೇಶಿಕ ಜಲ ಮತ್ತು ವಿಶೇಷ ಆರ್ಥಿಕ ವಲಯದೊಳಗೆ ಕಡಲ ಕಾನೂನುಗಳನ್ನು ಜಾರಿಗೊಳಿಸುವ ಜವಾಬ್ದಾರಿಯನ್ನು ಹೊಂದಿದೆ. ಸಮುದ್ರದಲ್ಲಿ ತೊಂದರೆಯಲ್ಲಿರುವ ಹಡಗುಗಳು ಮತ್ತು ವ್ಯಕ್ತಿಗಳಿಗೆ ಸಹಾಯ ಮಾಡಲು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುವ ಜವಾಬ್ದಾರಿಯನ್ನು ಹೊಂದಿದೆ. ಸಂಕಷ್ಟದ ನೆರವಿಗಾಗಿ ಕರೆಗಳಿಗೆ ಪ್ರತಿಕ್ರಿಯಿಸುವುದು, ರಕ್ಷಣಾ ಕಾರ್ಯಾಚರಣೆ ಕೈಗೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.

ಅಲ್ಲದೆ ಸಮುದ್ರ ಪರಿಸರ ಮತ್ತು ಕರಾವಳಿ ಪ್ರದೇಶಗಳನ್ನು ರಕ್ಷಿಸಲು ಸಮುದ್ರ ಮಾಲಿನ್ಯದ ಘಟನೆಗಳು ಮತ್ತು ತೈಲ ಸೋರಿಕೆಗಳನ್ನು ತಡೆಗಟ್ಟುವಲ್ಲಿ ಮತ್ತು ಸ್ಪಂದಿಸುವಲ್ಲಿ ಕೋಸ್ಟ್‌ಗಾರ್ಡ್‌ ತೊಡಗಿಸಿಕೊಂಡಿದೆ. ಅಕ್ರಮ ಮೀನುಗಾರಿಕೆ, ಅನಧಿಕೃತ ಪ್ರವೇಶ, ಮತ್ತು ಸರಕು ಮತ್ತು ಜನರ ಕಳ್ಳಸಾಗಣೆಯನ್ನು ತಡೆಗಟ್ಟುವುದು ಸೇರಿದಂತೆ ವಿವಿಧ ಕಡಲ ಕಾನೂನುಗಳನ್ನು ಅನುಷ್ಠಾನ ಗೊಳಿಸುತ್ತದೆ. ಭಾರತದ ಕಡಲ ಗಡಿಗಳ ಮೇಲೆ ನಿರಂತರ ಕಣ್ಗಾವಲು ಇರಿಸುವ ಜತೆ ಚಂಡಮಾರುತಗಳು ಮತ್ತು ಸುನಾಮಿಯಂತಹ ನೈಸರ್ಗಿಕ ವಿಪತ್ತುಗಳ ಸಮಯದಲ್ಲಿ, ಮಾನವೀಯ ನೆರವು, ವಿಪತ್ತು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಸಂಘಟಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂದು ವಿವರಿಸಿದರು.

ಕಮಾಂಡೆಂಟ್‌ ಮಸೂದಿ ವೆಂಕಯ್ಯ ಮತ್ತು ಸಹಾಯಕ ಕಮಾಂಡೆಂಟ್‌ ದೀಪಕ್‌ ಚೋಪ್ರಾ ಪಾಲ್ಗೊಂಡಿದ್ದರು.

ಭಾರತೀಯ ಕೋಸ್ಟ್‌ ಗಾರ್ಡ್‌ ಪರಿಣಾಮಕಾರಿ ಕಣ್ಗಾವಲು, ಸಂವಹನ ಮತ್ತು ಕಡಲ ಘಟನೆಗಳಿಗೆ ಸ್ಪಂದಿಸುವುದಕ್ಕಾಗಿ ಆಧುನಿಕ ತಂತ್ರಜ್ಞಾನವನ್ನು ಹೊಂದಿರುವ ಹಡಗುಗಳು, ವೇಗದ ದೋಣಿಗಳು, ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳನ್ನು ಹೊಂದಿದೆ ಎಂದವರು ವಿವರಿಸಿದರು.

ಕಾಲೇಜಿನ ವಿವಿಧ ಎಂಜಿನಿಯರಿಂಗ್‌ ವಿಭಾಗಗಳ 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನ ಪಡೆದರು.

 

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-reasas

Americaದಲ್ಲಿ ಬಿಡುವಿನ ದಿನಗಳನ್ನು ಕಳೆಯುತ್ತಿರುವ ಧೋನಿ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.