U. T. Khader ಕರಾವಳಿಯ ಸಂಸ್ಕೃತಿ ಅಂತಾರಾಷ್ಟ್ರೀಯ ಮಟ್ಟಕ್ಕೆ
"ಶೌರ್ಯ' ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ಶಿಪ್ಗೆ ಮಂಗಳೂರಿನಲ್ಲಿ ಚಾಲನೆ
Team Udayavani, Sep 6, 2024, 11:13 PM IST
ಮಂಗಳೂರು: ಅಂತಾರಾಷ್ಟ್ರೀ ಯ ಮಟ್ಟದ ಕರಾಟೆ ಚಾಂಪಿಯನ್ ಆಯೋಜಿಸುವ ಮೂಲಕ ಕ್ರೀಡೆಗೆ ಪ್ರೋತ್ಸಾಹ ನೀಡುವುದು ಮಾತ್ರವಲ್ಲದೆ, ಕರಾವಳಿಯ ಸಂಸ್ಕೃತಿ ಪರಂಪರೆಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಪರಿಚಯಿ ಸುವ ಅವಕಾಶ ಲಭಿಸಿದೆ ಎಂದು ವಿಧಾನಸಭಾಧ್ಯಕ್ಷ ಹಾಗೂ ಕರಾಟೆ ಚಾಂಪಿಯನ್ಶಿಪ್ ಚೀಫ್-ಡಿ- ಮಿಶನ್ ಯು.ಟಿ. ಖಾದರ್ ಹೇಳಿದರು.
ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮಂಗಳೂರು ಡೋಜೋ ವತಿಯಿಂದ ಕುಲಶೇಖರ ಚರ್ಚ್ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ “ಶೌರ್ಯ’ ಕರಾಟೆ ಚಾಂಪಿಯನ್ಶಿಪ್ ಅನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.
ಕರಾಟೆಯಂತಹ ಕ್ರೀಡೆ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಸಹಕಾರಿ. ಹೆತ್ತವರ ಪ್ರೋತ್ಸಾಹ, ಸಹಕಾರದಿಂದ ಕರಾಟೆ ಇಂದಿಗೂ ಜೀವಂತವಾಗಿದೆ. ಅಂತಾ ರಾಷ್ಟ್ರೀಯ ಮಟ್ಟದ ಕರಾಟೆಗಳಿಗೆ ವಿದೇಶಗಳಿಗೆ ಅಥವಾ ದೇಶದ ಇತರರಾಜ್ಯಗಳಿಗೆ ತೆರಳಲು ಸಾಧ್ಯವಾಗ ದವರಿಗೆ ಮಂಗಳೂರಿನಲ್ಲಿ ಆಯೋಜಿಸಿ ರುವ ಈ ಚಾಂಪಿಯನ್ಶಿಪ್ ಒಂದು ಅವಕಾಶವಾಗಿದ್ದು, ಇದನ್ನು ಉತ್ತಮ ವಾಗಿ ಬಳಸಿಕೊಳ್ಳಬೇಕು ಎಂದರು.
ಮಂಗಳೂರು ಬಿಷಪ್ ಅ| ವಂ| ಡಾ| ಪೀಟರ್ ಪಾವ್ಲ್ ಸಲ್ಡಾನಾ ಅವರು ಕರಾಟೆ ಚಾಂಪಿಯನ್ಶಿಪ್ ಯಶಸ್ವಿಯಾಗಲಿ ಎಂದು ಆಶೀರ್ವದಿಸಿದರು.
ಉತ್ತಮ ಸ್ಪಂದನೆ: ಕಾಮತ್
ಅಧ್ಯಕ್ಷತೆ ವಹಿಸಿದ್ದ ಶಾಸಕ, ಸಂಘಟನೆ ಸಮಿತಿ ಚೇರ್ಮನ್ ಡಿ.ವೇದವ್ಯಾಸ ಕಾಮತ್ ಮಾತನಾಡಿ, ಇತ್ತೀಚಿನ ವರ್ಷಗಳಲ್ಲಿ ರಾಜ್ಯದಲ್ಲಿ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿ ಆಯೋಜನೆ ಆಗಿಲ್ಲ. ಈಗ ಮಂಗ ಳೂರಿನಲ್ಲಿ ನಡೆಯುತ್ತಿರುವ ಕರಾಟೆ ಚಾಂಪಿಯನ್ಶಿಪ್ಗೆ ದೊಡ್ಡ ಮಟ್ಟದ ಸ್ಪಂದನೆ ಸಿಕ್ಕಿದೆ. ಸ್ಥಳೀಯ ಹಿರಿಯ ಕರಾಟೆ ಪಟುಗಳು ತೀರ್ಪುಗಾರರ ಸಹಕಾರದಿಂದ ಅಂತಾರಾಷ್ಟ್ರೀಯ ಸ್ಪರ್ಧೆ ಯಶಸ್ವಿಯಾಗಿ ನಡೆಯಲಿ ಎಂದರು.
ಪಂದ್ಯಾವಳಿಯ ಡೈರೆಕ್ಟರ್ ಜನರಲ್ ಡಾ| ಎ. ಸದಾನಂದ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು.
ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಹಿರಿಯ ಸಲಹೆಗಾರ ರಾಜಗೋಪಾಲ್ ರೈ, ಕರಾಟೆ ಇಂಡಿಯಾ ಅಧ್ಯಕ್ಷ ಭರತ್ ಶರ್ಮಾ, ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯಾ ಅಧ್ಯಕ್ಷ ಈಶ್ವರ್ ಕಟೀಲು, ಕಾರ್ಯದರ್ಶಿ ಮಧು ಪಾಟೀಲ್, ಪ್ರಮುಖರಾದ ಕೆ.ತೇಜೋಮಯ, ರಮೇಶ್ ಕುಂದರ್, ಜನಾರ್ದನ್ ನಾಯಕ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಪ್ರದೀಪ್ ಡಿ’ಸೋಜಾ, ಯತೀಶ್ ಬೈಕಂಪಾಡಿ, ಕರ್ನಾಟಕ ಕರಾಟೆ ಅಧ್ಯಕ್ಷ ಭಾರ್ಗವ ರೆಡ್ಡಿ, ಸಂಘಟನೆ ಸಮಿತಿ ಅಧ್ಯಕ್ಷ ಸುರೇಂದ್ರ ಬಿ., ಉಪಾಧ್ಯಕ್ಷ ರೆ| ಫಾ|ಕ್ಲಿಫರ್ಡ್ ಫೆರ್ನಾಂಡಿಸ್, ಪ್ರಧಾನ ಕಾರ್ಯದರ್ಶಿ ಸೂರಜ್ ಕುಮಾರ್, ಖಜಾಂಚಿ ಸುಧೀರ್ ಸಾಲ್ಯಾನ್ ಉಪಸ್ಥಿತರಿದ್ದರು.
ಸಾವಿರಕ್ಕೂ ಅಧಿಕ ಸ್ಪರ್ಧಿಗಳು
ಶುಕ್ರವಾರ 6ರಿಂದ 14 ವರ್ಷದೊಳಗಿನ ಎಲ್ಲ ವಿಧದ ಕಲರ್ ಬೆಲ್ಟ್ಗಳ ಕರಾಟೆ ಪಟುಗಳಿಗೆ ಸ್ಪರ್ಧೆಗಳು ನಡೆದ ಸ್ಪರ್ಧೆಯಲ್ಲಿ ವಿವಿಧ ಶಾಲೆಗಳ ಸುಮಾರು ಒಂದು ಸಾವಿರಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸಿದ್ದರು. ಸೆ.7ರಂದು 14 ವರ್ಷ ಮೇಲ್ಪಟ್ಟವರಿಗೆ ಪಂದ್ಯಾಟ ನಡೆಯಲಿದೆ. ಸೆ.8ರಂದು ರವಿವಾರ ಬ್ಲ್ಯಾಕ್ ಬೆಲ್ಟ್ನವರ ಪಂದ್ಯಾಟ ನಡೆಯಲಿವೆ. ಇದರಲ್ಲಿ ಮಲೇಶ್ಯಾ, ಜೋರ್ಡಾನ್, ಜಪಾನ್, ಶ್ರೀಲಂಕಾ, ತಾಂಜಾನಿಯಾ ಮುಂತಾದ ದೇಶಗಳಿಂದ ಕರಾಟೆ ಪಟುಗಳ ತಂಡಗಳು ಭಾಗವಹಿಸಲಿವೆ. ಶನಿವಾರ ಮತ್ತು ರವಿವಾರ ಬೆಳಗ್ಗೆ 9.30ರಿಂದ ಸ್ಪರ್ಧೆಗಳು ಆರಂಭವಾಗಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
Mangaluru: ಮಾದಕವಸ್ತು ಸಹಿತ ಮೂವರ ಬಂಧನ
Mangaluru City Corporation: ಸೆ.19ರಂದು ಮೇಯರ್, ಉಪ ಮೇಯರ್ ಚುನಾವಣೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.