ಚೇಸ್‌ಗೆ ರೆಡಿಯಾದ ಕರಾವಳಿ ಚಿತ್ರತಂಡ!


Team Udayavani, Apr 5, 2018, 2:53 PM IST

5-April-13.jpg

ರಂಗಿತರಂಗ, ಒಂದು ಮೊಟ್ಟೆಯ ಕಥೆ, ಕಿರಿಕ್‌ ಪಾರ್ಟಿ, ರಿಕ್ಕಿ ಸಹಿತ ಅನೇಕ ಕನ್ನಡ ಚಲನಚಿತ್ರದಲ್ಲಿ ಕರಾವಳಿಯ ಹೊಸ ಮುಖಗಳು ಗುರುತಿಸಿಕೊಂಡು ಯಶಸ್ವಿಯಾಗಿವೆ. ಅದೇ ಪಟ್ಟಿಯಲ್ಲಿ ಈಗ ಮತ್ತೂಂದು ಹೊಸಬರ ಕನ್ನಡ ಚಲನಚಿತ್ರ ಸೇರ್ಪಡೆಯಾಗುವ ಹಂತದಲ್ಲಿದೆ. ಚಿತ್ರದ ಹೆಸರು ಚೇಸ್‌.

ನಿರ್ದೇಶಕ ಹರಿ ಆನಂದ್‌ ಅವರು ಚೇಸ್‌ ಚಿತ್ರದ ಮೂಲಕ ಮೊದಲ ಬಾರಿಗೆ ಚಂದನವಕ್ಕೆ ಕಾಲಿಡುತ್ತಿದ್ದಾರೆ. ಮಂಗಳೂರಿನ ಮನೋಹರ್‌ ಸುವರ್ಣ, ಪ್ರಶಾಂತ್‌ ಶೆಟ್ಟಿ, ಪ್ರದೀಪ್‌ ಶೆಟ್ಟಿ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದರೆ, ಜನಾರ್ದನ್‌ ಎನ್‌. ಅವರು ಸಹ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಚಿತ್ರದ ಫಸ್ಟ್‌ ಲುಕ್‌ ಪೋಸ್ಟರ್‌ ಈಗಾಗಲೇ ಯೂಟ್ಯೂಬ್‌ನಲ್ಲಿ ಬಿಡುಗಡೆಗೊಂಡಿದೆ.

ಸಿಂಪ್ಲಿ ಫನ್‌ ಮೀಡಿಯಾ ನೆಟ್‌ವರ್ಕ್‌ ಫ್ರೈವೆಟ್‌ ಲಿಮಿಟೆಡ್‌ ಲಾಂಛನದಲ್ಲಿ ತಯಾರಾಗುತ್ತಿರುವ ಈ ಚಿತ್ರ ಸ್ಯಾಂಡಲ್‌ ವುಡ್‌ನ‌ಲ್ಲಿ ಭಾರೀ ಕುತೂಹಲ ಮೂಡಿಸಿರುವುದು ಸುಳ್ಳಲ್ಲ. ಲಾಸ್ಟ್‌ಬಸ್‌ ಚಲನಚಿತ್ರದ ಮೂಲಕ ಈಗಾಗಲೇ ಗುರುತಿಸಿಕೊಂಡ ಹಾಸ್ಯನಟ ನರಸಿಂಹ ರಾಜ್‌ ಅವರ ಪುತ್ರ ಅವಿನಾಶ್‌ ನರಸಿಂಹ ರಾಜ್‌ ಅವರು ಈ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಎಬಿಸಿಡಿ, ಎಬಿಸಿಡಿ-2 ಹಿಂದಿ ಚಲನಚಿತ್ರದಲ್ಲಿ ಮಿಂಚಿದ್ದ ಸುಶಾಂತ್‌ ಪೂಜಾರಿ ಅವರು ಈ ಚಿತ್ರದ ಮೂಲಕ ಮೊದಲ ಬಾರಿಗೆ ಸ್ಯಾಂಡಲ್‌ ವುಡ್‌ಗೆ ಪಾದಾರ್ಪಣೆ ಮಾಡಲಿದ್ದಾರೆ.  ಉಳಿದಂತೆ ಈ ಚಿತ್ರದಲ್ಲಿ ಕರಾವಳಿ ಮೂಲದ ಕಲಾವಿದರ ದಂಡೇ ಇದೆ.

ಈಗಾಗಲೇ ರಂಗಿತರಂಗ, ಯೂಟರ್ನ್, ಕಾಫಿ ತೋಟ ಚಿತ್ರಗಳ ಮೂಲಕ ಹೆಸರುಗಳಿಸಿದ ರಾಧಿಕಾ ಚೇತನ್‌ ಚಾಲೆಂಜಿಂಗ್‌ ಪಾತ್ರ ನಿರ್ವಹಿಸಲಿದ್ದಾರೆ. ಬಿಗ್‌ಬಾಸ್‌ ರಿಯಾಲಿಟಿ ಶೋ ಖ್ಯಾತಿಯ ಶೀತಲ್‌ ಶೆಟ್ಟಿ, ಅಕ್ಕ ಖ್ಯಾತಿಯ ಅರ್ಜುನ್‌ ಯೋಗೇಶ್‌ ರಾಜ್‌ ಸಹಿತ ತುಳು ಚಿತ್ರ ರಂಗದ ಹಾಸ್ಯ ನಟ ಅರವಿಂದ್‌ ಬೋಳಾರ್‌, ಅರವಿಂದ ರಾವ್‌, ರಾಜೇಶ್‌ ನಟರಂಗ, ಉಷಾ ಭಂಡಾರಿ, ಪ್ರಮೋದ್‌ ಶೆಟ್ಟಿ ಮತ್ತಿತರರು ಬಣ್ಣ ಹಚ್ಚಿದ್ದಾರೆ.

ಈ ಚಿತ್ರದ ಮತ್ತೂಂದು ವಿಶೇಷವೆಂದರೆ ಭಾರತದ ಏಕೈಕ ಶ್ವಾನ ಮನಶಾಃಸ್ತ್ರಜ್ಞ ಡಾಗ್‌ ಗುರು ಅಮೃತ ಶ್ರೀಧರ್‌ ಹಿರಣ್ಯ ಅವರಿಂದ ತರಬೇತಿ ಪಡೆದ ಮ್ಯಾಕ್ಸ್‌ ಎಂಬ ಲ್ಯಾಬಡ್ರಾರ್‌ ನಾಯಿಯೂ ಚಿತ್ರ ದಲ್ಲಿ ಕಾಣಿಸಲಿದೆ. ಚಿತ್ರಕ್ಕೆ ಶ್ರೀ ಕ್ರೇಜಿ ಮೈಂಡ್ಸ್‌ ಸಂಕಲನವಿದ್ದು, ಕಾರ್ತಿಕ್‌ ಆಚಾರ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ. ಡಾ| ಉಮೇಶ್‌ ಪಿಲಿಕುಡೇಲು ಸಾಹಿತ್ಯ ಬರೆದಿದ್ದಾರೆ. ಡಿಫರೆಂಟ್‌ ಡ್ಯಾನಿ, ಚೇತನ್‌ ಡಿ’ಸೋಜಾ ಅ ವರ ಸಾಹಸ ಸಂಯೋಜನೆ, ಸಾಯಿ ಕೃಷ್ಣ ಅವರ ವಿನ್ಯಾಸ, ವಿನಯ್‌ ಭಾರದ್ವಾಜ್‌, ಪರಿಮಳ ಶೆಟ್ಟಿಯವರ ವಸ್ತ್ರ ವಿನ್ಯಾಸವಿದೆ.

ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.