![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 9, 2023, 7:45 AM IST
ಮಂಗಳೂರು : ಕರಾವಳಿಯಲ್ಲಿ ಚಳಿಯ ತೀವ್ರತೆ ಹೆಚ್ಚಾಗು ತ್ತಿದ್ದು, ಕನಿಷ್ಠ ಉಷ್ಣಾಂಶ ಇಳಿಮುಖ ಗೊಳ್ಳುತ್ತಿದೆ. ಜನರಲ್ಲಿ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ.
ಬೆಳಗ್ಗೆ, ಸಂಜೆ ಶೀತ ಗಾಳಿ ಜತೆಗೆ ಇಬ್ಬನಿ ಬೀಳುತ್ತಿದ್ದು, ಜ್ವರ, ಶೀತ- ಕೆಮ್ಮು, ಗಂಟಲು ನೋವು ಇತ್ಯಾದಿ ಕಾಣಿಸಿಕೊಳ್ಳುತ್ತಿದೆ. ಅಲರ್ಜಿ, ಅಸ್ತಮಾ ರೋಗಿಗಳು ಮತ್ತಷ್ಟು ಎಚ್ಚರ ವಹಿಸಬೇಕಾದ ಆವಶ್ಯಕತೆ ಇದೆ. ಚಳಿಗಾಲದಲ್ಲಿ ಬ್ಯಾಕ್ಟೀರಿಯಾ, ವೈರಸ್ಗಳ ಬೆಳವಣಿಗೆ ಹೆಚ್ಚಾಗಿ ರೋಗನಿರೋಧಕ ಶಕ್ತಿ ಕುಂದುವ ಅಪಾಯವಿರುತ್ತದೆ. ಆದ್ದರಿಂದ ಈ ಅವಧಿಯಲ್ಲಿ ನಮ್ಮ ಜೀವನ ಶೈಲಿಯನ್ನು ಬದಲಾಯಿಸಬೇಕಿದೆ. ಐಸ್ಕ್ರೀಂ ಸಹಿತ ತಂಪು ಆಹಾರ ದಿಂದ ದೂರ ಇರುವುದು, ಕರಿದ ಪದಾರ್ಥಗಳನ್ನು ಹೆಚ್ಚು ಬಳಸದೇ ಇರುವುದು ಸೂಕ್ತ.
ಜಿಲ್ಲೆಯಲ್ಲಿ ಎಚ್1 ಎನ್1, ಮಲೇರಿಯಾಕ್ಕೆ ತುತ್ತಾಗುವವರ ಸಂಖ್ಯೆ ಕಡಿಮೆಯಾಗಿದೆ. ಒಂದು ವೇಳೆ ಮಕ್ಕಳಲ್ಲಿ ವೈರಾಣು ಜ್ವರ ಕಾಣಿಸಿಕೊಂಡರೆ ಶಾಲೆಗೆ ಕಳುಹಿಸ ಬಾರದು. ಜ್ವರ ಇದ್ದವರು ಕರವಸ್ತ್ರ, ಟವೆಲ್ ಬಳಸಿ ರೋಗಾಣು ಇತರರಿಗೆ ಹರಡದಂತೆ ಎಚ್ಚರಿಕೆ ವಹಿಸಬೇಕು ಎಂಬುದು ವೈದ್ಯರ ಸಲಹೆ.
ಜೀವನ ಶೈಲಿ ಹೀಗಿರಲಿ
– ಹೊರಗಿನ ಆಹಾರ ಸೇವನೆ ಮಿತವಾಗಿರಲಿ
– ಕೈಕಾಲುಗಳನ್ನು ಚೆನ್ನಾಗಿ ತೊಳೆದುಕೊಳ್ಳಿ, ಬೆಚ್ಚಗಿನ ಉಡುಪು ಧರಿಸಿ
– ಹೊರಗಡೆ ಹೋಗುವಾಗ ಮಾಸ್ಕ್ ಧರಿಸುವುದು ಉತ್ತಮ
– ಸಮಯಕ್ಕೆ ಸರಿಯಾಗಿ ಮಿತ ಆಹಾರ ಸೇವಿಸಿ
– ಕುದಿಸಿ ಆರಿಸಿದ ನೀರು, ಬಿಸಿ ಆಹಾರವನ್ನು ಸೇವಿಸಿ
– ಚಳಿಗಾಲದಲ್ಲಿ ಸಂಧಿವಾತವನ್ನು ತಪ್ಪಿಸಲು ದೇಹ ಬೆಚ್ಚಗಿರುವಂತೆ ನೋಡಿಕೊಳ್ಳಿ, ವ್ಯಾಯಾಮ ಮಾಡಿ
– ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರ ಸೇವಿಸಿ
ಚಳಿಗಾಲದಲ್ಲಿ ವೈರಲ್ ಜ್ವರದ ಸಾಧ್ಯತೆ ಇದೆ. ಡೆಂಗ್ಯೂ ತೀವ್ರತೆ ಕಡಿಮೆ ಇದೆ. ಆದರೂ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು.
– ನವೀನ್ ಚಂದ್ರ ಕುಲಾಲ್, ಜಿಲ್ಲಾ ರೋಹವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.