ಬಾಲಕಿಯರನ್ನು ಬಳಸಿ ವೇಶ್ಯಾವಾಟಿಕೆ ಪ್ರಕರಣ: ಮಾಲ್‌, ಪಾರ್ಕ್‌, ಥಿಯೇಟರ್‌ಗಳಲ್ಲಿ ಆಮಿಷ!

ವಿದ್ಯಾರ್ಥಿನಿಯರೇ ಈ ಜಾಲದ ಬಗ್ಗೆ ಎಚ್ಚರವಿರಲಿ!

Team Udayavani, Mar 27, 2022, 8:35 AM IST

ಬಾಲಕಿಯರನ್ನು ಬಳಸಿ ವೇಶ್ಯಾವಾಟಿಕೆ ಪ್ರಕರಣ: ಮಾಲ್‌, ಪಾರ್ಕ್‌, ಥಿಯೇಟರ್‌ಗಳಲ್ಲಿ ಆಮಿಷ!

ಮಂಗಳೂರು: “ಖರ್ಚಿಗೆ ಹಣ ಬೇಕಾ, ಶಾಪಿಂಗ್‌ ಮಾಡಬೇಕಾ, ಸಿನೆಮಾ ನೋಡಬೇಕಾ…?’
ವೇಶ್ಯಾವಾಟಿಕೆ ಜಾಲಕ್ಕೆ ವಿದ್ಯಾರ್ಥಿನಿಯರನ್ನು ಸೆಳೆಯಲು ಪಿಂಪ್‌ ಗಳು (ಬ್ರೋಕರ್) ನೀಡುವ ಆಫ‌ರ್‌ಗಳು ಇವು!
ಜಾಲಕ್ಕೆ ಬಡವರ್ಗದ ಮಕ್ಕಳು!

ಅಪ್ರಾಪ್ತ ವಯಸ್ಸಿನ ಬಾಲಕಿಯರನ್ನು (ವಿದ್ಯಾರ್ಥಿನಿಯರು) ಬಳಸಿ ನಡೆಯು ತ್ತಿದ್ದ ಹೈಟೆಕ್‌ ವೇಶ್ಯಾವಾಟಿಕೆ ದಂಧೆ ಕಳೆದ ತಿಂಗಳು ಮಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು ಪೊಲೀಸ್‌ ತನಿಖೆ ಮುಂದುವರಿದಿದೆ. ದಂಧೆಗೆ ಬಾಲಕಿಯರನ್ನು ಕರೆತರಲು ಪಿಂಪ್‌ಗ್ಳು ಮಾಲ್‌, ಸಿನೆಮಾ ಥಿಯೇಟರ್‌, ಹೊಟೇಲ್‌, ಪಾರ್ಕ್‌ ಮೊದಲಾದೆಡೆ ಹಲವು ದಿನಗಳ ಕಾಲ ಹೊಂಚು ಹಾಕಿರುವುದು ತನಿಖೆ ವೇಳೆ ಗೊತ್ತಾಗಿದೆ. ಅಲ್ಲದೆ ಹೆಚ್ಚಾಗಿ ಬಡವರ್ಗದ ವಿದ್ಯಾರ್ಥಿನಿಯರನ್ನೇ ಗುರಿ ಮಾಡಿರುವುದು ತಿಳಿದುಬಂದಿದೆ.

ವಿದ್ಯಾರ್ಥಿನಿಯರನ್ನು ನಿರಂತರವಾಗಿ ಗಮನಿಸುತ್ತಾ ಅವರ ಬೇಕು-ಬೇಡಗಳ ಬಗ್ಗೆ ತಿಳಿದು ಮಹಿಳಾ ಪಿಂಪ್‌ಗ್ಳು ಬಲೆ ಬೀಸುತ್ತಾರೆ. ಮೊದಲಿಗೆ ಪರಿಚಯಸ್ಥರಂತೆ ವರ್ತಿಸುತ್ತಾರೆ. ಅದರಲ್ಲಿ ಯಶಸ್ವಿಯಾದರೆ ಮುಂದುವರಿಯುತ್ತಾರೆ. ಇಲ್ಲವಾದರೆ ಸಮಸ್ಯೆ ಇಲ್ಲವೇ ಸಹಾಯದ ಬಗ್ಗೆ ಮಾತು ಆರಂಭಿಸುತ್ತಾರೆ. ಹೆಣ್ಣು ಮಕ್ಕಳಿಗೆ ಹಿತವಾಗುವಂತೆ ಆತ್ಮೀಯವಾಗಿ ಮಾತಿಗಿಳಿದು ಅವರ ಸಂಪರ್ಕ ಸಾಧಿಸುತ್ತಾರೆ. ಮುಂದೆ “ಗೆಳೆತನ’ ಸಾಧಿಸಿ ಕೆಲವೊಂದು ಸಹಾಯವನ್ನೂ ಪಿಂಪ್‌ಗ್ಳು ಮಾಡುತ್ತಾರೆ. ಅಗತ್ಯವಿರುವ ಹಣ, ಬಟ್ಟೆ ಇನ್ನಿತರ ಗಿಫ್ಟ್ ಅನ್ನು ಕೊಡುತ್ತಾರೆ. ಮಾಲ್‌, ಹೊಟೇಲ್‌ಗ‌ಳಿಗೆ ಕರೆದೊಯ್ದು ಎಲ್ಲ ಬಿಲ್‌ಗ‌ಳನ್ನು ಪಾವತಿಸುತ್ತಾರೆ. ಐಷಾರಾಮಿ ಬದುಕಿನ ರುಚಿ ಹಿಡಿಸುತ್ತಾರೆ. ಆ ಬಳಿಕ ಹೀನ ಕೃತ್ಯ ಆರಂಭಿಸುತ್ತಾರೆ. ಬಲೆಗೆ ಬಿದ್ದ ಬಾಲಕಿಯ ಮೂಲಕ ಸಾಧ್ಯವಾದಷ್ಟು ಇತರ ಬಾಲಕಿಯರನ್ನು ತಮ್ಮ ತೆಕ್ಕೆಗೆ ಸೆಳೆಯಲು ತಂತ್ರ ಹೆಣೆಯುತ್ತಾರೆ.

ಬ್ಲ್ಯಾಕ್‌ ಮೇಲ್ ತಂತ್ರ
ಆರಂಭದಲ್ಲಿ ಕೇಳಿದ್ದನ್ನೆಲ್ಲ ಕೊಡುವ ದಂಧೆ ಕೋರರು ಅನಂತರ ಬಾಲಕಿಯರ ಫೋಟೋ, ವೀಡಿಯೋವನ್ನು ತೆಗೆದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಆರಂಭಿಸುತ್ತಾರೆ. ಆಗ ಸಂತ್ರಸ್ತೆಯರು ಏನೂ ಮಾಡಲಾಗದ ಸ್ಥಿತಿಯಲ್ಲಿರುತ್ತಾರೆ. ಇದಕ್ಕೆ ಅಂಜದೆ ಪೊಲೀಸ್‌ ಅಧಿಕಾರಿಗಳ ಗಮನಕ್ಕೆ ತರಬೇಕು. ಅವರು ಗೌಪ್ಯತೆಯಿಂದ ಕಾರ್ಯಾಚರಣೆ ನಡೆಸುತ್ತಾರೆ.

ಜಾಲದಲ್ಲಿ ಪ್ರಭಾವಿಗಳು
ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಪೊಲೀಸರು ಈಗಾ ಗಲೇ 16 ಮಂದಿಯನ್ನು ಬಂಧಿಸಿದ್ದಾರೆ. ಪೋಕೊÕà ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಂಧಿತರಲ್ಲಿ ಮೂಡುಬಿದಿರೆ, ಉಳ್ಳಾಲ, ಕಾಸರ ಗೋಡಿನವರಿದ್ದಾರೆ. ವಿವಿಧ ರಾಜಕೀಯ ಮುಖಂಡರ ಸಹವರ್ತಿಗಳು, ರಾಜಕೀಯ ಪಕ್ಷಗಳಲ್ಲಿ ಸಕ್ರಿಯರಾಗಿರುವವರು ಕೂಡ ಸೇರಿದ್ದಾರೆ. ಇನ್ನೂ ಹಲವು ಪ್ರಭಾವಿಗಳು ಜಾಲದಲ್ಲಿ ತೊಡಗಿಸಿಕೊಂಡಿದ್ದಾರೆನ್ನಲಾಗಿದೆ.

ಭಯ ಬಿಟ್ಟು ಹೆತ್ತವರಿಗೆ ತಿಳಿಸಿ
ಆಮಿಷ ಮತ್ತು ಬ್ಲ್ಯಾಕ್‌ಮೇಲ್ ಗೆ
ಒಳಗಾಗಿ ಬಾಲಕಿಯರು ಇಂತಹ ಜಾಲಕ್ಕೆ ಸಿಲುಕುತ್ತಿದ್ದಾರೆ. ಸಾಮಾನ್ಯವಾಗಿ ಹೆತ್ತವರು ಮತ್ತು ಮಕ್ಕಳ ನಡುವೆ ಸಂವಹನ ಸರಿಯಾಗಿ ಇಲ್ಲದೆ ಇಂತಹ ತೊಂದರೆಗಳು ಉಂಟಾಗುತ್ತವೆ. ಈ ರೀತಿಯ ಜಾಲಕ್ಕೆ ಬಿದ್ದಿದ್ದರೆ ಮಾನಕ್ಕೆ ಅಂಜಿ ಸುಮ್ಮನಿರದೆ ಹೆತ್ತವರಿಗೆ ಅಥವಾ ಶಿಕ್ಷಕರಿಗೆ ತಿಳಿಸಬೇಕು. ಗೌಪ್ಯವಾಗಿಯೇ ಕಾರ್ಯಾಚರಣೆ ನಡೆಸಲಾಗುತ್ತದೆ. ತೊಂದರೆ ಗೊಳಗಾದವರ ಮಾಹಿತಿಯನ್ನು ಕೂಡ ಯಾವುದೇ ಕಾರಣಕ್ಕೂ ಪೊಲೀಸರು ಬಹಿರಂಗಪಡಿಸುವುದಿಲ್ಲ. ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಿ ಇತರರು ಜಾಲಕ್ಕೆ ಬೀಳದಂತೆ ತಡೆಯಲು ಸಾಧ್ಯವಾಗುತ್ತದೆ.
– ಹರಿರಾಂ ಶಂಕರ್‌, ಡಿಸಿಪಿ, ಮಂಗಳೂರು

ಟಾಪ್ ನ್ಯೂಸ್

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

Mangaluru: ಹುಲಿ ವೇಷ ಬಣ್ಣಗಾರಿಕೆ ಹಿಂದಿದೆ ಶ್ರದ್ಧೆ, ಭಕ್ತಿ, ವಿಜ್ಞಾನ!

Mangaluru: ಹುಲಿ ವೇಷ ಬಣ್ಣಗಾರಿಕೆ ಹಿಂದಿದೆ ಶ್ರದ್ಧೆ, ಭಕ್ತಿ, ವಿಜ್ಞಾನ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

13-bng-rave-party

Bengaluru: ರೇವ್‌ ಪಾರ್ಟಿ: ಸಿಸಿಬಿ ವಿರುದ್ಧವೇ ದೂರು

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.