ಮನಪಾ ಆರ್ಥಿಕ ಸ್ಥಿತಿಗತಿಯ ಶ್ವೇತ ಪತ್ರಕ್ಕೆ ಕಾಂಗ್ರೆಸ್ ಒತ್ತಾಯ
Team Udayavani, Dec 31, 2022, 12:05 PM IST
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಆರ್ಥಿಕ ಸ್ಥಿತಿಗತಿ ಕುರಿತಂತೆ ಶ್ವೇತ ಪತ್ರ ಹೊರಡಿಸಬೇಕು ಎಂದು ಮಹಾನಗರ ಪಾಲಿಕೆಯ ಪ್ರತಿಪಕ್ಷವಾಗಿರುವ ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದ್ದಾರೆ.
ಮಲ್ಲಿಕಟ್ಟೆಯ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಒತ್ತಾಯ ಮಾಡಿದ ಪಾಲಿಕೆಯ ವಿಪಕ್ಷ ನಾಯಕ ನವೀನ್ ಡಿಸೋಜಾ, ಚರಂಡಿ, ಆವರಣಗೋಡೆಯಂತಹ ಕಾಮಗಾರಿಗಳಿಗೆ ಸಾಲ ಪಡೆಯುವುದನ್ನು ಕಾಂಗ್ರೆಸ್ ವಿರೋಽಸುತ್ತದೆ ಎಂದರು.
ಶುಕ್ರವಾರ ನಡೆದ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ 30 ಕೋಟಿ ರೂ.ಗಳ ಸಾಲಕ್ಕೆ ಮೇಯರ್ ವಿಪಕ್ಷ ಸದಸ್ಯರ ಜತೆ ಚರ್ಚಿಸದೆ, ಸಲಹೆ ಪಡೆಯದೆ ಪೂರ್ವ ಮಂಜೂರಾತಿ ನೀಡಿದ್ದಾರೆ. ಇದಕ್ಕೆ ಸಭೆಯಲ್ಲಿ ಈಗಾಗಲೇ ಆಕ್ಷೇಪ ವ್ಯಕ್ತಪಡಿಸಲಾಗಿದೆ. ಸಣ್ಣ ಪುಟ್ಟ ಕಾಮಗಾರಿಗಳಿಗೆ ಕೆಯುಡಿಎಫ್ ಸಿಯ ಸಾಲ ಪಡೆಯುವ ದುರ್ಗತಿ ಮಹಾನಗರ ಪಾಲಿಕೆಗೆ ಬಂದಿದೆಯೇ? ಎಂದು ಪ್ರಶ್ನಿಸಿದ ಅವರು ಈ ಬಗ್ಗೆ ಮುಖ್ಯಮಂತ್ರಿ, ನಗರಾಭಿವೃದ್ಧಿ ಸಚಿವರು ಹಾಗೂ ಕಾರ್ಯದರ್ಶಿಗೆ ಪತ್ರ ಬರೆಯಲಾಗುವುದು ಎಂದರು.
ಮುಂಬರುವ ಚುನಾವಣೆಯ ಸಂದರ್ಭದಲ್ಲಿ ಈ ವಿಷಯವನ್ನು ಜನತೆಯ ಮುಂದಿಡಲಾಗುವುದು. ಇದಕ್ಕಾಗಿ ಹೋರಾಟ ಮಾಡುವ ಕುರಿತಂತೆ ಮುಂದಿನ ದಿನಗಳಲ್ಲಿ ಪಕ್ಷದ ನಾಯಕರ ಜತೆ ಚರ್ಚಿಸಿ ಕ್ರಮ ವಹಿಸಲಾಗುವುದು ಎಂದು ನವೀನ್ ಡಿಸೋಜಾ ಹೇಳಿದರು.
ಮನಪಾದ ಕ್ರಿಯಾ ಯೋಜನೆ ರೂಪಿಸಲು ಅವಕಾಶ ಇರುವುದು ಮೇಯರ್ಗೆ ಮಾತ್ರ. ಶಾಸಕರು ಸರಕಾರದಿಂದ ವಿಶೇಷ ಅನುದಾನದ ತಂದು ಯೋಜನೆಗಳನ್ನು ರೂಪಿಸಲಿ ಎಂದು ಮನಪಾ ಹಿರಿಯ ಸದಸ್ಯ ಶಶಿಧರ ಹೆಗ್ಡೆ ಹೇಳಿದರು.
ಗೋಷ್ಠಿಯಲ್ಲಿ ಅನಿಲ್ ಕುಮಾರ್, ಅಬ್ದುಲ್ ರವೂಫ್, ಅಶ್ರಫ್ , ಕೇಶವ ಮರೋಳಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.