Congress ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ: ಡಾ| ನಾಸಿರ್ ಹುಸೇನ್
Team Udayavani, Oct 20, 2023, 11:52 PM IST
ಮಂಗಳೂರು: ಪಕ್ಷದಿಂದ ನಡೆಸಿರುವ ಆಂತರಿಕ ಸಮೀಕ್ಷೆ ಪ್ರಕಾರ ಮುಂಬರುವ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಲಿದ್ದು, ಇದು 2024ರ ಲೋಕಸಭೆ ಚುನಾವಣೆಗೂ ದೊಡ್ಡ ಉತ್ತೇಜನ ನೀಡಲಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಮತ್ತು ರಾಜ್ಯಸಭಾ ಸದಸ್ಯ ಡಾ| ಸೈಯದ್ ನಾಸಿರ್ ಹುಸೇನ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿ, ಬಿಜೆಪಿಯವರು ದ್ವೇಷ ರಾಜಕಾರಣ ನಡೆಸಿದರೂ ನಾವು ನಿರುದ್ಯೋಗ, ಬಡತನ, ಬೆಲೆಏರಿಕೆ, ಭ್ರಷ್ಟಾಚಾರ ವಿರುದ್ಧದ ನಿಲುವು, ಮಣಿಪುರ ಹಿಂಸಾಚಾರ, ಅದಾನಿ ವಿಷಯಗಳ ಆಧಾರದಲ್ಲಿ ವಿಚಾರ ಪ್ರಸ್ತುತಪಡಿಸುತ್ತೇವೆ. ಇದು ಮುಂದಿನ ಚುನಾವಣೆಗಳಲ್ಲಿ ಸಕಾರಾತ್ಮಕ ಪರಿಣಾಮ ಬೀರಲಿದೆ. ಭಾರತ್ ಜೋಡೊ ಯಾತ್ರೆಯ ಫಲವಾಗಿ ಹಿಮಾಚಲ ಪ್ರದೇಶ, ಕರ್ನಾಟಕದಲ್ಲಿ ಗೆದ್ದಿದೇವೆ. ಅದೇ ರೀತಿ ಮಿಜೋರಾಂ ಸಹಿತ ಎಲ್ಲ ಐದೂ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರ ಪಡೆಯುವುದು ನಿಶ್ಚಿತ ಎಂದು ಪ್ರತಿಪಾದಿಸಿದರು.
ಕರಾವಳಿಯಲ್ಲಿ ಕೋಮು ಆಧಾರದ ಧ್ರುವೀಕರಣವನ್ನು ಕಾಂಗ್ರೆಸ್ ಸರಕಾರ ಸಹಿಸುವುದಿಲ್ಲ. ಕಾನೂನನ್ನು ಕಠಿನವಾಗಿ ಕಾರ್ಯರೂಪಕ್ಕೆ ತರಲಿದ್ದೇವೆ. ಅನೈತಿಕ ಪೊಲೀಸ್ಗಿರಿ, ದ್ವೇಷ ಭಾಷಣ, ದ್ವೇಷದ ಕೃತ್ಯಗಳನ್ನು ನಿಲ್ಲಿಸದಿದ್ದರೆ ಕರಾವಳಿ ಪ್ರದೇಶ ಈ ಹಿಂದಿನಂತೆ ಅಭಿವೃದ್ಧಿಯಾಗಲು ಸಾಧ್ಯವಿಲ್ಲ. ಇಲ್ಲಿ ಹೂಡಿಕೆಗೂ ಯಾರೂ ಬರುವುದಿಲ್ಲ. ಅದಕ್ಕಾಗಿ ಈ ಭಾಗದಲ್ಲಿ ಶಾಂತಿ ಸ್ಥಾಪನೆಯ ಉದ್ದೇಶ ಹೊಂದಿದ್ದು ಕಾಂಗ್ರೆಸ್ ಪಕ್ಷವನ್ನೂ ಮತ್ತೆ ಕಟ್ಟುವ ಕಾರ್ಯ ಮಾಡುತ್ತಿದ್ದೇವೆ ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಅಬ್ದುಲ್ ಜಬ್ಟಾರ್, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಐವನ್ ಡಿ’ಸೋಜಾ, ಮುಖಂಡರಾದ ಇಬ್ರಾಹಿಂ ಕೋಡಿಜಾಲ್, ಇನಾಯತ್ ಆಲಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.