Railway track ದುಷ್ಕೃತ್ಯಕ್ಕೆ ಸಂಚು: ಉಳ್ಳಾಲ, ರೈಲ್ವೇ ಪೊಲೀಸರಿಂದ ತನಿಖೆ ಚುರುಕು


Team Udayavani, Oct 21, 2024, 6:28 AM IST

1-a-trail

ಉಳ್ಳಾಲ: ತೊಕ್ಕೊಟ್ಟು ಓವರ್‌ ಬ್ರಿಡ್ಜ್ ಗಣೇಶ್‌ ನಗರ ಬಳಿ ರೈಲು ಹಳಿ ಮೇಲೆ ಜಲ್ಲಿಕಲ್ಲು ಇಟ್ಟಿರುವ ಪ್ರಕರಣದ ತನಿಖೆ ಚುರುಕುಗೊಂಡಿದೆ. ಉಳ್ಳಾಲ ಪೊಲೀಸರು ಮತ್ತು ರೈಲ್ವೇ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಜಲ್ಲಿ ಕಲ್ಲು ಇಟ್ಟಿರುವುದನ್ನು ದೃಢಪಡಿಸಿದ್ದು, ಆರೋಪಿಗಳನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ.

ಶನಿವಾರ ತಡರಾತ್ರಿ ಮಂಗಳೂರಿ ನಿಂದ ಕೇರಳ ಮತ್ತು ಕೇರಳದಿಂದ ಮಂಗಳೂರಿಗೆ ಸಂಚರಿಸುವ ರೈಲು ಹಳಿಯಲ್ಲಿ ರೈಲ್ವೇ ಹಳಿಯ ಬದಿಯಲ್ಲಿದ್ದ ಜಲ್ಲಿಕಲ್ಲುಗಳನ್ನು ಕಿಡಿಗೇಡಿಗಳು ರೈಲು ಹಳಿಯ ಮೇಲೆ ಇಟ್ಟು ವಿಧ್ವಂಸಕ ಕೃತ್ಯಕ್ಕೆ ಯತ್ನಿಸಿದ್ದರು. ಒಂದು ರೈಲು ಹಳಿಯಲ್ಲಿ ಕೇರಳಕ್ಕೆ ರೈಲು ಸಂಚಾರ ನಡೆಸಿದಾಗ ಸಣ್ಣ ಸದ್ದು ಕೇಳಿದ್ದು, ಇನ್ನೊಂದು ಹಳಿಯಲ್ಲಿ ಮಂಗಳೂರು ಕಡೆ ರೈಲು ಸಂಚರಿಸಿದಾಗ ದೊಡ್ಡ ಸದ್ದು ಕೇಳಿದ್ದು, ಸ್ಥಳೀಯ ಮನೆಮಂದಿ ಬೆಚ್ಚಿ ಬಿದ್ದಿದ್ದರು. ಘಟನೆಗೆ ಸಂಬಂಧಿಸಿ ಸ್ಥಳೀಯರು ರೈಲ್ವೇ ಅಧಿಕಾರಿಗಳಿಗೆ ಮತ್ತು ಉಳ್ಳಾಲ ಪೊಲೀಸರಿಗೆ ದೂರು ನೀಡಿದರೆ, ರೈಲಿನ ಲೋಕೋಪೈಲಟ್‌ ಹಳಿಯಲ್ಲಿ ಕಲ್ಲುಗಳನ್ನು ಇಟ್ಟ ವಿಚಾರದಲ್ಲಿ ಮಂಗಳೂರು ರೈಲ್ವೇ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ರೈಲ್ವೇ ಪೊಲೀಸರು ಮತ್ತು ಉಳ್ಳಾಲ ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು.

ಸ್ಥಳ ಪರಿಶೀಲನೆ
ರವಿವಾರ ರೈಲ್ವೇ ಪೊಲೀಸರು ಮತ್ತು ಉಳ್ಳಾಲ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ತನಿಖೆ ಆರಂಭಿಸಿದ್ದಾರೆ. ರೈಲ್ವೇ ಅಧಿಕಾರಿಗಳು ಭೇಟಿ ನೀಡಿ ಘಟನೆಗೆ ಸಂಬಂಧಿಸಿ ಸ್ಥಳೀಯರಲ್ಲಿ ವಿಚಾರಣೆ ನಡೆಸಿದ್ದಾರೆ.

ಹಲವು ಬಾರಿ ಕೃತ್ಯ
ರೈಲ್ವೇ ಅಧಿಕಾರಿಯೊಬ್ಬರು ಮಾತನಾಡಿ, ಸಾಮಾನ್ಯವಾಗಿ ಉಳ್ಳಾಲದಿಂದ – ಮಂಗಳೂರು ನಡುವೆ ರೈಲು ಹಳಿ ಮೇಲೆ ಒಂದೆರಡು ಜಲ್ಲಿಕಲ್ಲು ಇಡುವ ಹಲವು ಪ್ರಕರಣಗಳು ನಡೆದಿದ್ದು, ಲೋಕೋ ಪೈಲಟ್‌ಗಳು ರೈಲ್ವೇ ಸ್ಟೇಷನ್‌ನಲ್ಲಿ ವರದಿ ನೀಡುತ್ತಾರೆ. ಹಲವು ಬಾರಿ ಈ ವ್ಯಾಪ್ತಿಯಲ್ಲಿ ದೂರುಗಳು ಬಂದ ಹಿನ್ನೆಲೆಯಲ್ಲಿ ಪೊಲೀಸರು ಗಸ್ತು ಆರಂಭಿಸಿದ್ದಾರೆ. ಈ ಘಟನೆಯನ್ನು ರೈಲ್ವೇ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಗಳ ಪತ್ತೆ ಕಾರ್ಯ ನಡೆಸಲಾಗುವುದು ಎಂದು ಹೇಳಿದರು.

ರೈಲು ಹಳಿ ಮೇಲೆ ಕಲ್ಲು ಇಟ್ಟಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಈ ನಿಟ್ಟಿನಲ್ಲಿ ರೈಲ್ವೇ ಇಲಾಖೆ, ರೈಲ್ವೇ ಪೊಲೀಸರು ಮತ್ತು ಉಳ್ಳಾಲ ಪೊಲೀಸರು ಜಂಟಿಯಾಗಿ ತನಿಖೆ ನಡೆಸಬೇಕು. ಘಟನೆ ನಡೆದ ವ್ಯಾಪ್ತಿಯ ಮೊಬೈಲ್‌ ಲೊಕೇಷನ್‌ ಪತ್ತೆ ಮಾಡಿ ಶಂಕಿತರನ್ನು ವಶಕ್ಕೆ ಪಡೆದು ತನಿಖೆಗೆ ಒಳಪಡಿಸಬೇಕು. ಈ ಘಟನೆಗೆ ಸಂಬಂಧಿಸಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತೇನೆ. ಮುಂದೆ ಇಂತಹ ಘಟನೆ ನಡೆಯದಂತೆ ಇಲಾಖೆ ಮುನ್ನೆಚ್ಚರಿಕೆ ವಹಿಸಬೇಕು ಮತ್ತು ಸ್ಥಳೀಯರು ಇದಕ್ಕೆ ಸಹಕಾರ ನೀಡಬೇಕು.
– ಯು.ಟಿ. ಖಾದರ್‌, ವಿಧಾನಸಭಾ ಸ್ಪೀಕರ್‌

ರೈಲು ಹಳಿಗಳ ಮೇಲೆ ಕಲ್ಲಿಟ್ಟಿರುವ ಪ್ರಕರಣವು ತೀವ್ರ ಕಳವಳಕಾರಿಯಾಗಿದ್ದು, ರಾಜ್ಯ ಕಾಂಗ್ರೆಸ್‌ ಸರಕಾರ ಹಾಗೂ ಪೊಲೀಸ್‌ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಕೆಲವು ತಿಂಗಳ ಹಿಂದೆ ನೆರೆಯ ಕಾಸರಗೋಡಿನ ವಿವಿಧೆಡೆಯೂ ಹಳಿ ಮೇಲೆ ಕಲ್ಲು, ಕಬ್ಬಿಣದ ಸರಳು, ಕಾಂಕ್ರೀಟ್‌ ತುಂಡುಗಳನ್ನಿರಿಸಿ ರೈಲು ಹಳಿ ತಪ್ಪಿಸುವ ವಿಧ್ವಂಸಕ ಕೃತ್ಯ ನಡೆಸಲಾಗಿತ್ತು. ಈಗ ಮಂಗಳೂರಿನಲ್ಲೂ ಇಂಥ ಘಟನೆ ನಡೆದಿರುವುದು ತೀರಾ ಆಘಾತಕಾರಿ.
ವೇದವ್ಯಾಸ ಕಾಮತ್‌, ಶಾಸಕರು

ಟಾಪ್ ನ್ಯೂಸ್

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

012

Jayarama Acharya: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

Paduvari-Someshwara-beach

Tourism: ರಾಜ್ಯದ 7 ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಮುನ್ನುಡಿ

Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ

Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ

Salmana

Baba Siddiqui Case: ಸಲ್ಮಾನ್‌ ಹತ್ಯೆಗೆ ಸಂಚು ಆರೋಪಿಗೆ ಪೊಲೀಸರಿಂದ ಹನಿಟ್ರ್ಯಾಪ್‌ ಬಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

012

Jayarama Acharya: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

1-a-MLC

MLC Election; ಇಂದು ವಿಧಾನಪರಿಷತ್‌ ಉಪ ಚುನಾವಣೆ

drowned

Suratkal; ಎಂಜಿನಿಯರಿಂಗ್‌ ವಿದ್ಯಾರ್ಥಿ ಸಮುದ್ರಪಾಲು

police crime

Thinagalady: ಕಾಂಗ್ರೆಸ್‌ ಮುಖಂಡನ ಮೇಲೆ ಹಲ್ಲೆ

1-a-sidili

Puttur: ಸಿಡಿಲು ಬಡಿದು ಹಾನಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

012

Jayarama Acharya: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

Paduvari-Someshwara-beach

Tourism: ರಾಜ್ಯದ 7 ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಮುನ್ನುಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.