ಕಂಬಳದ ಉಳಿವಿಗೆ ಕೇಂದ್ರದಿಂದ ಸಹಕಾರ: ಸಂಸದ ನಳಿನ್‌


Team Udayavani, Nov 27, 2017, 10:56 AM IST

27-Nov-4.jpg

ಪುಂಜಾಲಕಟ್ಟೆ: ತುಳು ನಾಡಿನ ಜಾನಪದ ಕ್ರೀಡೆ ಕಂಬಳ ಉಳಿಸಿ ಬೆಳೆಸುವಲ್ಲಿ ಕೇಂದ್ರ ಸರಕಾರದ ವತಿಯಿಂದ ಸಂಪೂರ್ಣ ಸಹಕಾರ ದೊರಕಿಸಿಕೊಡಲಾಗುವುದು ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

ಬಂಟ್ವಾಳ-ಬೆಳ್ತಂಗಡಿ ತಾಲೂಕುಗಳ ಗಡಿ ಭಾಗದಲ್ಲಿರುವ ಎಲಿಯ ನಡುಗೋಡು ಗ್ರಾಮದ ಹೊಕ್ಕಾಡಿಗೋಳಿಯಲ್ಲಿ ಶನಿವಾರ ನಡೆದ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳದ ಸಮಾರೋಪ ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಅರಣ್ಯ ಸಚಿವ ಬಿ. ರಮಾನಾಥ ರೈ ಮಾತನಾಡಿ, ರಾಜಾಶ್ರಯದಿಂದ ಜನಾಶ್ರಯ ಮೂಲಕ ಬೆಳೆದು ಬಂದಿರುವ ಕೃಷಿಕರ ನೆಚ್ಚಿನ ಗ್ರಾಮೀಣ ಕ್ರೀಡೆ ಕಂಬಳ ಉಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕೂಡ ಅಧ್ಯಾದೇಶ ಮೂಲಕ ಸ್ಪಂದಿಸಿದೆ ಎಂದರು.

ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ಪ್ರಗತಿಪರ ಕೃಷಿಕ ಉಳಿಪಾಡಿಗುತ್ತು ರಾಜೇಶ ನಾೖಕ್‌, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌, ಜಿಲ್ಲಾ ಕಂಬಳ ಸಮಿತಿ ಗೌರವ ಸಲಹೆಗಾರ ಗುಣಪಾಲ ಕಡಂಬ, ಮಾಜಿ ಅಧ್ಯಕ್ಷ ಬೆಳುವಾಯಿ ಸದಾನಂದ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್‌ ಕಂಗಿನಮನೆ, ಮೂಡಬಿದಿರೆ ಪುರಸಭೆ ಮಾಜಿ ಅಧ್ಯಕ್ಷ ರತ್ನಾಕರ ದೇವಾಡಿಗ, ಮೂಡ ಅಧ್ಯಕ್ಷ ಸುರೇಶ ಪ್ರಭು, ಕರಿಂಜೆ ವಿನು ವಿಶ್ವನಾಥ ಶೆಟ್ಟಿ , ಐಪಿಎಲ್‌ ಕ್ರಿಕೆಟ್‌ ಆಟಗಾರ ಕೆ.ಸಿ. ಕಾರ್ಯಪ್ಪ, ಪ್ರೊ ಕಬಡ್ಡಿ ಆಟಗಾರ ಸುಕೇಶ್‌ ಹೆಗ್ಡೆ, ಅಂತಾರಾಷ್ಟ್ರೀಯ ಕ್ರೀಡಾಪಟು ರೋಹಿತ್‌ ಕುಮಾರ್‌ ಕಟೀಲು, ಕಿರುತೆರೆ ನಟ ದಿಲೀಪ್‌ ಶೆಟ್ಟಿ, ಎಪಿಎಂಸಿ ಸದಸ್ಯ ಎಂ. ಪದ್ಮರಾಜ ಬಲ್ಲಾಳ್‌, ಬಂಟ್ವಾಳ ರೋಟರಿ ಕ್ಲಬ್‌ ಅಧ್ಯಕ್ಷ ಸಂಜೀವ ಪೂಜಾರಿ, ಲೊರೆಟ್ಟೊ ರೋಟರಿ ಕ್ಲಬ್‌ ಅಧ್ಯಕ್ಷ ಅವಿಲ್‌ ಮಿನೇಜಸ್‌, ಗವರ್ನರ್‌ ಪ್ರತಿನಿಧಿ ಎನ್‌. ಪ್ರಕಾಶ ಕಾರಂತ, ಜಿ.ಪಂ. ಸದಸ್ಯರಾದ ಎಂ. ತುಂಗಪ್ಪ ಬಂಗೇರ, ಬಿ. ಪದ್ಮಶೇಖರ ಜೈನ್‌, ಅಜ್ಜಿಬೆಟ್ಟು ಪದವು ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಸಂತ ಶೆಟ್ಟಿ ಕೇದಗೆ, ತಾ.ಪಂ. ಸದಸ್ಯ ಪ್ರಭಾಕರ ಪ್ರಭು, ಆರಂಬೋಡಿ ಗ್ರಾ.ಪಂ. ಅಧ್ಯಕ್ಷ ಪ್ರಭಾಕರ ಹುಲಿಮೇರು, ಕುಕ್ಕಿಪಾಡಿ ಗ್ರಾ. ಪಂ. ಅಧ್ಯಕ್ಷ ದಿನೇಶ ಸುಂದರ ಶಾಂತಿ, ಗುತ್ತಿಗೆದಾರ ಉದಯ ಕುಮಾರ್‌ ರಾವ್‌, ಬಿಜೆಪಿ ಮುಖಂಡರಾದ ಕೆ.ಪಿ.ಜಗದೀಶ ಅಧಿಕಾರಿ, ಕ್ಯಾ| ಬ್ರಿಜೇಶ್‌ ಚೌಟ, ಹರೀಶ ಪೂಂಜ, ಟಿ.ರಂಜನ್‌ ಗೌಡ, ಜೋಯ್ಲಸ್‌ ಡಿ’ಸೋಜಾ, ಬದ್ರಿನಾಥ್‌ ಕಾಮತ್‌, ಜೆಡಿಎಸ್‌ ಮುಖಂಡ ಅಶ್ವಿ‌ನ್‌ ಜೆ.ಪಿರೇರ, ಪ್ರಮುಖರಾದ ಜಗನ್ನಾಥ ಶೆಟ್ಟಿ ಚಾವಡಿಮನೆ, ಕೆ. ಮಹಾಬಲ ಆಳ್ವ, ಹೇಮಚಂದ್ರ ಗೌಡ, ತಾ.ಪಂ. ಮಾಜಿ ಸದಸ್ಯ ವಸಂತ ಕುಮಾರ್‌ ಅಣ್ಣಳಿಕೆ, ದುರ್ಗಾದಾಸ್‌ ಶೆಟ್ಟಿ ಮಾವಂತೂರು, ನವೀನ್‌ಚಂದ್ರ ಶೆಟ್ಟಿ ಮತ್ತಿತರರು ಶುಭ ಹಾರೈಸಿದರು.

ಸಮಿತಿ ಗೌರವಾಧ್ಯಕ್ಷ ಸಂಜೀವ ಶೆಟ್ಟಿ ಗುಂಡ್ಯಾರು, ಪ್ರಧಾನ ಕಾರ್ಯದರ್ಶಿ ಬಾಬು ರಾಜೇಂದ್ರ ಶೆಟ್ಟಿ ಅಜ್ಜಾಡಿ, ತಾ| ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್‌, ಕಾರ್ಯದರ್ಶಿ ಸಂದೇಶ ಶೆಟ್ಟಿ ಪೊಡುಂಬ, ಕೋಶಾಧಿಕಾರಿ ರಾಘವೇಂದ್ರ ಭಟ್‌ ಹೊಕ್ಕಾಡಿಗೋಳಿ, ಜತೆ ಕಾರ್ಯದರ್ಶಿ ಪುಷ್ಪರಾಜ ಜೈನ್‌ ನಡ್ಯೋಡಿ, ಪುಂಜಾಲಕಟ್ಟೆ ಠಾಣಾಧಿಕಾರಿ ರಾಮ ನಾಯ್ಕ ಉಪಸ್ಥಿತರಿದ್ದರು.

ಸಮಿತಿ ಅಧ್ಯಕ್ಷ ನೋಣಾಲುಗುತ್ತು ರಶ್ಮಿತ್‌ ಶೆಟ್ಟಿ ಕೈತ್ರೋಡಿ ಸ್ವಾಗತಿಸಿ, ವಂದಿಸಿದರು. ಸಮಿತಿ ಗೌರವ ಸಲಹೆಗಾರ, ನ್ಯಾಯವಾದಿ ಸುರೇಶ್‌ ಶೆಟ್ಟಿ, ಪ್ರಚಾರ ಸಮಿತಿ ಸಂಚಾಲಕ ಮೋಹನ್‌ ಕೆ. ಶ್ರೀಯಾನ್‌ ರಾಯಿ ಕಾರ್ಯಕ್ರಮ ನಿರೂಪಿಸಿದರು.

ಕಂಬಳ ಕ್ರೀಡೆ ಕೃಷಿ ಚಟುವಟಿಕೆಯ ಭಾಗ
ಕಂಬಳ ಕ್ರೀಡೆ ನಮ್ಮ ಮಣ್ಣಿನ ಸಂಸ್ಕೃತಿಯಾಗಿದ್ದು ಕೃಷಿಕರ ಜೀವನದ ಭಾಗವಾಗಿದೆ. ತುಳು ನಾಡಿನಲ್ಲಿ ಗ್ರಾಮೀಣ ಜನತೆಯ ಕೃಷಿ ಚಟುವಟಿಕೆಯ ಭಾಗವಾಗಿರುವ ಕಂಬಳದಿಂದ ಜನರು ಸಂತಸ ಪಡೆಯುತ್ತಿದ್ದು ಕಾನೂನಿನ ಚೌಕಟ್ಟಿನಲ್ಲಿ ಕಂಬಳವು ವಿಜೃಂಭಿಸಲಿ.
 – ನಳಿನ್‌ ಕುಮಾರ್‌ ಕಟೀಲು

ಟಾಪ್ ನ್ಯೂಸ್

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

240 Km ಅಂತರದಲ್ಲಿ ಸೇನಾ ದಂಪತಿ ಆತ್ಮಹತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ಮಾಡುವಂತೆ ಪತ್ರ

240Km ಅಂತರದಲ್ಲಿ ಸೇನಾ ದಂಪತಿ ಆತ್ಮಹ*ತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ನಡೆಸುವಂತೆ ಪತ್ರ

Kerala:ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕರಾಗಿ ಅರುಣ್‌ ಕುಮಾರ್‌ ಆಯ್ಕೆ

Kerala:ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕರಾಗಿ ಅರುಣ್‌ ಕುಮಾರ್‌ ಆಯ್ಕೆ

Delhi Capitals Management Change

Delhi Capitals ಆಡಳಿತ ಬದಲಾವಣೆ: ಗಂಗೂಲಿ ಅಧಿಕಾರ ಕಡಿತ; ಪಂತ್‌ ಬಗ್ಗೆಯೂ ಹೊಸ ನಿರ್ಧಾರ

11

Somy Ali: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ನಂಬರ್‌ ಕೇಳಿದ ಸಲ್ಮಾನ್‌ ಖಾನ್ ಮಾಜಿ ಗೆಳತಿ

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Maninalkur: ಶಿಥಿಲಾವಸ್ಥೆಯಲ್ಲಿ ಹಳೆ ಶಾಲಾ ಕಟ್ಟಡ; ಕ್ರಮಕ್ಕೆ ಆಗ್ರಹ

4

Puttur: ಬೀದಿ ಬದಿ ವ್ಯಾಪಾರಿಗಳಿಗೆ ನೆರವಾದ ಪಿಎಂ ಸ್ವನಿಧಿ ಯೋಜನೆ

3

Kadaba: ಐತ್ತೂರು ಅರಣ್ಯಾಧಿಕಾರಿಗಳಿಂದ ಒತ್ತುವರಿ ತೆರವು

2

Subrahmanya: ನೆಟ್ಟಣ ರೈಲು ನಿಲ್ದಾಣ; ಬಸ್‌ಗಾಗಿ ಕಾದು ಸುಸ್ತಾದ ಪ್ರಕರಣ

1(1)

Vitla: ಈ ಕಿಂಡಿ ಅಣೆಕಟ್ಟಲ್ಲಿ ನೀರೇ ನಿಲ್ಲುವುದಿಲ್ಲ, ಓಡಾಟಕ್ಕೂ ಭಯ!

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

240 Km ಅಂತರದಲ್ಲಿ ಸೇನಾ ದಂಪತಿ ಆತ್ಮಹತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ಮಾಡುವಂತೆ ಪತ್ರ

240Km ಅಂತರದಲ್ಲಿ ಸೇನಾ ದಂಪತಿ ಆತ್ಮಹ*ತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ನಡೆಸುವಂತೆ ಪತ್ರ

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

Kerala:ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕರಾಗಿ ಅರುಣ್‌ ಕುಮಾರ್‌ ಆಯ್ಕೆ

Kerala:ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕರಾಗಿ ಅರುಣ್‌ ಕುಮಾರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.