ಕೊರೊನಾ ಭೀತಿ: ಸಂಕಷ್ಟದಲ್ಲಿ ಕುಕ್ಕುಟ ಉದ್ಯಮ!


Team Udayavani, Feb 20, 2020, 6:52 AM IST

wall-30

ಮಂಗಳೂರು: ಕೋಳಿ ಮಾಂಸಕ್ಕೂ ಕೊರೊನಾ ವೈರಸ್‌ಗೂ ಸಂಬಂಧವಿಲ್ಲ ಎಂದು ಕೇಂದ್ರ ಮತ್ತು ರಾಜ್ಯ ಸರಕಾರಗಳು ಸ್ಪಷ್ಟಪಡಿಸಿದ್ದರೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳು ರಾಜ್ಯದ ಕುಕ್ಕುಟೋದ್ಯಮವನ್ನು ಸಂಕಷ್ಟಕ್ಕೆ ತಳ್ಳಿವೆ. ಕೋಳಿ ಮಾಂಸ ಮತ್ತು ಕೊರೊನಾ ವೈರಸ್‌ಗೆ ಸಂಬಂಧ ಕಲ್ಪಿಸಿ ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡಿದ ವದಂತಿಯಿಂದಾಗಿ ಕೋಳಿ ಮಾಂಸ ಭಕ್ಷಣೆಯ ಪ್ರಮಾಣ ಶೇ. 10ರಷ್ಟು ಕಡಿಮೆಯಾಗಿದೆ ಎನ್ನುವುದು ಕೋಳಿ ಮಾಂಸ ವ್ಯಾಪಾರಿಗಳ ಹಾಗೂ ಸಾಕಾಣಿಕೆದಾರರ ಅಂದಾಜು.

ವದಂತಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಕರ್ನಾಟಕ ರಾಜ್ಯ ಕುಕ್ಕುಟ ರೈತರ ಹಾಗೂ ತಳಿ ಸಾಕಣೆದಾರರ ಸಂಘ (ಕೆಪಿಎಫ್‌ಬಿಐ) ಸತ್ಯ ಶೋಧನೆ ನಡೆಸಿದ್ದು, ಅದರಲ್ಲಿ ಹುರುಳಿಲ್ಲ ಎಂಬುದನ್ನು ಕಂಡುಕೊಂಡಿದೆ. ಇದೇ ವೇಳೆ ಕೇಂದ್ರ ಮತ್ತು ರಾಜ್ಯ ಸರಕಾರಗಳೂ ವಿಶ್ವಾದ್ಯಂತದ ವೈಜ್ಞಾನಿಕ ವರದಿಗಳನ್ನು ಆಧರಿಸಿ ಕೋಳಿಯಿಂದ ಕೊರೊನಾ ವೈರಸ್‌ ಹರಡುವುದಿಲ್ಲ ಎಂದು ಸ್ಪಷ್ಟಪಡಿಸಿವೆ.

ನಷ್ಟದ ವ್ಯಾಪಾರ
ಒಂದು ಅಂದಾಜಿನ ಪ್ರಕಾರ ಒಂದು ಕೆ.ಜಿ. ಕೋಳಿ ಮಾಂಸದ ಉತ್ಪಾದನಾ ವೆಚ್ಚ ಬೆಂಗಳೂರಿನಲ್ಲಿ 80 ರೂ. ಹಾಗೂ ಮಂಗಳೂರಿನಲ್ಲಿ 90 ರೂ. ತಗಲುತ್ತದೆ. ಈಗಿನ ಪರಿಸ್ಥಿತಿಯಲ್ಲಿ ಉತ್ಪಾದಕರಿಗೆ ಸಿಗುವ ಮಾರಾಟ ಬೆಲೆ ಬೆಂಗಳೂರಿನಲ್ಲಿ 54 ರೂ. ಹಾಗೂ ಮಂಗಳೂರಿನಲ್ಲಿ 58 ರೂ. ಅಂದರೆ 25ರಿಂದ 30 ರೂ. ನಷ್ಟ. ಒಂದು ವಾರದ ಹಿಂದೆ ಬೆಲೆ ಇದಕ್ಕಿಂತ 5 ರೂ. ಕಡಿಮೆ ಇತ್ತು ಎನ್ನುತ್ತಾರೆ ದ.ಕ. ಜಿಲ್ಲಾ ಕೋಳಿ ಸಾಕಾಣಿಕೆದಾರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ದಯಾನಂದ ಅಡ್ಯಾರ್‌.

ಈ ಉದ್ಯಮದಲ್ಲಿ ಕೋಳಿ ಮಾಂಸದ ವ್ಯಾಪಾರ ಮಾಡುವವರಿಗೆ ನಷ್ಟ ಆಗುವುದಿಲ್ಲ. ಉತ್ಪಾದಕರಿಂದ ಖರೀದಿಸುವ ಕೋಳಿಗಳನ್ನು ಮಾಂಸ ಮಾಡಿ ಮಾರಾಟ ಮಾಡುವಾಗ ಲಾಭದ ಮಾರ್ಜಿನ್‌ ಇರಿಸಿಯೇ ಮಾರಾಟ ಮಾಡುತ್ತಾರೆ ಎಂದು ಕೋಳಿ ಸಾಕಾಣಿಕೆದಾರ ವೈ.ಬಿ. ಸುಂದರ್‌ ಹೇಳುತ್ತಾರೆ. ಬುಧವಾರ ಮಂಗಳೂರಿ ನಲ್ಲಿ ಕೋಳಿ ಮಾಂಸದ ಸಗಟು ಮಾರಾಟ ದರ 78- 80 ರೂ. ಇದ್ದು,
ಚಿಲ್ಲರೆ ಮಾರಾಟ 95 ರೂ. ಇತ್ತು. ಶೀತಲೀಕರಣ ವ್ಯವಸ್ಥೆಯಲ್ಲಿ ಶುಚಿಗೊ ಳಿಸಿದ ಮಾಂಸಕ್ಕೆ 145 ರೂ. ಇತ್ತು.

ಭಯ ಬೇಡ
ಕೊರೊನಾ ವೈರಸ್‌ ಹಾವುಗಳಿಂದ ಬಂದಿರುವ ಸಾಧ್ಯತೆ ಇದೆ ಎಂದು ಚೀನದ ಸಂಶೋಧಕರು ಉಲ್ಲೇಖೀಸಿ ದ್ದಾರೆ ಎಂದು ಕೆಪಿಎಫ್‌ಬಿಐ ಅಧ್ಯಕ್ಷ ಡಾ| ಸುಶಾಂತ್‌ ರೈ ಬಿ. ಉದಯ ವಾಣಿಗೆ ತಿಳಿಸಿದ್ದು, ಮಾಂಸಪ್ರಿಯರು ಭಯ ಪಡುವುದು ಬೇಡ ಎಂದಿದ್ದಾರೆ.

ಈ ವರ್ಷವಿಡೀ ನಷ್ಟ
ಈ ವರ್ಷ ಒಂದು ತಿಂಗಳಲ್ಲಿಯೂ ಕೋಳಿ ಸಾಕಾಣಿಕೆದಾರರಿಗೆ ಲಾಭ ಬಂದಿಲ್ಲ. ಮೊದಲ 6 ತಿಂಗಳಲ್ಲಿ ಪ್ರಕೃತಿ ವಿಕೋಪ ಮತ್ತಿತರ ಕಾರಣಗಳಿಂದ ಆಹಾರ ವಸ್ತು ಸರಿಯಾಗಿ ಸಿಗದೆ ನಷ್ಟವಾಗಿತ್ತು. ಅನಂತರದ 3 ತಿಂಗಳು ಲಾಭ-ನಷ್ಟ ಎರಡೂ ಇಲ್ಲದೆ ಉದ್ಯಮ ನಡೆದಿತ್ತು. ಇದೀಗ ಸುಳ್ಳು ಸುದ್ದಿಯಿಂದಾಗಿ ನಷ್ಟವೇ ಆಗುತ್ತಿದೆ. ಬ್ಯಾಂಕ್‌ ಸಾಲ ಪಡೆದು ಉದ್ಯಮ ಆರಂಭಿಸಿದವರು ಸಂಕಷ್ಟದಲ್ಲಿದ್ದಾರೆ. ಸರಕಾರ ಈ ಉದ್ಯಮಕ್ಕೆ ಸಬ್ಸಿಡಿ ಒದಗಿಸಿ ನೆರವಾಗಬೇಕು ಎಂದು ಕೋಳಿ ಸಾಕಾಣಿಕೆದಾರ ವೈ.ಬಿ. ಸುಂದರ್‌ ಆಗ್ರಹಿಸಿದ್ದಾರೆ.

ಯಾವುದೇ ರೋಗಾಣುಗಳಿದ್ದರೂ ಮಾಂಸ ಅಥವಾ ಮೊಟ್ಟೆಯನ್ನು ಚೆನ್ನಾಗಿ ಬೇಯಿಸಿದಾಗ ಉಳಿಯುವುದಿಲ್ಲ. ಯಾವುದೇ ಭಯ ಪಡುವ ಅಗತ್ಯವಿಲ್ಲ.
– ದಯಾನಂದ ಅಡ್ಯಾರ್‌, ದ.ಕ. ಜಿಲ್ಲಾ ಕೋಳಿ ಸಾಕಾಣಿಕೆದಾರರ ವಿವಿಧೋದ್ದೇಶ ಸ. ಸಂಘದ ಅಧ್ಯಕ್ಷ

– ಹಿಲರಿ ಕ್ರಾಸ್ತಾ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.