ಕೋವಿಡ್ 19 ಕ್ವಾರಂಟೈನ್ ಮಾಹಿತಿಗೆ ಜಿಪಿಎಸ್ ಆಧಾರಿತ ಆ್ಯಪ್ ಅಭಿವೃದ್ಧಿ

ಬೆಳ್ತಂಗಡಿಯಲ್ಲಿ ದೇಶದಲ್ಲೆ ಮೊದಲ ಆ್ಯಪ್ ಬಿಡುಗಡೆಗೊಳಿಸಿದ ಶಾಸಕ ಹರೀಶ್ ಪೂಂಜ

Team Udayavani, Mar 30, 2020, 10:32 AM IST

ಕೋವಿಡ್ 19 ಕ್ವಾರಂಟೈನ್ ಮಾಹಿತಿಗೆ ಜಿಪಿಎಸ್ ಆಧಾರಿತ ಆ್ಯಪ್ ಅಭಿವೃದ್ಧಿ

ಬೆಳ್ತಂಗಡಿ: ಕೋವಿಡ್ 19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಕೇಂದ್ರ, ರಾಜ್ಯ ಸರಕಾರಗಳು ಆತಂಕಕ್ಕೆ ಒಳಗಾಗಿವೆ. ಈ ನಿಟ್ಡಿನಲ್ಲಿ ಸಾವಿರಾರು ಮಂದಿ ಹೋಮ್ ಕ್ವಾರಂಟೈನ್ ಅಂದರೆ ಮನೆಯಲ್ಲೇ ನಿಗಾ ವ್ಯವಸ್ಥೆ ಮೂಲಕ ಇದ್ದಾರೆ. ಆದರೆ ಇತ್ತೀಚಿನ ಕೆಲವು ದಿನಗಳಿಂದ ಹೀಗೆ ಹೋಮ್ ಕ್ವಾರಂಟೈನ್ ಆಗಿರುವ ಕೆಲವು ಮಂದಿ ಸ್ಟ್ಯಾಂಪ್ ಹಾಕಿದ್ದರೂ ಬೇಕಾಬಿಟ್ಟಿ ಓಡಾಟ ನಡೆಸುವ ಮೂಲಕ ಜನರಲ್ಲಿ ಆತಂಕ ಸೃಷ್ಟಿಸುತ್ತಿದ್ದಾರೆ.

ಇವರ ಮೇಲೆ ನಿಗಾ ವಹಿಸಲು ಸುಧಾರಿತ ಆ್ಯಪ್ ನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ರವಿವಾರ ಮಿನಿವಿಧಾನ ಸೌಧದಲ್ಲಿರುವ ವಾರ್ ರೂಮ್ ನಲ್ಲಿ ಬಿಡುಗಡೆ ಗೊಳಿಸಿದರು.

ಕ್ವಾರಂಟೈನ್ ಗಳನ್ನು ಮನೆಯಲ್ಲೇ ನಿಗಾ ಇರಿಸಲು ಕುಟುಂಬ, ಪೊಲೀಸರು, ಆಶಾ ಕಾರ್ಯಕರ್ತರು, ವೈದ್ಯರು ಹರಸಾಹಸ ಪಡುತ್ತಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕು ಆಡಳಿತ, ಶ್ರಮಿಕ ಬೆಳ್ತಂಗಡಿ ಶಾಸಕರ ಕಚೇರಿ ಹಾಗೂ ಐ-ಸರ್ಚ್ ಕಂಪೆನಿಯ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಜಿಪಿಎಸ್ ಆಧಾರಿತ ಆ್ಯಪ್ Covid 19 home quarantine beat tracker ಬಳಸಿ ನಿಗಾ ವಹಿಸುವ ಕಾರ್ಯಕ್ಕೆ ಮುಂದಾಗಿದೆ. ಇದು ತಾಲೂಕಿನಲ್ಲಿ ಮಾತ್ರವಲ್ಲದೆ ದೇಶದಲ್ಲೇ ಮೊದಲ ಪ್ರಯತ್ನ ಇದಾಗಿದೆ.

ಈಗಾಗಲೇ ಇದರ ಪೂರ್ವ ಸಿದ್ಧತೆ ಮುಗಿದಿದ್ದು ತಾಲೂಕಿನಲ್ಲಿ ಒಂದು ಕೋವಿಡ್- 19 ಪ್ರಕರಣ ಬೆಳಕಿಗೆ ಬಂದ ಬಳಿಕ ಹೋಮ್ ಕ್ವಾರಂಟೈನ್ ಆಗಿರುವವರ ಮೇಲೆ ನಿಗಾ ಇರಿಸಲು ಈ ವ್ಯವಸ್ಥೆ ನೆರವಾಗಲಿದೆ. ಜಿಪಿಎಸ್ ಆಧಾರಿತ ಆಪ್ ಮೂಲಕ ವಾರ್ ರೂಮಲ್ಲಿ ಕೂತು ಹೋಮ್ ಕ್ವಾರಂಟೈನ್ ಆಗಿರುವವರು ಎಲ್ಲಿದ್ದಾರೆ ಹೇಗಿದ್ದಾರೆ ಮತ್ತು ಅವರ ಭಾವಚಿತ್ರ ಸಹಿತ ಮಾಹಿತಿಯನ್ನು ಇದರಿಂದ ಪಡೆಯಬಹುದಾಗಿದೆ. ಸದ್ಯ ಇದನ್ನು ಬೆಳ್ತಂಗಡಿ ತಾಲೂಕಿನಲ್ಲಿ ಜಾರಿಗೆ ತರಲಾಗಿದ್ದು ಮುಂದಿನ ದಿನಗಳಲ್ಲಿ ರಾಜ್ಯದಲ್ಲೂ ಜಾರಿಗೆ ತರಲು ಚಿಂತಿಸಲಾಗಿದೆ.

ಕೋವಿಡ್-19 ಕ್ವಾರಂಟೈನ್ ಟ್ರ್ಯಾಕರ್ ಆ್ಯಪ್
ಜಿಪಿಎಸ್ ಆಧಾರಿತ ಮೊಬೈಲ್ ಆ್ಯಪ್ ಆಗಿದ್ದು ತಾಲೂಕು ಆರೋಗ್ಯಧಿಕಾರಿ, ತಹಶೀಲ್ದಾರ್, ವೃತ್ತ ನಿರೀಕ್ಷಕರು ಇದರ ಮೇಲುಸ್ತುವಾರಿ ವಹಸಲಿದ್ದಾರೆ.

ಬೀಟ್ ಪೊಲೀಸ್ ಅವರ ಸ್ಮಾರ್ಟ್ ಫೋನ್ ಗಳಿಗೆ ಆ್ಯಪ್ ಅಳವಡಿಕೆ ಮಾಡಲಾಗುತ್ತದೆ. ಸ್ಥಳಕ್ಕೆ ಭೇಟಿ ನೀಡುವ ಬೀಟ್ ಪೊಲೀಸರು ಮನೆ ಮತ್ತು ಶಂಕಿತನ ಭಾವಚಿತ್ರ ಪಡೆದು ಅಪ್ ಡೇಟ್ ಮಾಡಬೇಕಿದೆ. ಆಕಾಸ್ ಮಾತ್ ಸ್ಥಳದಲ್ಲಿ ನೆಟ್ವರ್ಕ್ ಸಮಸ್ಯೆ ಇದ್ದಲ್ಲಿ ನೆಟ್ವರ್ಕ್ ಬಂದ ಬಳಿಕ ಅಪ್ಡೇಟ್ ಆಗಲಿದೆ.

ಇದರಿಂದ ಹೋಮ್ ಕ್ವಾರಂಟೈನ್ ಸಂಪೂರ್ಣ ಚಿತ್ರಣ ಲಭ್ಯವಾಗಲಿದ್ದು ಪ್ರತಿ ದಿನ ಪೊಲೀಸ್ ಭೇಟಿ ನೀಡಿರುವ ಕುರಿತು ಮಾಹಿತಿ ಲಭ್ಯವಾಗಲಿದೆ. ಕ್ವಾರಂಟೈನ್, ಪಾಸಿಟಿವ್, ನೆಗೆಟಿವ್, 14 ದಿನಗಳ ಬಳಿಕದ ವರದಿ ಮನೆಯಲ್ಲಿ ಇಲ್ಲದಿದ್ದರೆ, ಅವರೊಂದಿಗೆ ಜಾಸ್ತಿ ಜನ ಸಂಪರ್ಕದಲ್ಲಿದ್ದರೆ ಹೈ ಅಲರ್ಟ್ ಎಂದು ವರದಿ ನೀಡಿದರೆ ಮೇಲುಸ್ತುವಾರಿಗಳ ದೂರವಾಣಿ ಸಂಖ್ಯೆಗೆ ತಕ್ಷಣ ಸಂದೇಶ ರವಾನೆಯಾಗಲಿದೆ. ತಕ್ಷಣ ಜಾಗೃತರಾಗಬಹುದಾಗಿದೆ.

ಪಬ್ಲಿಕ್ ಗಳಿಗೆ ಅವರ ಏರಿಯಾದವರಲ್ಲಿ ಇದ್ದವರ ಮಾಹಿತಿಯೂ ಇದೇ ಆ್ಯಪ್ ನಿಂದ ಪಡೆಯಬಹುದು. ಒಟ್ಟು 81 ಗ್ರಾಮದ ಡೇಟಾ ಸಿಗಲಿದ್ದು, ಇದರಿಂದ ಸ್ಥಳೀಯರು ಸೋಂಕಿತನ ಮೇಲೆ ನಿಗಾದಲ್ಲಿರಿಸಬಹುದಾಗಿದೆ.
ಕಿಯೋನಿಕ್ಸ್ ನ ಆ್ಯಪ್ ಅಭಿವೃದ್ಧಿ ಸಂಯೋಜಕರಾದ ಅರವಿಂದ್ ಭಟ್ ಮತ್ತು ಬಾಲಕೃಷ್ಣ ಶೆಟ್ಟಿ ಹೊಸ ಆ್ಯಪ್ ಅಭಿವೃದ್ಧಿ ಪ್ರಡಿಸಿದ್ದಾರೆ.

ಕೋವಿಡ್ 19 ಗೃಹ ಪರಿವೀಕ್ಷಣಾ ( ಕ್ವಾರಂಟೈನ್ ) ಆಗಿರುವಂತವರ ವರದಿ ಪಡೆಯಬಹುದಾದ ಆ್ಯಪ್ ಲೋಕಾರ್ಪಣೆಗೊಂಡಿದೆ. ತಾಲೂಕಿನ 220 ಮಂದಿಯ ಮೇಲೆ ನಿಗಾ ಇಡಲು ಸಹಕಾರಿಯಾಗಲಿದೆ. ಇದು ದೇಶದಲ್ಲೆ ಮೊದಲಬಾರಿಗೆ ಪರಿಚಯಿಸಿದ್ದು. ದೇಶದೆಲ್ಲೆಡೆ ಈ ಆ್ಯಪ್ ಬಳಸುವ ಮೂಲಕ ಕೋವಿಡ್ 19 ಶಂಕಿತರ ಮೇಲೆ ನಿಗಾ ಇಟ್ಟು ಕೋವಿಡ್ 19 ಮುಕ್ತ ದೇಶವಾಗಿಸಲು ಸಹಕಾರಿಯಾಗಲಿದೆ.
– ಹರೀಶ್ ಪೂಂಜ, ಶಾಸಕ

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.