Mangaluru: ಮಹಿಳೆಯ ದೇಹ 29 ತುಂಡು ಮಾಡಿದ ಪ್ರಕರಣ; ನಾಳೆ ಶಿಕ್ಷೆ ಪ್ರಕಟ
Team Udayavani, Sep 22, 2024, 6:45 AM IST
ಮಂಗಳೂರು: ಬೆಂಗಳೂರಿನಲ್ಲಿ ಯುವತಿಯನ್ನು ಕೊಲೆಗೈದು 30 ತುಂಡುಗಳನ್ನಾಗಿ ಮಾಡಿ ಫ್ರಿಜ್ನಲ್ಲಿಟ್ಟ ಪ್ರಕರಣ ಬಯಲಿಗೆ ಬರುತ್ತಿದ್ದಂತೆಯೇ ರಾಜ್ಯ ಬೆಚ್ಚಿ ಬಿದ್ದಿದೆ. ಇದೇ ರೀತಿ ಮಹಿಳೆಯೋರ್ವರನ್ನು ಕೊಲೆಗೈದು 29 ತುಂಡುಗಳನ್ನಾಗಿ ಮಾಡಿ ಹಗಲಿಡೀ ಮನೆಯೊಳಗಿಟ್ಟು ರಾತ್ರಿಯಾಗುತ್ತಿದ್ದಂತೆಯೇ ರಸ್ತೆ ಬದಿಯಲ್ಲಿ ಎಸೆದ ಕೃತ್ಯ ಮಂಗಳೂರು ನಗರದಲ್ಲಿ ಸರಿಸುಮಾರು 5 ವರ್ಷಗಳ ಹಿಂದೆ ನಡೆದಿತ್ತು.
ಫಂಡ್ ಹಣದ ವಿಚಾರವಾಗಿ ಶ್ರೀಮತಿ ಶೆಟ್ಟಿ (42) ಅವರನ್ನು ಜೋನಸ್ ಸ್ಯಾಮ್ಸನ್(40) ಮತ್ತು ಆತನ ಪತ್ನಿ ವಿಕ್ಟೋರಿಯಾ ಮಥಾಯಿಸ್(47) 2019ರ ಮೇ 11ರಂದು ತಮ್ಮ ಮನೆಯಲ್ಲಿಯೇ ಕೊಲೆ ಮಾಡಿದ್ದರು. ಬೆಳಗ್ಗೆ ಮರದ ದೊಣ್ಣೆಯಿಂದ ಹೊಡೆದು ಸ್ಮತಿ ತಪ್ಪಿದ್ದ ಶ್ರೀಮತಿ ಶೆಟ್ಟಿಯವರನ್ನು ಬಚ್ಚಲು ಮನೆಗೆ ಎಳೆದೊಯ್ದು ಕತ್ತಿಯಿಂದ 29 ತುಂಡುಗಳನ್ನಾಗಿ ಮಾಡಿದ್ದರು. ಆ ತುಂಡುಗಳನ್ನು ಮನೆಯಲ್ಲಿಯೇ ರಾತ್ರಿಯವರೆಗೆ ಇಟ್ಟುಕೊಂಡಿದ್ದರು. ರಾತ್ರಿಯಾಗುತ್ತಿದ್ದಂತೆಯೇ ಜೋನಸ್ ಅದನ್ನು ಸ್ಕೂಟರ್ನಲ್ಲಿಟ್ಟು ನಗರದ ನಾಲ್ಕಕ್ಕೂ ಅಧಿಕ ಕಡೆಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿಟ್ಟು ಹೋಗಿದ್ದ. ಮರುದಿನ ಕದ್ರಿ ಬಳಿ ಪ್ಲಾಸ್ಟಿಕ್ ಕವರ್ನಲ್ಲಿ ರುಂಡ ಪತ್ತೆಯಾದಾಗ ಪ್ರಕರಣ ಬಯಲಾಗಿತ್ತು. ಈ ಆರೋಪಿಗಳಿಗೆ ಜೋನಸ್ನ ಸ್ನೇಹಿತ ರಾಜು ಎಂಬಾತ ಸಹಕರಿಸಿದ್ದ.
ನಾಳೆ ಶಿಕ್ಷೆ ಪ್ರಕಟ:
ವಿಚಾರಣೆ ನಡೆಸಿದ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಸ್ವಾಮಿ ಎಚ್. ಎಸ್. ಅವರು ಆರೋಪಿಗಳ ಮೇಲಿನ ಅಪರಾಧ ಸಾಬೀತಾಗಿದೆ ಎಂದು ಸೆ.13ರಂದು ತೀರ್ಪು ನೀಡಿದ್ದರು. ಅಪರಾಧಿಗಳಿಗೆ ಶಿಕ್ಷೆಯ ಪ್ರಮಾಣವನ್ನು ಸೆ.23ರಂದು ನ್ಯಾಯಾಧೀಶರು ಪ್ರಕಟಿಸಲಿದ್ದಾರೆ. ಈ ಪ್ರಕರಣ ಕೂಡ ರಾಜ್ಯದಾದ್ಯಂತ ತಲ್ಲಣ ಮೂಡಿಸಿತ್ತು. ಹಾಗಾಗಿ ಶಿಕ್ಷೆಯ ಪ್ರಮಾಣದ ಬಗ್ಗೆಯೂ ಸಾರ್ವಜನಿಕ ವಲಯದಲ್ಲಿ ಕುತೂಹಲವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ
US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ
Nervous Disease: ಕರಾವಳಿಯಲ್ಲೂ ಬ್ರೈನ್ ಹೆಲ್ತ್ ಕ್ಲಿನಿಕ್ ಕಾರ್ಯಾರಂಭ
Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.