![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Aug 13, 2023, 9:19 PM IST
ಸುಬ್ರಹ್ಮಣ್ಯ: ಎರಡನೇ ಶನಿವಾರ ಹಾಗೂ ಭಾನುವಾರದ ಸರಣಿ ರಜೆ ಹಿನ್ನಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶನಿವಾರ ಹಾಗೂ ಭಾನುವಾರ ಹೆಚ್ಚಿನ ಭಕ್ತರ ಆಗಮನವಾಗಿದೆ. ಶನಿವಾರವೂ ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದರು. ಭಾನುವಾರ ಮತ್ತಷ್ಟು ಹೆಚ್ಚಿನ ಭಕ್ತರ ಆಗಮನವಾಗಿದೆ. ದೇವಾಲಯದ ಹೊರಾಂಗಣ, ಭೋಜನ ಶಾಲಾ ಬಳಿ, ರಥಬೀದಿಯಲ್ಲಿ ಭಕ್ತ ಸಂದಣಿ ಕಂಡುಬಂತು. ಪೇಟೆಯಲ್ಲಿ ವಾಹನಗಳ ಓಡಾಟವೂ ಅಧಿಕವಾಗಿತ್ತು. ಪಾರ್ಕಿಂಗ್ನಲ್ಲೂ ಭರ್ತಿಯಾಗಿತ್ತು. ಸರಕಾರಿ ಬಸ್ಗಳ ಮೂಲಕ ಹಾಗೂ ಖಾಸಗಿ ವಾಹನಗಳ ಮೂಲಕ ಭಕ್ತರು ವಿವಿಧೆಡೆಯಿಂದ ಆಗಮಿಸಿದ್ದರು.
ಕೊಲ್ಲೂರು ಸನ್ನಿದಿಯಲ್ಲಿ ಭಕ್ತಸಾಗರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲಿ ಭಾನುವಾರ 15 ಸಾವಿರಕ್ಕೂ ಮಿಕ್ಕಿ ಭಕ್ತರು ಶ್ರೀದೇವಿಯ ದರ್ಶನಕ್ಕೆ ಆಗಮಿಸಿದ್ದಾರೆ. ಭಕ್ತರ ನೂಕುನುಗ್ಗಲು ನಿಭಾಯಿಸಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ರಾಜ್ಯ ಸಹಿತ ವಿವಿಧ ಕಡೆಗಳಿಂದ ಭಕ್ತರು ಆಗಮಿಸಿದ್ದು ಮಳೆಯ ಬಿರುಸು ಕಡಿಮೆಯಾಗಿದ್ದರಿಂದ ದರ್ಶನಕ್ಕೆ ಯಾವುದೇ ಅಡ್ಡಿ ಆತಂಕ ಉಂಟಾಗಿಲ್ಲ. ಭಕ್ತರ ಆಗಮನದಿಂದ ದೇಗುಲ ಹಾಗೂ ಖಾಸಗಿ ವಸತಿಗೃಹಗಳು ಭರ್ತಿಯಾಗಿದ್ದವು. ವಾಹನ ಸಂಚಾರ ಹಾಗೂ ನಿಲುಗಡೆ ಅಸ್ತವ್ಯಸ್ತಗೊಂಡಿದ್ದರಿಂದ ಅನೇಕ ಕಡೆ ಟ್ರಾಫಿಕ್ ಜಾಮ್ ಉಂಟಾಯಿತು.
You seem to have an Ad Blocker on.
To continue reading, please turn it off or whitelist Udayavani.