ಸಿಆರ್‌ಝಡ್‌ ಮರಳು: ಟಾಸ್ಕ್ಪೋರ್ಸ್‌ ನಿರ್ಧಾರಕ್ಕೆ ಉಚ್ಚ ನ್ಯಾಯಾಲಯ ಒಪ್ಪಿಗೆ


Team Udayavani, Mar 27, 2019, 6:30 AM IST

crz

ಮಂಗಳೂರು: ಜಿಲ್ಲೆಯ ಸಿಆರ್‌ಝಡ್‌ ವಲಯದಲ್ಲಿ 2011-12ರ ಆರ್ಥಿಕ ವರ್ಷದ ಮಾನದಂಡ ಅನುಸರಿಸಿಕೊಂಡು ಮರಳು ದಿಬ್ಬ ತೆರವುಗೊಳಿಸುವುದಕ್ಕೆ ಪರವಾನಿಗೆ ನೀಡಲು ದ.ಕ. ಜಿಲ್ಲಾಧಿಕಾರಿ ಅಧ್ಯಕ್ಷತೆಯ “ಜಿಲ್ಲಾ ಮರಳು ಕಾರ್ಯಪಡೆ ಸಮಿತಿ’ ತೆಗೆದುಕೊಂಡ ನಿರ್ಧಾರವನ್ನು ಹೈಕೋರ್ಟ್‌ ಇದೀಗ ಎತ್ತಿಹಿಡಿದಿದೆ.

2011-12ರ ಮಾನದಂಡ ಅನುಸರಿಸಿಕೊಂಡು 2018ರ ಸೆ. 20ರಂದು ಜಿಲ್ಲಾ ಮರಳು ಕಾರ್ಯಪಡೆ ಸಮಿತಿ ಮರಳು ತೆರವುಗೊಳಿಸಲು ಸಿಆರ್‌ಝಡ್‌ ವಲಯದಲ್ಲಿ ಪರವಾನಿಗೆ ನೀಡಿತ್ತು. ಆದರೆ ಸಮಿತಿಯ ಅಂದಿನ ತೀರ್ಮಾನವನ್ನು ಪ್ರಶ್ನಿಸಿ ಮಂಗಳೂರು ತಾಲೂಕಿನ ಅಬ್ದುಲ್‌ ಮಜೀದ್‌ ಹಾಗೂ ಅಬ್ದುಲ್‌ ಗಫೂರ್‌ ರಾಜ್ಯ ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದರು.

ಜಿಲ್ಲಾ ಮರಳು ಕಾರ್ಯಪಡೆ ಸಮಿತಿ ಅನುಸರಿಸಿದ್ದ ಮಾನದಂಡದ ಪ್ರಕಾರ 2011-12ರಲ್ಲಿದ್ದ ಸಾಂಪ್ರಾದಾಯಿಕ ಮರಳುಗಾರಿಕೆ ನಡೆಸುವ 53 ಮಂದಿಗೆ ಮಾತ್ರ ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆ ನಡೆಸಲು ಅನುಮತಿ
ನೀಡಲಾಗಿತ್ತು. ಇದರ ಸಂಖ್ಯೆ ಮುಂದಿನ 5 ವರ್ಷಗಳಲ್ಲಿ ಸುಮಾರು 538ಕ್ಕೇರಿತ್ತು. ಅದನ್ನು ಪರಿಗಣಿಸಿ ಸಾಂಪ್ರದಾ ಯಿಕ ಮರಳುಗಾರಿಕೆದಾರರ ಹಿತವನ್ನು ರಕ್ಷಿಸುವ ನಿಟ್ಟಿನಲ್ಲಿ 2018ರಲ್ಲಿ ಸಮಿತಿಯು ಮರಳುಗಾರಿಕೆಗೆ ಅನುಮತಿ ನೀಡಲು 2011-12 ರ ಮಾನದಂಡವನ್ನು ಅನುಸರಿಸುವ ನಿರ್ಣಯ ಕೈಗೊಂಡಿತ್ತು. ಆದರೆ ಸಮಿತಿಯ ತೀರ್ಮಾನ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿದಾರರು ದಾವೆ ಹೂಡಿದ್ದರು.

ಅರ್ಜಿದಾರರ ಪರ ವಾದಿಸಿದ್ದ ನ್ಯಾಯವಾದಿಗಳು 2012ರಿಂದ 2017ರ ವರೆಗೆ ಮರಳು ಗಾರಿಕೆಗೆ ಅನುಮತಿ ಪಡೆದಿದ್ದರು. ಆದರೆ 2018ರಲ್ಲಿ ಮರಳುಗಾರಿಕೆಗೆ ಅನುಮತಿ ನೀಡಲು 2011-12ರ ಮಾನದಂಡವನ್ನು ಅನುಸರಿಸುವ ಸಮಿತಿಯ ನಿರ್ಧಾರದಿಂದ ಅರ್ಜಿದಾರರು ಪರವಾನಿಗೆಯಿಂದ ವಂಚಿತರಾಗಿದ್ದು, ಜೀವನೋಪಾಯ ಹಕ್ಕಿನಿಂದ ವಂಚಿತರಾಗಿದ್ದಾರೆ. ಹೀಗಾಗಿ 2018ರ ಸಮಿತಿಯ ನಿರ್ಣಯವನ್ನು ರದ್ದುಪಡಿಸಬೇಕೆಂದು ನ್ಯಾಯಾಲಯವನ್ನು ಕೋರಿದ್ದರು.

ಇನ್ನು ಕಾರ್ಯಪಡೆ ಸಮಿತಿ ಪರ ವಾದ ಮಂಡಿಸಿದ್ದ ನ್ಯಾಯವಾದಿಗಳು, ನೀರಿನ ಸರಾಗ ಹರಿಯವಿಕೆಯನ್ನು ಖಾತ್ರಿಗೊಳಿಸುವ ನಿಟ್ಟಿನಲ್ಲಿ ಸ್ಥಳೀಯ ಸಾಂಪ್ರದಾಯಿಕ ಮರಳುಗಾರಿಕೆ ನಡೆಸುವವರನ್ನು ದೃಷ್ಟಿಯಲ್ಲಿಟ್ಟುಕೊಂಡು 2018ರ ನಿರ್ಣಯವನ್ನು ಅಂಗೀಕರಿಸಲಾಗಿದೆ. 2011- 12ರಲ್ಲಿ ಸ್ಥಳೀಯ 53 ಸಾಂಪ್ರದಾಯಿಕ ಮರಳುಗಾರಿಕೆ ಕುಟುಂಬಗಳಿಗೆ ಪರವಾನಿಗೆ ನೀಡಲಾಗಿತ್ತು.

ಆದರೆ 2014ರಲ್ಲಿ ಅರ್ಜಿದಾರರ ಸಂಖ್ಯೆ 240ಕ್ಕೇರಿತ್ತು. ಈ ಏರಿಕೆ
ಮನಗಂಡು 2011-12ರ ಆರ್ಥಿಕ ವರ್ಷವನ್ನು ಪರಿಗಣನೆಗೆ ತೆಗೆದುಕೊಳ್ಳಲಾಯಿತು. ಸ್ಥಳೀಯ ಸಾಂಪ್ರದಾಯಿಕ ಮರಳುಗಾರರ ಹಿತವನ್ನು ಪರಿಗಣಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ವಾದ ಮಂಡಿಸಿದ್ದರು.
ಪ್ರತಿವಾದಿ ದ.ಕ. ಜಿಲ್ಲಾ ಮರಳು ಕಾರ್ಯಪಡೆ ಸಮಿತಿಯ ವಾದವನ್ನು ಪರಿಗಣಿಸಿ ನ್ಯಾಯಾಲಯವು ಅರ್ಜಿದಾರರ ಅರ್ಜಿಯನ್ನು ವಜಾಗೊಳಿಸಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.