D.K.,ಜಿಲ್ಲಾ ನಿ.ಸ.ನೌಕರರ ವೇದಿಕೆಯಿಂದ ಪ್ರತಿಭಟನೆ: ನಿವೃತ್ತಿ ಆರ್ಥಿಕ ಸೌಲಭ್ಯ ನೀಡಲು ಆಗ್ರಹ
Team Udayavani, Oct 2, 2024, 1:03 AM IST
ಮಂಗಳೂರು: 2022ರ ಜು.1ರಿಂದ 2024ರ ಜೂ.30ರ ಅವಧಿಯಲ್ಲಿ ನಿವೃತ್ತರಾದ ಸರಕಾರಿ ನೌಕರರಿಗೆ ಡಿಸಿಆರ್ಜಿ, ಕಮ್ಯುಟೇಶನ್, ಗಳಿಕೆ ರಜೆ ನವೀಕರಣದ ಮೊತ್ತವನ್ನು ಏಳನೇ ವೇತನ ಆಯೋಗದ ಲೆಕ್ಕಾಚಾರದಲ್ಲಿ ನೀಡಬೇಕು ಹಾಗೂ ಈ ಕುರಿತು ಪರಿಷ್ಕೃತ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿ ಮಂಗಳವಾರ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಭಾಗವಾಗಿ ದ.ಕ. ಜಿಲ್ಲಾ ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ವೇದಿಕೆ ವತಿಯಿಂದ ನಗರದ ಮಿನಿ ವಿಧಾನ ಸೌಧದ ಬಳಿ ಕಪ್ಪು ಪಟ್ಟಿ ಧರಿಸಿ ಧರಣಿ ಸತ್ಯಾಗ್ರಹ ನಡೆಯಿತು.
ಜಿಲ್ಲಾ ಪ್ರಧಾನ ಸಂಚಾಲಕ ಸಿರಿಲ್ ರಾಬರ್ಟ್ ಡಿ’ಸೋಜಾ ಮಾತನಾಡಿ, 2022ರ ಜು.1ರಿಂದ 2024ರ ಜೂ. 30ರೊಳಗೆ ನಿವೃತ್ತರಾದ ನೌಕರರಿಗೆ 7ನೇ ವೇತನ ಆಯೋಗದ ಅನುಸಾರ ನಿವೃತ್ತಿ ಆರ್ಥಿಕ ಸೌಲಭ್ಯದಿಂದ ವಂಚಿತರನ್ನಾಗಿ ಮಾಡಿ, 6ನೇ ವೇತನ ಆಯೋಗದ ಅನುಸಾರ ನಿವೃತ್ತಿ ಆರ್ಥಿಕ ಸೌಲಭ್ಯ ನೀಡಲಾಗಿದೆ. 7ನೇ ವೇತನ ಆಯೋಗ ಪ್ರಕಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾಧಿಕಾರಿಕಾರಿ, ತಹಶೀಲ್ದಾರ್ಗಳ ಮೂಲಕ ಮನವಿ ಸಲ್ಲಿಸಲಾಗಿದೆ. ಸರಕಾರ ಶೀಘ್ರವಾಗಿ ನಮ್ಮ ಬೇಡಿಕೆಯನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು. ಹಿರಿಯ ಸದಸ್ಯ ವಿಠಲ ಶೆಟ್ಟಿಗಾರ್, ಪದಾಧಿಕಾರಿಗಳಾದ ವೇದಿಕೆ ಪದಾಧಿಕಾರಿಗಳಾದ ವಿಜಯಾ ಪೈ, ಸ್ಟಾ Âನಿ ತಾವ್ರೋ, ನಾರಾಯಣ ಅವರು ಅಭಿಪ್ರಾಯ ಮಂಡಿಸಿದರು.
ನಾರಾಯಣ ಪೂಜಾರಿ, ಮೋಹನ ಬಂಗೇರ, ಎನ್.ಆನಂದ ನಾಯ್ಕ, ಹೇಮನಾಥ, ಜೆರಾಲ್ಡ್, ಭಾರತಿ ಪಿ.ವಿ ಮೊದಲಾದವರಿದ್ದರು. ಜಿಲ್ಲಾ ಸಂಚಾಲಕಿ ಮಂಜುಳಾ ಜಿ. ಸ್ವಾಗತಿಸಿದರು. ಪ್ರತಿಭಟನೆಯ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಮತ್ತು ಮುಖ್ಯ ಕಾರ್ಯದರ್ಶಿಯವರಿಗೆ ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Ladakh; ಪೂರ್ವ ಲಡಾಕ್ನಲ್ಲಿ ಪರಿಸ್ಥಿತಿ ಸಾಮಾನ್ಯಕ್ಕೆ ಮರಳಿಲ್ಲ: ಸೇನೆ
Illegal immigrants: ಅಕ್ರಮ ವಲಸಿಗರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಅಗತ್ಯ
Jairam Ramesh; ಇ.ಡಿ. ಬಳಸಿ ಕೇಂದ್ರದಿಂದ ದಾಳಿ: ಕಾಂಗ್ರೆಸ್ ಆಕ್ರೋಶ
Nigeria: ಸಿಂಹಕ್ಕೆ ಊಟ ಕೊಡಲು ಹೋಗಿ ಆಹಾರವಾದ!
Ram Rahim; ಡೇರಾ ಮುಖ್ಯಸ್ಥನಿಗೆ ಪರೋಲ್ ಪ್ರಶ್ನಿಸಿ ಚು. ಆಯೋಗಕ್ಕೆ “ಕೈ’ ಪತ್ರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.