ಹೈನುರಾಸು ನಿರ್ವಹಣೆ ಕಾರ್ಯಾಗಾರ


Team Udayavani, Dec 18, 2017, 2:04 PM IST

18-Dec-11.jpg

ಕಡಬ: ಹೈನುಗಾರಿಕೆ ಲಾಭದಾಯಕವಲ್ಲ ಎನ್ನುವುದು ತಪ್ಪು ಅಭಿಪ್ರಾಯ. ವೈಜ್ಞಾನಿಕ ರೀತಿಯ ವ್ಯವಸ್ಥಿತ ಹೈನು
ಗಾರಿಕೆಯಿಂದ ಹೆಚ್ಚಿನ ಲಾಭ ಪಡೆಯಬಹುದು ಎಂದು ದ.ಕ. ಸಹಕಾರ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಕೆ.
ಸೀತಾರಾಮ ರೈ ಸವಣೂರು ಅವರು ಅಭಿಪ್ರಾಯಪಟ್ಟರು.

ರವಿವಾರ ಕಡಬದ ಸರಸ್ವತೀ ವಿದ್ಯಾಲಯದ ಸಭಾಂಗಣದಲ್ಲಿ ಕೆಎಂಎಫ್‌ ತರಬೇತಿ ಕೇಂದ್ರ ಮೈಸೂರು, ದ.ಕ. ಸಹಕಾರ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು, ಸರಸ್ವತೀ ವಿದ್ಯಾಲಯ ಗ್ರಾಮ ವಿಕಾಸ ಸಮಿತಿ ಕೋಡಿಂಬಾಳ ಹಾಗೂ ಕಡಬ ಹಾಲು ಉತ್ಪಾದಕರ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ಜರಗಿದ ಹೈನುರಾಸು ನಿರ್ವಹಣೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಈ ಆಧುನಿಕ ಯುಗದಲ್ಲಿ ಹೈನುಗಾರಿಕೆ ಒಂದು ಉತ್ತಮ ಉದ್ಯೋಗ. ಆಧುನಿಕ ರೀತಿಯಲ್ಲಿ ಹೈನುಗಾರಿಕೆ ನಡೆಸುವುದಕ್ಕೆ ಸರಕಾರವೂ ಎಲ್ಲ ರೀತಿಯ ಸಹಕಾರ ನೀಡುತ್ತದೆ. ಹಾಲು ಒಕ್ಕೂಟದ ವತಿಯಿಂದಲೂ ಮಾರ್ಗದರ್ಶನ ಹಾಗೂ ನೆರವು ಸಿಗುತ್ತದೆ. ಆದರೆ ನಾವು ಮಾಡುವ ಕೆಲಸದ ಮೇಲೆ ಶ್ರದ್ಧೆ, ಪ್ರೀತಿಯೊಂದಿಗೆ ಪ್ರಾಮಾಣಿಕ ದುಡಿಮೆ ಮಾಡಿದಾಗ ಮಾತ್ರ ನಾವು ಯಶಸ್ಸು ಸಾಧಿಸಬಹುದು ಎಂದು ಹೇಳಿದರು. ಕಡಬ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಜಯಚಂದ್ರ ರೈ ಕುಂಟೋಡಿ ಅಧ್ಯಕ್ಷತೆ ವಹಿಸಿದ್ದರು.

ನೆರವು ವಿತರಣೆ
ಅತಿಥಿಗಳಾಗಿ ಮೈಸೂರು ಕೆಎಂಎಫ್‌ ತರಬೇತಿ ಕೇಂದ್ರದ ಅಪರ ನಿರ್ದೇಶಕ ಡಾ| ಕೆ.ಪಿ. ಶಿವಶಂಕರ್‌, ಉಪನ್ಯಾಸಕ ಎಚ್‌.ಎಂ. ಮಹಾದೇವ ಸ್ವಾಮಿ, ದ.ಕ. ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಡಾ| ರಾಮಕೃಷ್ಣ ಭಟ್‌, ವಿಸ್ತರಣಾಧಿಕಾರಿ ಮಂಜುನಾಥ್‌, ಕಡಬ ಹಾ.ಉ.ಸ. ಸಂಘದ ಕಾರ್ಯದರ್ಶಿ ಕುಂಞಣ್ಣ ಕುದ್ರಡ್ಕ ಉಪಸ್ಥಿತರಿದ್ದರು. ರೈತ ಕಲ್ಯಾಣ ಟ್ರಸ್ಟ್‌ನ ವತಿಯಿಂದ ಮರ್ದಾಳ ಸಂಘದ ಸದಸ್ಯ ಬೆಳಿಯಪ್ಪ ಗೌಡ ಅವರಿಗೆ 15 ಸಾವಿರ ರೂ. ಗಳ ನೆರವು ವಿತರಿಸಲಾಯಿತು.

ಸರಸ್ವತೀ ವಿದ್ಯಾಲಯದ ಕೋಡಿಂಬಾಳ ಗ್ರಾಮ ವಿಕಾಸ ಸಮಿತಿಯ ಸಂಯೋಜಕ ಮಂಜುನಾಥ ಶೆಟ್ಟಿ ಸ್ವಾಗತಿಸಿ, ಸರಸ್ವತೀ ವಿದ್ಯಾಲಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಮಾಧವ ಕೋಲ್ಪೆ ವಂದಿಸಿ ದರು. ಶಿಕ್ಷಕ ವಸಂತ ಕರ್‌ಂಬೋಡಿ ನಿರೂಪಿಸಿದರು.

ಹೈನುಗಾರಿಕೆ ಮಹತ್ವ ತಿಳಿಸಿ
ಸರಸ್ವತೀ ವಿದ್ಯಾಲಯದ ಸಂಚಾಲಕ ಮಂಕುಡೆ ವೆಂಕಟ್ರಮಣ ರಾವ್‌ ಮಾತನಾಡಿ, ಶಿಕ್ಷಣದ ಜತೆಗೆ ವಿದ್ಯಾರ್ಥಿಗಳಿಗೆ ಹೈನುಗಾರಿಕೆಯ ಮಹತ್ವವನ್ನು ತಿಳಿಸಬೇಕು. ಹಾಗೆಯೇ ಔಷಧೀಯ ಗುಣಗಳನ್ನು ಹೊಂದಿರುವ ಸ್ವದೇಶಿ
ತಳಿಯ ದನಗಳನ್ನು ಸಾಕುವಂತೆ ಪ್ರೇರೇಪಿಸಬೇಕು ಎಂದರು.

ಟಾಪ್ ನ್ಯೂಸ್

Rain: ಚಿತ್ತಾ ಮಳೆ ಅಬ್ಬರಕ್ಕೆ ಇಬ್ಬರ ದುರ್ಮರಣ

Rain: ಚಿತ್ತಾ ಮಳೆ ಅಬ್ಬರಕ್ಕೆ ಇಬ್ಬರ ದುರ್ಮರಣ

ನೀರಿನ ತೊಟ್ಟಿಗೆ ಬಿದ್ದು  3 ವರ್ಷದ ಮಗು ಸಾ*ವು

Kanakapura: ನೀರಿನ ತೊಟ್ಟಿಗೆ ಬಿದ್ದು 3 ವರ್ಷದ ಮಗು ಸಾ*ವು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

Badiyadka: ವಂಚನೆ ಪ್ರಕರಣ; ಸಚಿತಾ ವಿರುದ್ಧ ಇನ್ನೊಂದು ಕೇಸು

Badiyadka: ವಂಚನೆ ಪ್ರಕರಣ; ಸಚಿತಾ ವಿರುದ್ಧ ಇನ್ನೊಂದು ಕೇಸು

Ullal: ಎಂಡಿಎಂಎ ಮಾರಾಟ ಆರೋಪಿ ಬಂಧನ

Ullal: ಎಂಡಿಎಂಎ ಮಾರಾಟ ಆರೋಪಿ ಬಂಧನ

Mangaluru: ಸಾಲು ಸಾಲು ರಜೆ; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಜನಜಂಗುಳಿ

Mangaluru: ಸಾಲು ಸಾಲು ರಜೆ; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಜನಜಂಗುಳಿ

Udupi: ಗೀತಾರ್ಥ ಚಿಂತನೆ-61: ಶ್ವೇತ ವರ್ಣಕ್ಕೂ, ಶುಕ್ಲ ವರ್ಣಕ್ಕೂ ಸೂಕ್ಷ್ಮ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-61: ಶ್ವೇತ ವರ್ಣಕ್ಕೂ, ಶುಕ್ಲ ವರ್ಣಕ್ಕೂ ಸೂಕ್ಷ್ಮ ವ್ಯತ್ಯಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

9

Puttur: ದೂರವಾಣಿ ಕರೆ ಮಾಡಿ ಜೀವ ಬೆದರಿಕೆ

11-bantwala

Bantwala: ವಿದ್ಯುತ್ ಕಂಬ, ಬೈಕ್ ಗೆ ಡಿಕ್ಕಿಯಾಗಿ ಕಾರು ಪಲ್ಟಿ

3

Puttur: ಸುಧಾರಣೆ ನಿರೀಕ್ಷೆಯಲ್ಲಿ ಕಬಕ-ಪುತ್ತೂರು ರೈಲು ನಿಲ್ದಾಣ

2

Puttur:ಇಲ್ಲಿ ವೇಷಗಳಿಗೆ ಪ್ರವೇಶವಿಲ್ಲ;ನೇಮದ ದಿನ ವ್ಯಾಪಾರವಿಲ್ಲ, ಎಲ್ಲವೂ ಉಚಿತವಾಗಿ ವಿತರಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rain: ಚಿತ್ತಾ ಮಳೆ ಅಬ್ಬರಕ್ಕೆ ಇಬ್ಬರ ದುರ್ಮರಣ

Rain: ಚಿತ್ತಾ ಮಳೆ ಅಬ್ಬರಕ್ಕೆ ಇಬ್ಬರ ದುರ್ಮರಣ

ನೀರಿನ ತೊಟ್ಟಿಗೆ ಬಿದ್ದು  3 ವರ್ಷದ ಮಗು ಸಾ*ವು

Kanakapura: ನೀರಿನ ತೊಟ್ಟಿಗೆ ಬಿದ್ದು 3 ವರ್ಷದ ಮಗು ಸಾ*ವು

1-ewwss

India vs Australia; ಟೆಸ್ಟ್‌  ಸರಣಿಗೆ ಗ್ರೀನ್‌ ಸಂಶಯ

1-ucchil

Uchchila Dasara: ದೇಹದಾರ್ಡ್ಯ ಸ್ಪರ್ಧೆ ಉದ್ಘಾಟನೆ

1-asdsad

Arctic Open ಬ್ಯಾಡ್ಮಿಂಟನ್‌; ಲಕ್ಷ್ಯ ಸೇನ್‌ಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.