ಮೇ 12ರಂದು ಚುನಾವಣೆ; ಗರಿಗೆದರಿದ ಕುತೂಹಲ

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ

Team Udayavani, May 2, 2019, 6:10 AM IST

3004MLR33-KMF

ಮಂಗಳೂರು: ರಾಜ್ಯದ ಪ್ರಮುಖ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟಗಳಲ್ಲೊಂದಾಗಿ ಗುರುತಿಸಿಕೊಂಡಿರುವ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರ ಮಂಡಳಿಗೆ ಮೇ 12ರಂದು ಚುನಾವಣೆ ನಡೆಯಲಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಇನ್ನೊಂದು ಪ್ರತಿಷ್ಠಿತ ಸಹಕಾರಿ ಚುನಾವಣೆಗೆ ಸಾಕ್ಷಿಯಾಗುತ್ತಿದ್ದು, ಕುತೂಹಲ ಗರಿಗೆದರಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡಿರುವ ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 5 ವರ್ಷಗಳ ಅವಧಿಯ ನಿರ್ದೇಶಕರ ಮಂಡಳಿಗೆ ಈ ಚುನಾವಣೆ. ಎ.27ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದ್ದು, ಮೇ 4 ಕೊನೆಯ ದಿನ. ಮೇ5ರಂದು ಪರಿಶೀಲನೆ, ಮೇ 6 ನಾಮಪತ್ರ ಹಿಂದೆಗೆದುಕೊಳ್ಳಲು ಕೊನೆಯ ದಿನ. ಅವಶ್ಯಬಿದ್ದರೆ ಮೇ 12ರಂದು ಚುನಾವಣೆ ನಡೆಯಲಿದೆ.

ಅಂದೇ ಸಂಜೆ ಮತ ಎಣಿಕೆ, ಫಲಿತಾಂಶ ಪ್ರಕಟ. ಒಕ್ಕೂಟವು ಮಂಗಳೂರು ಮತ್ತು ಬಂಟ್ವಾಳ ತಾಲೂಕುಗಳನ್ನು ಒಳಗೊಂಡ ಮಂಗಳೂರು ಉಪವಿಭಾಗ, ಪುತ್ತೂರು, ಬೆಳ್ತಂಗಡಿ, ಸುಳ್ಯಗಳನ್ನು ಒಳಗೊಂಡ ಪುತ್ತೂರು ಉಪವಿಭಾಗ, ಕುಂದಾಪುರ,ಉಡುಪಿ ಮತ್ತು ಕಾರ್ಕಳಗಳನ್ನು ಒಳಗೊಂಡ ಕುಂದಾಪುರ ಉಪವಿಭಾಗಗಳನ್ನು ಹೊಂದಿದೆ. ಮಂಗಳೂರು ಉಪವಿಭಾಗದಿಂದ 3, ಪುತ್ತೂರಿನಿಂದ 4, ಕುಂದಾಪುರದಿಂದ 7 ಮತ್ತು ಎರಡು ಮಹಿಳಾ ಸ್ಥಾನಗಳನ್ನು ಒಳಗೊಂಡು ಒಟ್ಟು 16 ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ. ಪ್ರಸ್ತುತ ರವಿರಾಜ ಹೆಗ್ಡೆ ಅಧ್ಯಕ್ಷರು ಮತ್ತು ಸುಚರಿತ ಶೆಟ್ಟಿ ಉಪಾಧ್ಯಕ್ಷರಾಗಿದ್ದಾರೆ.

ಹಾಲು ಉತ್ಪಾದಕರ ಸಹಕಾರಿ ಸಂಘಗಳ ಅಧ್ಯಕ್ಷರು ಒಕ್ಕೂಟದ ಸದಸ್ಯರಾಗಿರುತ್ತಾರೆ. ಮಂಗಳೂರು ತಾಲೂಕಿನಲ್ಲಿ 79, ಬಂಟ್ವಾಳದಲ್ಲಿ 77, ಪುತ್ತೂರಿನಲ್ಲಿ 78, ಸುಳ್ಯ 44, ಕುಂದಾಪುರ 108, ಉಡುಪಿ ಜಿಲ್ಲೆಯಲ್ಲಿ 124 ಮತ್ತು ಕಾರ್ಕಳ ತಾಲೂಕಿನಲ್ಲಿ 64 ಸಹಕಾರಿ ಸಂಘಗಳು ಸೇರಿದಂತೆ ಒಟ್ಟು 643 ಮತದಾರರನ್ನು ಒಕ್ಕೂಟ ಹೊಂದಿದೆ.

ಕಳೆದ ಅವಧಿಯಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಈ ಬಾರಿಯೂ ಒಮ್ಮತದ ಆಯ್ಕೆ ಕುರಿತು ಜಿಲ್ಲೆಯ ಪ್ರಮುಖ ಸಹಕಾರಿ ಧುರೀಣರ ನಡುವೆ ಮಾತುಕತೆ ನಡೆಯುತ್ತಿದೆ. ಮೇ 2ರ ವೇಳೆಗೆ ಈ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಮೂಲಗಳು ತಿಳಿಸಿವೆ.

ಎಸ್‌ಸಿಡಿಸಿಸಿ ಬ್ಯಾಂಕ್‌, ಕ್ಯಾಂಪ್ಕೋ ಮತ್ತು ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಅವಿಭಜಿತ ಜಿಲ್ಲೆಯ ಪ್ರತಿಷ್ಠಿತ ಸಹಕಾರಿ ಸಂಸ್ಥೆಗಳಾಗಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿವೆ. ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ಈಗಾಗಲೇ ಚುನಾವಣೆ ನಡೆದಿದ್ದು ಡಾ| ರಾಜೇಂದ್ರ ಕುಮಾರ್‌ ನೇತೃತ್ವದ ಸಹಕಾರ ಬಳಗ ಜಯ ಸಾಧಿಸಿದೆ.

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರ ಚುನಾವಣೆ ಮೇ 12ರಂದು ನಡೆಯಲಿದ್ದು, ನಾಮಪತ್ರ ಸ್ವೀಕಾರ ಆರಂಭಗೊಂಡಿದೆ. ಎ.29ರ ವರೆಗೆ ಪುತ್ತೂರು ಸಾಮಾನ್ಯ ಕ್ಷೇತ್ರದಿಂದ ಒಂದು ಮತ್ತು ಕುಂದಾಪುರ ಸಾಮಾನ್ಯ ಕ್ಷೇತ್ರದಿಂದ 1 ಸೇರಿ ಒಟ್ಟು 2 ನಾಮಪತ್ರಗಳು ಸಲ್ಲಿಕೆಯಾಗಿವೆ. ಮೇ 4 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ.
– ಎಸ್‌.ಸಿ. ಮಹೇಶ್‌ ಚುನಾವಣಾಧಿಕಾರಿ ಮತ್ತು ಜಿ.ಪಂ. ಉಪಕಾರ್ಯದರ್ಶಿ

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.