Dakshina Kannada ಜಿಲ್ಲೆಯ ನಾಲ್ವರಿಗೆ “ಸಹಕಾರ ರತ್ನ’ ಗೌರವ

ನ. 20ರಂದು ವಿಜಯಪುರದ ಸಹಕಾರ ಸಪ್ತಾಹದಲ್ಲಿ ಪ್ರಶಸ್ತಿ ಪ್ರದಾನ

Team Udayavani, Nov 17, 2023, 11:40 PM IST

Dakshina Kannada ಜಿಲ್ಲೆಯ ನಾಲ್ವರಿಗೆ “ಸಹಕಾರ ರತ್ನ’ ಗೌರವ

ಮಂಗಳೂರು: ಸಹಕಾರ ರಂಗದಲ್ಲೇ ಉನ್ನತವಾದ “ಸಹಕಾರ ರತ್ನ’ ಪ್ರಶಸ್ತಿಗೆ ದಕಿಕ್ಷಣ ಕನ್ನಡ ಜಿಲ್ಲೆಯ ನಾಲ್ವರು ಸಹಕಾರಿ ನಾಯಕರು ಆಯ್ಕೆಯಾಗಿದ್ದಾರೆ.

ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಮೋನಪ್ಪ ಶೆಟ್ಟಿ ಎಕ್ಕಾರು, ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಿ. ನಿರಂಜನ್‌, ಮಂಗಳೂರು ಎಂಸಿಸಿ ಬ್ಯಾಂಕ್‌ ಅಧ್ಯಕ್ಷ ಅನಿಲ್‌ ಲೋಬೊ ಹಾಗೂ ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷ ಉಮೇಶ್‌ ಟಿ. ಕರ್ಕೇರ ಆಯ್ಕೆಯಾದವರು.

ನ. 20ರಂದು ವಿಜಯಪುರದ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಆವರಣದಲ್ಲಿ ನಡೆಯುವ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಮೋನಪ್ಪ ಶೆಟ್ಟಿ ಎಕ್ಕಾರು
ಮಂಗಳೂರು ತಾಲೂಕು ಬಡಗ ಎಕ್ಕಾರಿನ ಮೋನಪ್ಪ ಶೆಟ್ಟಿ ಅವರು ಪ್ರಗತಿ ಪರ ಕೃಷಿಕರಾಗಿದ್ದು ಸಹಕಾರಿ, ರಾಜಕೀಯ ಕ್ಷೇತ್ರ ವನ್ನು ಪ್ರವೇಶಿಸಿ ಜವಾಬ್ದಾರಿ ನಿರ್ವಹಿಸಿದವರು. 1977 ರಲ್ಲಿ ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ನಿರ್ದೇಶಕರಾಗಿ ಮೊದಲು ಆಯ್ಕೆಯಾದರು. 1978 ರಿಂದ 83ರ ವರೆಗೆ ಇದರ ಅಧ್ಯಕ್ಷರಾಗಿ, 1983ರಿಂದ 1997ರ ವರೆಗೆ ನಿರ್ದೇಶಕರಾಗಿದ್ದವರು. 1997ರಿಂದ ಸುದೀರ್ಘ‌ 25 ವರ್ಷ ಅಧ್ಯಕ್ಷರಾದರು. ಸಂಸ್ಥೆಯನ್ನು ನಿರಂತರ ಯಶಸ್ಸಿನತ್ತ ತೆಗೆದುಕೊಂಡು ಹೋದವರು.

ಬಿ. ನಿರಂಜನ
ತಣ್ಣೀರುಪಂಥ ಬಾವಂತಬೆಟ್ಟು ನಿವಾಸಿ ಬಿ. ನಿರಂಜನ ಅವರು ಜಿಲ್ಲಾ ಪಂಚಾಯತ್‌ ಸದಸ್ಯರಾಗಿ,ಉಪಾಧ್ಯಕ್ಷರಾಗಿ ಇದ್ದವರು. ತಣ್ಣೀರುಪಂಥ ಪ್ರಾಥಮಿಕ ಕೃಷಿ ಸಹಕಾರಿ ಸಂಘ ಆರಂಭಗೊಂಡ 1983ನೇ ಇಸವಿಯಿಂದ ಅಧ್ಯಕ್ಷರಾಗಿ ಸುದೀರ್ಘ‌ 41 ವರ್ಷ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು. ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ, ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾಗಿ ಸುದೀರ್ಘ‌ವಾಗಿ ಸಹಕಾರಿ ಮತ್ತು ರಾಜಕೀಯ ರಂಗ ದಲ್ಲಿ ಸೇವೆ ಸಲ್ಲಿಸಿರುತ್ತಾರೆ.

ಅನಿಲ್‌ ಲೋಬೋ
ಮಂಗಳೂರಿನ ಎಂಸಿಸಿ ಬ್ಯಾಂಕ್‌ ಎರಡನೇ ಬಾರಿಗೆ ಅಧ್ಯಕ್ಷರಾಗಿ ಈಚೆಗೆ ಕಾರ್ಯಭಾರ
ವಹಿಸಿಕೊಂಡಿರುವ ಅನಿಲ್‌ ಲೋಬೊ ಅವರು ಸಹಕಾರ ಚಳವಳಿಯಲ್ಲಿ ನಾಯಕತ್ವ ಹಾಗೂ ಕಾರ್ಯ ಕೌಶಲದಿಂದ ಗಮನ ಸೆಳೆದವರು. ಅವರ ಅವಧಿಯಲ್ಲಿ ಬ್ಯಾಂಕ್‌ ಪ್ರಗತಿ, ಲಾಭ, ವಿಸ್ತರಣೆಯನ್ನು ಕಂಡಿದೆ. ಗ್ರಾಹಕ ಸ್ನೇಹಿ ಕ್ರಮಗಳೊಂದಿಗೆ ಗಮನ ಸೆಳೆದವರು. ಕ್ರೈಸ್ತ ಸಮುದಾಯದಿಂದ ಸಹಕಾರ ರತ್ನ ಪಡೆಯುತ್ತಿರುವವರಲ್ಲಿ ಮೊದಲಿಗರು.

ಉಮೇಶ್‌ ಟಿ. ಕರ್ಕೇರ
ಕುಳಾçಯವರಾದ ಉಮೇಶ್‌ ಅವರು ಕರ್ನಾಟಕ ಕರಾವಳಿ ಹಾಗೂ ಕೇರಳ, ಮಹಾರಾಷ್ಟ್ರದಾದ್ಯಂತ ತಮ್ಮ ಮತ್ಸ éರಾಜ್‌ ಫಿಶರೀಸ್‌ ಸಂಸ್ಥೆ ವತಿಯಿಂದ ನ್ಯಾಯ ಸಮ್ಮತ ಮೌಲ್ಯ ಸಿಗಲು ಶ್ರಮಿಸಿದವರು. ನಾಡದೋಣಿ ಮೀನುಗಾರರ ಸಂಘದ ಸ್ಥಾಪಕ ಅಧ್ಯಕ್ಷರಾಗಿ 1985ರಿಂದ 1991ರ ವರೆಗೆ ಇದ್ದವರು. ಕರ್ನಾಟಕ ಪರ್ಸಿನ್‌ ಮೀನುಗಾರರ ಸಂಘದ ಅಧ್ಯಕ್ಷರಾಗಿದ್ದರು. ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷರಾಗಿ, ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸಂಚಾಲಕ ರಾಗಿ ಸೇವೆ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Rain ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

Rain ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

Campco ಸದಸ್ಯತ್ವ ಚೀಟಿ ದುರ್ಬಳಕೆ ಮಾಡಿ ಕಳಪೆ ಅಡಿಕೆ ಮಾರಾಟ ಯತ್ನ

Campco ಸದಸ್ಯತ್ವ ಚೀಟಿ ದುರ್ಬಳಕೆ ಮಾಡಿ ಕಳಪೆ ಅಡಿಕೆ ಮಾರಾಟ ಯತ್ನ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.