ದಕ್ಷಿಣ ಕನ್ನಡ-ಉಡುಪಿ: ಉತ್ತಮ ಮಳೆ; ಕೆಲವೆಡೆ ಹಾನಿ


Team Udayavani, Jul 17, 2022, 12:35 AM IST

ದಕ್ಷಿಣ ಕನ್ನಡ-ಉಡುಪಿ: ಉತ್ತಮ ಮಳೆ; ಕೆಲವೆಡೆ ಹಾನಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದೆ. ಕೆಲವು ಕಡೆ ಹಾನಿಯಾದ ಬಗ್ಗೆ ವರದಿಯಾಗಿದೆ.

ಮಂಗಳೂರು ನಗರದಲ್ಲಿ ಬಿಟ್ಟು ಬಿಟ್ಟು ಮಳೆಯಾಗಿತ್ತು. ಜಿಲ್ಲೆಯ ಪುತ್ತೂರು, ಉಪ್ಪಿನಂಗಡಿ, ಕಡಬ, ಸುಬ್ರಹ್ಮಣ್ಯ, ಸುಳ್ಯ, ಕಲ್ಮಕಾರು, ಬೆಳ್ತಂಗಡಿ, ಧರ್ಮಸ್ಥಳ, ನಾರಾವಿ, ಮಡಂತ್ಯಾರು, ಬಂಟ್ವಾಳ, ಕನ್ಯಾನ, ಸುರತ್ಕಲ್‌, ಉಳ್ಳಾಲ, ಮೂಡುಬಿದಿರೆ ಸೇರಿದಂತೆ ಜಿಲ್ಲೆಯಾದ್ಯಂತ ಉತ್ತಮ ಮಳೆ ಮುಂದುವರಿದಿದೆ.

ವೃದ್ಧೆಗೆ ಗಾಯ
ಬೆಳ್ತಂಗಡಿ: ಕೊಯ್ಯೂರು ಗ್ರಾಮದ ಆದರ್ಶ ನಗರದಲ್ಲಿ ಹಂಚಿನ ಮನೆಯೊಂದರ ಮೇಲೆ ಮರ ಬಿದ್ದು ವೃದ್ಧೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ಶನಿವಾರ ನಡೆದಿದೆ.ಮರ ಬಿದ್ದುದರಿಂದ ಕಮಲಾ (75) ಅವರ ಕೈ ಮತ್ತು ಕಾಲಿಗೆ ಗಾಯಗಳಾಗಿದ್ದು ಸ್ಥಳೀಯರ ನೆರವಿನೊಂದಿಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಪುತ್ತೂರು: ಮನೆಗೆ ಹಾನಿ
ಪುತ್ತೂರು: ಭಾರೀ ಗಾಳಿಗೆ ಸೆಂಟ್ಯಾರು ಕೂರೇಲು ಸಮೀಪ ಹಂಚಿನ ಮನೆಯೊಂದಕ್ಕೆ ತೆಂಗಿನ ಮರವೊಂದು ಬಿದ್ದು ಮನೆ ಸಂಪೂರ್ಣ ಹಾನಿಗೊಂಡ ಘಟನೆ ಶನಿವಾರ ಸೆಂಟ್ಯಾರು ಸಮೀಪದ ಕೂರೇಲು ಎಂಬಲ್ಲಿ ನಡೆದಿದೆ.

ಕೂರೇಲು ಬಾಲಕೃಷ್ಣ ಎಂಬವರ ಮನೆಗೆ ತೆಂಗಿನ ಮರ ಬಿದ್ದಿದ್ದು, ಮರ ಬೀಳುವ ಸಂದರ್ಭ ಅವರು ಮೊಮ್ಮಕ್ಕಳೊಂದಿಗೆ ಮನೆಯಲ್ಲಿದ್ದರು. ತೆಂಗಿನ ಮರ ಮನೆಯ ಮೇಲೆ ಬಿದ್ದಾಗ ಹಂಚಿನ ತುಂಡು ಬಾಲಕೃಷ್ಣ ಅವರ ತಲೆಗೆ ಬಿದ್ದು ಗಾಯವಾಗಿದೆ. ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.

ಮನೆ ಸಂಪೂರ್ಣ ಹಾನಿಗೊಂಡಿದ್ದರಿಂದ ಮನೆ ಮಂದಿಯನ್ನು ಪಕ್ಕದ ಮನೆಗೆ ಸ್ಥಳಾಂತರಿಸಲಾಗಿದೆ. ಆರ್ಯಾಪು ಗ್ರಾಮದ ಗ್ರಾಮಕರಣಿಕ ಅಶ್ವಿ‌ನಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜು.17 ಮತ್ತು 18ರಂದು ಕರಾವಳಿ ಭಾಗದಲ್ಲಿ ಉತ್ತಮ ಮಳೆ ಸುರಿಯುವ ನಿರೀಕ್ಷೆ ಇದ್ದು, ಎಲ್ಲೋ ಅಲರ್ಟ್‌ ಘೋಷಿಸಿದೆ. ಈ ವೇಳೆ ಗಾಳಿ-ಮಳೆ ಇರಲಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರವೂ ಹೆಚ್ಚಿರುವ ನಿರೀಕ್ಷೆ ಇದೆ.

ಉಡುಪಿ: ಮತ್ತೆ ಬಿರುಸುಗೊಂಡ ಮಳೆ
ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ, ಶನಿವಾರ ಧಾರಕಾರ ಮಳೆಯಾಗಿದೆ. ಕಳೆದ ಎರಡು ದಿನ
ಗಳಿಂದ ಕ್ಷೀಣಗೊಂಡಿದ್ದ ಮಳೆ ಮತ್ತೆ ಬಿರುಸುಗೊಂಡಿದೆ. ಕಾಪು, ಪಡುಬಿದ್ರಿ, ಕುಂದಾಪುರ, ಕಾರ್ಕಳ, ಹೆಬ್ರಿ, ಅಜೆಕಾರು, ಸಿದ್ದಾಪುರ, ಬೈಂದೂರು, ಕುಂದಾಪುರ, ಉಡುಪಿ ಭಾಗದಲ್ಲಿ ಬಿಟ್ಟುಬಿಟ್ಟು ನಿರಂತರ ಮಳೆ ಸುರಿದಿದೆ. ಬ್ರಹ್ಮಾವರ ತಾಲೂಕಿನಲ್ಲಿ 4, ಕಾರ್ಕಳ 4, ಹೆಬ್ರಿ 4, ಬೈಂದೂರಿನಲ್ಲಿ 4 ಮನೆಗಳಿಗೆ ಹಾನಿ ಸಂಭವಿಸಿದೆ.

ಮಳೆಗಾಳಿಯಿಂದಾಗಿ ಗ್ರಾಮೀಣ ಭಾಗದಲ್ಲಿ ವಿದ್ಯುತ್‌, ಟಿಸಿಗಳಿಗೆ ಹಾನಿ ಮುಂದುವರಿದ ಪರಿಣಾಮ ಹಲವೆಡೆ ವಿದ್ಯುತ್‌ ವ್ಯತ್ಯಯ ಉಂಟಾಗಿದೆ. ಶನಿವಾರ ಬೆಳಗ್ಗೆ 8.30ರ ಹಿಂದಿನ 24 ಗಂಟೆಗಳ ಕಾಲ ಉಡುಪಿ 31.3, ಬ್ರಹ್ಮಾವರ 57.4, ಕಾಪು 25.4, ಕುಂದಾಪುರ 119.9 ಬೈಂದೂರು 143.4, ಕಾರ್ಕಳ 49.8, ಹೆಬ್ರಿ 105.1ಮಿ .ಮೀ ಮಳೆಯಾಗಿದೆ.

ಕುಂದಾಪುರ: ಸಾಲ್ಬುಡದಲ್ಲಿ ಮತ್ತೆ ನೆರೆ
ಕುಂದಾಪುರ: ಕುಂದಾಪುರದಾದ್ಯಂತ ಶನಿವಾರ ದಿನವಿಡೀ ಭಾರೀ ಮಳೆಯಾಗಿದೆ. ಇದಲ್ಲದೆ ಘಾಟಿ ಪ್ರದೇಶದಲ್ಲಿ ನಿರಂತರ ಮಳೆ ಯಾ ಗಿದ್ದರಿಂದ ನಾವುಂದ ಗ್ರಾಮದ ಸಾಲ್ಬುಡ, ಅರೆಹೊಳೆ ಪರಿಸರದಲ್ಲಿ ಮತ್ತೆ ನೆರೆಯಾಗಿದೆ ಮಾತ್ರ ವಲ್ಲದೇ ಎಕರೆಗಟ್ಟಲೆ ಗದ್ದೆಗಳು ಜಲಾವೃತ ಗೊಂಡಿವೆ.

ಇದರಿಂದ ನಾವುಂದ ಕಡೆಗೆ ಬಂದಿದ್ದ ಜನ ಮನೆಗಳಿಗೆ ತೆರಳಲು ದೋಣಿ ಯನ್ನು ಆಶ್ರಯಿಸುವಂತಾಯಿತು. ಅರೆಹೊಳೆ – ನಾವುಂದ ರಸ್ತೆಯಲ್ಲಿ ನೀರು ನಿಂತು ಸಂಚಾರಕ್ಕೆ ತೊಡಕಾಗಿದೆ. ಭಾರೀ ಮಳೆಯಿಂದ ಕುಂದಾಪುರ, ಬೈಂದೂರು ತಾಲೂಕಿನ 7 ಮನೆಗಳಿಗೆ ಹಾನಿಯಾಗಿದೆ. ಕಿರಿಮಂಜೇಶ್ವರ ಸರಕಾರಿ ಹಿ.ಪ್ರಾ. ಶಾಲೆಯ ಒಂದು ಬದಿಯ ಆವರಣ ಗೋಡೆಯು ಕುಸಿದಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.