Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

ಪಕ್ಷಗಳಲ್ಲಿ ಸೋಲು-ಗೆಲುವಿನ ನಾನಾ ಕೋನದ ಅವಲೋಕನ

Team Udayavani, Apr 29, 2024, 6:50 AM IST

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

ಮಂಗಳೂರು: ಕರಾವಳಿಯಲ್ಲಿ ಲೋಕ ಸಮರ ಮುಕ್ತಾಯವಾಗಿದ್ದು, ಜೂ. 4ರ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ. ಇದರ ಮಧ್ಯೆ, ಸೋಲು-ಗೆಲುವಿನ ಲೆಕ್ಕಾಚಾರಗಳು ಬಿಜೆಪಿ-ಕಾಂಗ್ರೆಸ್‌ ಮಧ್ಯೆ ಬಿರುಸಿ ನಿಂದಲೇ ನಡೆಯುತ್ತಿದೆ.

ಮತಯಂತ್ರದೊಳಗೆ ಭದ್ರವಾಗಿ ರುವ ಜನಾದೇಶ ಪ್ರಕಟಗೊಳ್ಳಲು ಇನ್ನು ಬರೋಬ್ಬರಿ 36 ದಿನಗಳು ಬಾಕಿ ಉಳಿದಿದ್ದು ಸೋಲು ಗೆಲುವಿನ ಬಗ್ಗೆ ಲೆಕ್ಕಾಚಾರ, ವಿಶ್ಲೇಷಣೆಗಳು ಮಾತ್ರ ನಾನಾ ಕೋನಗಳಿಂದ ಲೆಕ್ಕವಿಲ್ಲದಷ್ಟು ನಡೆಯುತ್ತಿವೆ.

ದ.ಕ. ಲೋಕಸಭಾ ಕ್ಷೇತ್ರದಲ್ಲಿ ಶೇ.77.56 ಮತದಾನವಾಗಿದೆ. ಎಂದಿ ನಂತೆ ಸುಳ್ಯದಲ್ಲಿ ಗರಿಷ್ಠ ಶೇ.83.01 ಮತದಾನವಾಗಿದೆ. ಹೆಚ್ಚಿದ ಮತದಾನ ಮತ್ತು ಕ್ಷೇತ್ರದಲ್ಲಿ ವ್ಯಕ್ತವಾಗಿರುವ ರಾಜಕೀಯ ಟ್ರೆಂಡ್‌ಗಳನ್ನು ಮೂಲ ವಾಗಿಟ್ಟುಕೊಂಡು ರಾಜಕೀಯ ಪಕ್ಷಗಳಲ್ಲಿ ಗೆಲುವಿನ ಸಾಧ್ಯತೆಗಳ ಬಗ್ಗೆ ವಿಶ್ಲೇಷಣೆಗಳು ನಡೆಯುತ್ತಿವೆ.

ದ.ಕ. ಕ್ಷೇತ್ರದ ಎಲ್ಲ 1,876 ಬೂತ್‌ಗಳ ಮತದಾರರ ಪಟ್ಟಿಯನ್ನು ಹಿಡಿದುಕೊಂಡು ಕೂಡಿಸಿ ಕಳೆಯುವ ಮತ ಗಣಿತ ಲೆಕ್ಕಾ ಚಾರ ಪಕ್ಷಗಳ ಕಚೇರಿಯಲ್ಲಿ ನಡೆಯುತ್ತಿದೆ. ಪ್ರತಿಯೊಂದು ಬೂತ್‌ನಲ್ಲಿ ತಮ್ಮ ಪಕ್ಷಕ್ಕೆ ಬರುವ ಪಕ್ಕಾ ಮತಗಳು, ಎದುರಾಳಿ ಅಭ್ಯರ್ಥಿಗೆ ಹೋಗಿರುವ ಮತ, ಶೇ.50-50ರ ಅಂಚಿನಲ್ಲಿರುವ ಮತ ಗಳನ್ನು ಅಂದಾಜಿಸಿ ಗಳಿಸಿರಬಹುದಾದ ಮತಗಳ ಲೆಕ್ಕ ಹಾಕುವ ಕಾರ್ಯ ಆರಂಭ ಗೊಂಡಿದೆ. ಇವುಗಳನ್ನು ಕ್ರೋಢಿಕರಿಸಿ ಗೆಲುವಿನ ಸಾಧ್ಯತೆ, ಅಂತರಗಳ ಒಟ್ಟು ಚಿತ್ರಣವೊಂದನ್ನು ಅಂದಾಜಿಸುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ತೊಡಗಿಸಿಕೊಂಡಿದ್ದಾರೆ.

ತಿಂಗಳ ಅಬ್ಬರ ಈಗ ಮೌನ!
ಮತದಾರರ ಮನಸ್ಸು ಗೆಲ್ಲಲು ರಾಜಕೀಯ ಪಕ್ಷಗಳು ನಾನಾ ರೀತಿಯ ಕಸರತ್ತು, ಕಾರ್ಯತಂತ್ರಗಳನ್ನು ಅನು ಸರಿಸಿದ್ದವು. ಆರೋಪ ಪ್ರತ್ಯಾರೋಪ, ವಾದ ವಿವಾದ, ಭರವಸೆ, ಆಶ್ವಾಸನೆಗಳು ಚುನಾವಣ ಪ್ರಚಾರ ಕಣದಲ್ಲಿ ಸಾಕಾಷ್ಟು ಆಗಿ ಹೋಗಿದೆ. ಬಹಿರಂಗ ಪ್ರಚಾರ, ರೋಡ್‌ಶೋಗಳಿಂದ ಚುನಾವಣ ಕಣ ರಂಗೇರಿತ್ತು. ಮತದಾರರ ಮನೆಯೆಡೆಗೆ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡಿಗೆ ಸಾಗಿತ್ತು. ಕೆಲವು ಪ್ರಭಾವಿ ನಾಯಕರು ಜಿಲ್ಲೆಗೆ ಆಗಮಿಸಿ ರಾಜಕೀಯ ಸಂಚಲನ ಮೂಡಿಸಿದ್ದರು. ರಾಜಕೀಯ ಪಕ್ಷಗಳು, ಬೆಂಬಲಿಗ ಸಂಘಟನೆಗಳಿಂದ ಸರಣಿ ಪತ್ರಿಕಾಗೋಷ್ಠಿಗಳು ಆಯೋಜನೆ ಗೊಂಡಿದ್ದವು. ಎ.26ರಂದು ಮತದಾನ ನಡೆಯುವುದರ ಜತೆಗೆ ಇದೆಲ್ಲದಕ್ಕೂ ತೆರೆಬಿದ್ದಿದೆ. ಕಳೆದ ಒಂದು ತಿಂಗಳಿನಿಂದ ಸದ್ದುಗದ್ದಲದ ರಾಜಕೀಯ ವಾತಾವರಣ ಇದೀಗ ಮೌನಕ್ಕೆ ಜಾರಿದೆ.

ಮದುವೆ/ ಅಂಗಡಿ.. ಎಲ್ಲೆಡೆಯೂ ಮತದಾನೋತ್ತರ ಚರ್ಚೆ!
ದ.ಕ. ಲೋಕ ಕಣದಲ್ಲಿ ಯಾರು ಗೆಲ್ಲಬಹುದು ಎಂಬ ಬಗ್ಗೆ ಮತದಾರರಲ್ಲಿ ಕುತೂಹಲ ಗರಿಗೆದರಿದೆ. ಮದುವೆ ಸೇರಿದಂತೆ ಎಲ್ಲ ರೀತಿಯ ಸಮಾರಂಭದಲ್ಲಿ ಇದೇ ಬಹು ಚರ್ಚಿತ ವಿಷಯ. ಮತದಾನೋತ್ತರ ಸಮೀಕರಣ ಇಲ್ಲಿಯೂ ನಡೆಯುತ್ತಿದೆ. “ಹೇಗಾಗಬಹುದು?’ ಎಂದು ಮಾತು ಆರಂಭಿಸುತ್ತ ಜಾತಿ ಲೆಕ್ಕಾಚಾರ, ಪಕ್ಷಗಳ ನಿಲುವು, ಧರ್ಮ-ಜಾತಿ ಗಣಿತ, ಲಾಭ, ನಷ್ಟ ಹೀಗೆ ಎಲ್ಲ ಕೋನಗಳಿಂದ ಚರ್ಚೆ ನಡೆಯುತ್ತಿದೆ. ಜತೆಗೆ ಸಮಯವಿದ್ದವರು, ಹೊರ ಜಿಲ್ಲೆ-ರಾಜ್ಯದ ಕುತೂಹಲ ಸಂಗತಿ ಬಗ್ಗೆಯೂ ಮಾತು ಮುಂದುವರಿಸುತ್ತಾರೆ. ಕಳೆದ ಲೋಕಸಭೆಯ ಮತದಾನದ ಲೀಡ್‌, ವಿಧಾನಸಭೆಯಲ್ಲಿ ಆದ ಲೀಡ್‌ ಎಂಬಿತ್ಯಾದಿ ವಿಷಯಗಳಿಂದ ಚರ್ಚೆ ಗಮನಸೆಳೆಯುತ್ತಿದೆ. ಸಮಾರಂಭ ಮಾತ್ರವಲ್ಲ-ಹೊಟೇಲ್‌, ಸೆಲೂನ್‌ ಸಹಿತ ಎಲ್ಲ ವ್ಯವಹಾರ ತಾಣದಲ್ಲಿಯೂ ಈಗ ಮತದಾನೋತ್ತರದ್ದೇ ಚರ್ಚೆ!

ಟಾಪ್ ನ್ಯೂಸ್

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.