![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Oct 23, 2021, 12:55 PM IST
ಕೂಳೂರು: ಕೂಳೂರಿನ ನಾಗನ ಕಟ್ಟೆಗೆ ದುಷ್ಕರ್ಮಿಗಳು ಹಾನಿ ಮಾಡಿರುವ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.
ಬುಧವಾರ ಸಂಜೆ ಕೆಲವು ಮಂದಿ ಸ್ಥಳೀಯರು ಮಾಮೂಲಿನಂತೆ ಕೈ ಮುಗಿದು ಹೋಗಿದ್ದರು. ಅನಂತರ ಇಂದು ಬೆಳಗ್ಗೆ ಬಂದು ನೋಡಿದಾಗ ಘಟನೆ ನಡೆದದ್ದು ಗೊತ್ತಾಗಿದೆ. ಸ್ಥಳದಲ್ಲಿ ಪಿಕ್ಕಾಸು, ಕತ್ತಿ ಮೊದಲಾದ ಪರಿಕರಗಳು ಪತ್ತೆಯಾಗಿದೆ. 19 ನಾಗನ ಕಲ್ಲಿನ ಪೈಕಿ 6 ನಾಪತ್ತೆಯಾಗಿದೆ. ಒಂದನ್ನು ಪುಡಿ ಮಾಡಲಾಗಿದೆ. ಘಟನೆಯನ್ನು ಖಂಡಿಸಿರುವ ಹಿಂದೂ ಸಂಘಟನೆಗಳು, ಕಿಡಿಗೇಡಿಗಳನ್ನು ಕೂಡಲೇ ಪತ್ತೆ ಹಚ್ಚುವಂತೆ ಒತ್ತಾಯಿಸಿವೆ.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.