ಕರಾಳ ದಿನಾಚಾರಣೆ, ‘ಸಂಪಾಜೆಗೆ ಪೋಯಿ’ ಬೃಹತ್‌ ಕಾಲ್ನಡಿಗೆ ಜಾಥಾ


Team Udayavani, Nov 9, 2017, 10:51 AM IST

9-Nov-4.jpg

ಸುಳ್ಯ: ದ.ಕ. ಜಿಲ್ಲೆಯ ಸುಳ್ಯ ಮತ್ತು ಕೊಡಗು ಜಿಲ್ಲೆಯ ನಾಪೋಕ್ಲು ಬ್ಲಾಕ್‌ ಕಾಂಗ್ರೆಸ್‌ ಜಂಟಿಯಾಗಿ ನೋಟು ಅಮಾನ್ಯೀಕರಣ ದಿನವಾದ ನ. 8ನ್ನು ಕರಾಳ ದಿನವನ್ನಾಗಿ ಆಚರಿಸಿದ್ದು, ಆ ಪ್ರಯುಕ್ತ ಗುರುವಾರ ಸುಳ್ಯದಿಂದ- ಸಂಪಾಜೆವರೆಗೆ ‘ಸಂಪಾಜೆಗೆ ಪೋಯಿ’ ಬೃಹತ್‌ ಕಾಲ್ನಡಿಗೆ ಜಾಥಾ ನಡೆಯಿತು. ಈ ಮೂಲಕ ಕಾಂಗ್ರೆಸ್‌ ಸಂಘಟನಾತ್ಮಕವಾಗಿ ಸ್ವಲ್ಪ ಚೇತರಿಸಿಕೊಂಡಂತೆ ಕಂಡುಬಂದಿತು.

ಬುಧವಾರ ಬೆಳಗ್ಗೆ 9.30ಕ್ಕೆ ಸುಳ್ಯಶಾಸ್ತ್ರಿ ವೃತ್ತದಲ್ಲಿ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ್ಪ ಪಾದಯಾತ್ರೆಗೆ ಚಾಲನೆ ನೀಡಿದರು. ಬಳಿಕ ಸುಳ್ಯ ಹಳೆ ಬಸ್‌ ನಿಲ್ದಾಣದಲ್ಲಿ ಸಮಾವೇಶಗೊಂಡಿತು. 

ರಾಜ್ಯ ರೇಷ್ಮೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಟಿ.ಪಿ.ರಮೇಶ್‌ ಮಾತನಾಡಿ, ಕೇಂದ್ರ ಸರಕಾರ ನೋಟು ಅಮಾನ್ಯೀಕರಣ ನಿರ್ಧಾರವನ್ನು ಕಾರ್ಯರೂಪಕ್ಕೆ ತಂದ ಬಗೆಯನ್ನು ಟೀಕಿಸಿದರು. ಬಿಜೆಪಿ ಚುನಾವಣೆ ಪ್ರಣಾ ಳಿಕೆಯಲ್ಲಿ ನೀಡಿದ ಕಾಳದನ ತರುವ ನಿರ್ಧಾರ ಎಷ್ಟು ಯಶಸ್ವಿಯಾಗಿದೆ ಎಂದು ಪ್ರಶ್ನಿಸಿದರು.

ಉದ್ವಿಗ್ನತೆಗೆ ಆಸ್ಪದವಿಲ್ಲ: ಜೆ.ಪಿ.
ಸುಳ್ಯ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಜಯಪ್ರಕಾಶ್‌ ರೈ ಮಾತನಾಡಿ, ಬಿಜೆಪಿ ಪರಿವರ್ತನ ಯಾತ್ರೆ, ಕಾಂಗ್ರೆಸ್‌ನ ಪಾದಾಯಾತ್ರೆ ಕಾರ್ಯಕ್ರಮಗಳು ಪರಸ್ಪರ ಪೈಪೋಟಿಗಿಳಿದು ಉದ್ವಿಗ್ನ ವಾತಾವರಣಕ್ಕೆ ನಾವು ಅವಕಾಶ ಮಾಡಿಕೊಡುವುದು ಬೇಡ. ನಾವು ಅಹಿತಕರ ಘಟನೆಗಳಿಗೆ ಆಸ್ಪದ ನೀಡುವುದಿಲ್ಲ ಎಂದರಲ್ಲದೇ ಬಿಜೆಪಿಯವರು ನಮ್ಮ  ಪಾದಯಾತ್ರೆ ಬಳಿಕದ ಕಾರ್ಯಕ್ರಮವಾದರೂ ಮೊದಲೇ ಬ್ಯಾನರ್‌ ಅಳವಡಿಸಿದ್ದಾರೆ. ಆದರೆ ನಾವು ಅಳವಡಿಸಿದ ಧ್ವಜಗಳನ್ನು ಕಾರ್ಯಕ್ರಮ ಮುಗಿದ ತಕ್ಷಣ ತೆರವುಗೊಳಿಸಿ ಮಾದರಿಯಾಗಿ ನಡೆದುಕೊಳ್ಳುತ್ತೇವೆ ಎಂದರು.

‘ಸುಳ್ಳೇ ಸುಳ್ಳು..’ ಹಾಡು
ಎರಡು ಬ್ಲಾಕ್‌ಗಳ ಸಾವಿರಕ್ಕೂ ಅಧಿಕ ಮಂದಿ ಕಾಂಗ್ರೆಸ್‌ ಕಾರ್ಯಕರ್ತರು ಪಕ್ಷದ ಧ್ವಜಗಳನ್ನು ಹಿಡಿದು ಸಾಗಿದರು. ಮೈಲು ದ್ದುದ ಸಾಲು ಕಂಡುಬಂದಿತು. ಕೇಂದ್ರ ಸರಕಾರದ ಯೋಜನೆಗಳು, ಚುನಾವಣೆಯ ಪ್ರಣಾಳಿಕೆಗಳ ಬಗೆಗಿನ ‘ಸುಳ್ಳೇ ಸುಳ್ಳು…’ ಹಾಡು ಕೇಳಿಬಂದಿತು. ಚಂಡೆ, ವಾದ್ಯ ಮೇಳ, ಹುಲಿ ವೇಷ, ಮರಕೋಲು ನಡಿಗೆ ಯಾತ್ರೆಗೆ ಸಾಥ್‌ ನೀಡಿದವು. ಪಾದಯಾತ್ರೆ ಸಂದರ್ಭ ನಟಿ ಭಾವನಾ ಮುಂಚೂಣಿಯಲ್ಲಿದ್ದರು. ಹಳೇ ಬಸ್‌ ನಿಲ್ದಾಣ ಬಳಿ ಫೋಟೋ, ಸೆಲ್ಫಿಗಾಗಿ ಕಾರ್ಯಕರ್ತರು ಮುಗಿಬಿದ್ದರು.

ಮುಟ್ಟಾಳೆ ಧರಿಸಿದ ಕಾರ್ಯಕರ್ತ
ಯಾತ್ರೆಯಲ್ಲಿ ಶ್ವೇತವಸ್ತ್ರಧಾರಿಯಾಗಿದ್ದ ತಲೆಗೆ ಮುಟ್ಟಾಳೆ ಧರಿಸಿದ್ದ ಏಕೈಕ ಸದಸ್ಯ ನ.ಪ. ಸದಸ್ಯ ಗೋಕುಲ್‌ದಾಸ್‌ ಗಮನ ಸೆಳೆದರು.  ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಿದ್ದ ಅವರ ಛಾಯಾಚಿತ್ರ ತೆಗೆಯುವ ವೇಳೆ ‘ಇಂದಿರಾ ಕಾಂಗ್ರೆಸ್‌’ ಎಂದು ಪ್ರತಿಕ್ರಿಯಿಸಿದರು.

ಜಂಟಿಯಾಗಿ ಕಾಲ್ನಡಿಗೆ ಜಾಥಾ
ನಾಪೋಕ್ಲು ಬ್ಲಾಕ್‌ ಕಾಂಗ್ರೆಸ್‌ ‘ನಾಪೋಕ್ಲುಗೆ ಪೋಯಿ’ ಕಾರ್ಯಕ್ರಮ ಆಯೋಜಿಸಿತ್ತು. ಬಳಿಕ ರಾಷ್ಟ್ರಮಟ್ಟದ ಕರಾಳ ದಿನಾಚರಣೆ ಅಂಗವಾಗಿ ಎರಡೂ ಬ್ಲಾಕ್‌ಗಳು ಜಂಟಿಯಾಗಿ ಸುಳ್ಯದಿಂದ ಸಂಪಾಜೆವರೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಂಡವು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಮ್ಮದ್‌ ಹುಸೇನ್‌, ಉಪಾಧ್ಯಕ್ಷ ಮಿಟ್ಟು ಚಂಗಪ್ಪ, ವಿಧಾನ ಪರಿಷತ್‌ ಸದಸ್ಯೆ ವೀಣಾ ಅಚ್ಚಯ್ಯ, ಮಾಜಿ ಸಚಿವೆ ಸುಮಾ ವಸಂತ್‌, ಸುಳ್ಯ ಬ್ಲಾಕ್‌ ಕಾಂಗ್ರೆಸ್‌ ಉಸ್ತುವಾರಿ ಸವಿತಾ ರಮೇಶ್‌ ಗೌಡ, ಕೆಪಿಸಿಸಿ ಸದಸ್ಯರಾದ ಅರುಣ್‌ ಮಾಚಯ್ಯ, ಎಂ. ವೆಂಕಪ್ಪ ಗೌಡ, ಡಾ| ಬಿ. ರಘು, ಕೆಪಿಸಿಸಿ ಸದಸ್ಯೆ ಹಾಗೂ ಚಿತ್ರನಟಿ ಭಾವನಾ, ಕೊಡಗು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಶಿವಮಾದಪ್ಪ, ಕಿಸಾನ್‌ ಘಟಕದ ಜಿಲ್ಲಾಧ್ಯಕ್ಷ ನೆರವಂಡ ಉಮೇಶ್‌, ಸುಳ್ಯ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎನ್‌. ಜಯಪ್ರಕಾಶ್‌ ರೈ, ನಾಪೊಕ್ಲು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಮಾನಾಥ್‌ ಕರಿಕೆ, ಪೊನ್ನಂಪೇಟೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿರಾಜಪೇಟೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅಬ್ದುಲ್‌ ಸಲಾಂ, ಸುಳ್ಯ ಬ್ಲಾಕ್‌ ಮಹಿಳಾ ಘಟಕದ ಕಾಂಗ್ರೆಸ್‌ ಅಧ್ಯಕ್ಷೆ ಗೀತಾ ಕೋಲ್ಚಾರ್‌, ಎಸ್‌. ಸಂಶುದ್ದೀನ್‌, ಕಿರಣ್‌ ಬುಡ್ಲೆಗುತ್ತು, ಪಿ.ಸಿ. ಜಯರಾಮ, ದಿವ್ಯಪ್ರಭಾ ಚಿಲ್ತಡ್ಕ, ಅಶೋಕ್‌ ನೆಕ್ರಾಜೆ ಮೊದಲಾದವರು ಬೃಹತ್‌ ಕಾಲ್ನಡಿಗೆ ಪಾದ ಯಾತ್ರೆಯಲ್ಲಿ ಪಾಲ್ಗೊಂಡರು.

ಗಾಯಾಳು ಬಿಜೆಪಿ ಮಿತ್ರನಿಗೆ ಶುಭಹಾರೈಕೆ
ಪಾದಯಾತ್ರೆ ಉದ್ಘಾಟನೆ ವೇಳೆ ಮಾತನಾಡಿದ ಸುಳ್ಯ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಜಯಪ್ರಕಾಶ್‌ ರೈ, ‘ಅಪಘಾತದಲ್ಲಿ ಗಾಯಗೊಂಡಿದ್ದ ಮಿತ್ರ ಪ್ರಕಾಶ್‌ ಹೆಗ್ಡೆಗೆ ಆದ ನೋವು ನಮಗಾದ ನೋವು. ಪಕ್ಷಗಳ ನಾಯಕರು ಯಾತ್ರೆಗಳಿಗೆ ಬಂದುಹೋಗುತ್ತಾರೆ. ಆದರೆ ನಾವಿಲ್ಲಿ ಪರಸ್ಪರ ಮುಖ ನೋಡಿಕೊಂಡು ಬದುಕಬೇಕಾದವರು. ಅವರು ಶೀಘ್ರ ಗುಣಮಖರಾಗಿ ಸಮಾಜಸೇವೆಯಲ್ಲಿ ತೊಡಗಲಿ’ ಎಂದು ಹಾರೈಕೆ ಮಾಡಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.