ಸೂಕ್ತ ಮಾರ್ಗದರ್ಶನ ಬಳಿಕ ಮರಳು ದಿಬ್ಬ ತೆರವು ನಿರ್ಧಾರ
Team Udayavani, Apr 12, 2024, 1:30 AM IST
ಮಂಗಳೂರು: ಮರಳು ದಿಬ್ಬಗಳಿಂದ ಉತ್ಪತ್ತಿಯಾದ ಮರಳಿನ ವಿಲೇವಾರಿ ಬಗ್ಗೆ ಯಾವುದೇ ಸ್ಪಷ್ಟ ನಿರ್ದೇಶನ ಇಲ್ಲದಿರುವ ಹಿನ್ನೆಲೆಯಲ್ಲಿ ಸೂಕ್ತ ಮಾರ್ಗದರ್ಶನ ನೀಡುವಂತೆ ಬೆಂಗಳೂರಿನಲ್ಲಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರನ್ನು ಕೋರಲಾಗಿದೆ. ಸೂಕ್ತ ಮಾರ್ಗದರ್ಶನ ಬಂದ ಅನಂತರ ಸರಕಾರ ಹೊರಡಿಸಿರುವ ಮಾರ್ಗಸೂಚಿಗಳನ್ವಯ ತಾತ್ಕಾಲಿಕ ಪರವಾನಿಗೆ ನೀಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದಲ್ಲಿ ಮರಳು ಸಂಗ್ರಹ ಗೊಂಡು ದಿಬ್ಬಗಳಾಗಿ ಮಾರ್ಪಟ್ಟು ದೋಣಿಗಳ ಸಂಚಾರಕ್ಕೆ ತಡೆ ಒಡ್ಡುವ 8 ಮರಳು ದಿಬ್ಬಗಳನ್ನು ತೆರವುಗೊಳಿಸುವ ಸಂಬಂಧ ಕರ್ನಾಟಕ ಕರಾವಳಿ ನಿರ್ವಹಣ ಪ್ರಾ ಧಿಕಾರ, ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯು 2023ರ ಡಿ. 6ರಂದು ಪರಿಸರ ವಿಮೋಚನ ಪತ್ರ ದೊರೆತಿದೆ. ಈ ಕುರಿತು 2024ರ ಜ. 17ರಂದು ನಡೆದ ಜಿಲ್ಲಾ 7 ಸದಸ್ಯರ ಸಮಿತಿ ಸಭೆಯಲ್ಲಿ ಚರ್ಚಿಸಲಾಗಿದ್ದು, ರಾಜ್ಯ ಕರಾವಳಿ ನಿರ್ವಹಣ ಪ್ರಾ ಧಿಕಾರವು ನೀಡಿರುವ ನಿರಾಕ್ಷೇಪಣ ಪತ್ರದಲ್ಲಿ ಹೆಚ್ಚುವರಿ ಷರತ್ತು ಎಂಬ ಶೀರ್ಷಿಕೆಯಡಿ ರಾಷ್ಟ್ರೀಯ ಹಸಿರು ಪೀಠ ನ್ಯಾಯ ಮಂಡಳಿ ನೀಡಿರುವ ಆದೇಶ ಹಾಗೂ ಸರ್ವೋಚ್ಚ ನ್ಯಾಯಾಲಯದ ಮಧ್ಯಾಂತರ ಆದೇಶವನ್ನು ಪಾಲನೆ ಮಾಡಿ ತೆರವುಗೊಳಿಸಬಹುದಾಗಿದೆ ಎಂದು ತಿಳಿಸಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್ ಮಿಲಾದ್
Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ
Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ
Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು
Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.