“ಪಾರಂಪರಿಕ ಮೌಲ್ಯಗಳಿಗೆ ಅವನತಿ ಅಪಾಯ’
ಸಂಧಿ-ಸಂಕಥನ ನೇಜಿ ಹಾಡುಗಳ ಕಲಿಕೆ ಶಿಬಿರ
Team Udayavani, Apr 14, 2019, 6:00 AM IST
ಸಂಧಿ-ಸಂಕಥನ ನೇಜಿ ಹಾಡುಗಳ ಕಲಿಕೆ ಶಿಬಿರವನ್ನು ಉದ್ಘಾಟಿಸಲಾಯಿತು.
ಬೆಳ್ತಂಗಡಿ: ಪ್ರಸ್ತುತ ದಿನಗಳಲ್ಲಿ ನಮ್ಮ ಪಾರಂಪರಿಕ ಜೀವನ ಮೌಲ್ಯಗಳು ಅವನತಿಯ ಅಪಾಯದಲ್ಲಿದ್ದು, ಈ ನಿಟ್ಟಿನಲ್ಲಿ ತುಳುನಾಡಿನ ಜನಪದೀಯ ಪರಂಪರೆಯ ಅರಿವನ್ನು ಹೊಸ ಪೀಳಿಗೆಗೆ ದಾಟಿಸುವ ನಿಟ್ಟಿನಲ್ಲಿ ಗಂಭೀರ ಪ್ರಯತ್ನಗಳು ಅನಿವಾರ್ಯವಾಗಿವೆ ಎಂದು ಉಜಿರೆ ಎಸ್ಡಿಎಂ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ| ಬಿ.ಪಿ. ಸಂಪತ್ಕುಮಾರ್ ಹೇಳಿದರು.
ಶನಿವಾರ ಉಜಿರೆ ಎಸ್ಡಿಎಂ ಸೆಕೆಂಡರಿ ಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾ| ಘಟಕ, ಉಜಿರೆ ಎಸ್ಡಿಎಂ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ನಡೆದ ಸಂಧಿ-ಸಂಕಥನ ನೇಜಿ ಹಾಡುಗಳ ಕಲಿಕೆ ಶಿಬಿರದ ಉದ್ಘಾಟನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾನಾಡಿದರು.
ಬಹಳ ವರ್ಷಗಳ ಹಿಂದೆ ಗ್ರಾಮೀಣ ಭಾಗದಲ್ಲಿ ನಾಟಿ, ಕೊಯ್ಲು ಸಹಿತ ಹಲವು ಕೆಲಸ ಮಾಡುವ ಸಮಯದಲ್ಲಿ ಜಾನಪದ ಹಾಡು ಹಾಡುತ್ತಿದ್ದರು. ಆದರೆ ಇಂದಿನ ಯುವ ಪೀಳಿಗೆಗೆ ತುಳುನಾಡಿನ ಜಾನಪದದ ಸುಳಿವೇ ಇಲ್ಲದಂತಾಗಿದೆ. ಜಾನಪದ ಸಂಸ್ಕೃತಿಯು ದಿನ ಉರುಳಿದಂತೆ ನಶಿಸುತ್ತಿದೆ. ಇದರ ಸಿರಿವಂತಿಕೆ ಪರಿಚಯಿಸುವ ಅನಿವಾರ್ಯ ಉದ್ಭವಿಸಿದೆ. ಹೊಸ ಪೀಳಿಗೆ ಜನಪದೀಯ ಸಂಸ್ಕೃತಿ ಉಳಿಸಿಕೊಳ್ಳಬೇಕಿದೆ ಎಂದರು.
ಸಂಪನ್ಮೂಲ ವ್ಯಕ್ತಿಗಳಾದ ರೇವತಿ ಮತ್ತು ಗುಲಾಬಿ ಬಜಿಲ ಅವರು ಕಲಿಕೆ ಶಿಬಿರಕ್ಕೆ ಚಾಲನೆ ನೀಡಿದರು. ಅನಂತರ ಕೆಲವು ತುಳು ಹಾಡುಗಳನ್ನು ಮಕ್ಕಳಿಗೆ ಕಲಿಸುವ ಮೂಲಕ ಅದರ ಅರ್ಥವನ್ನು ಸಂಕ್ಷಿಪ್ತವಾಗಿ ವಿವರಿಸಲಾಯಿತು. ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ, ಕಸಾಪ ತಾ| ಅಧ್ಯಕ್ಷ ಡಾ| ಬಿ. ಯಶೋವರ್ಮ, ಎಸ್ಡಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ| ಟಿ.ಎನ್.ಕೇಶವ್, ವಿವಿಧ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು.
ಕಸಾಪ ತಾ| ಗೌರವ ಕಾರ್ಯದರ್ಶಿ ರಾಮಕೃಷ್ಣ ಬೆಳಾಲ್ ಸ್ವಾಗತಿಸಿ, ಕಾರ್ಯಕ್ರಮದ ಸಂಯೋಜಕ ಡಾ| ಎಂ.ಪಿ. ಶ್ರೀನಾಥ್ ವಂದಿಸಿದರು. ಪ್ರಾಧ್ಯಾಪಕ ಪ್ರೊ| ದಿವಾಕರ್ ಕೊಕ್ಕಡ ನಿರ್ವಹಿಸಿದರು.
ಜಾನಪದ ಶ್ರೀಮಂತಿಕೆ
ಯುವ ಜನತೆಗೆ ತುಳುನಾಡಿನ ಜಾನಪದ ಸಂಸ್ಕೃತಿ, ಕಲೆ ಮತ್ತು ಪರಂಪರೆಯ ಮಹತ್ವ ತಿಳಿಯಬೇಕಿದೆ. ತಂತ್ರಜ್ಞಾನದ ಪ್ರಭಾವ ಹೆಚ್ಚಿದಂತೆ ಹೊಸ ಆವಿಷ್ಕಾರಗಳ ಕಡೆಗೆ ಕುತೂಹಲ ಹೆಚ್ಚುತ್ತಲೇ ಇದೆ. ಇದರ ನಡುವೆ ಜನಪದೀಯ ವಿಶೇಷತೆಯೆಡೆಗೆ ಗಮನ ಕಡಿಮೆಯಾಗುತ್ತಿದೆ. ಇಂಥ ಸಂದರ್ಭ ತುಳುನಾಡಿನ ಜಾನಪದ ಶ್ರೀಮಂತಿಕೆಯನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಿರ್ವಹಿಸಬೇಕಿದೆ.
ಡಾ| ಸಂಪತ್ಕುಮಾರ್ ಉಜಿರೆ ಎಸ್ಡಿಎಂ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
World Tourism Day 2024: ಮಧ್ಯ ಕರ್ನಾಟಕದ ಈ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದೀರಾ?
Munirathna Case: ವಿಕಾಸಸೌಧದಲ್ಲೇ ಮುನಿರತ್ನ ರೇಪ್; ಸಂತ್ರಸ್ತೆ
Thirthahalli: ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಆರಗ ಪ್ರಶ್ನೆ
Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್ವುಡ್ನ ಪಾರ್ಟ್-2 ಕ್ರೇಜ್
High Court: ಜೈಲಿನಲ್ಲಿ ಆತಿಥ್ಯ; ಕೈದಿ ಕುಳ್ಳ ಸೀನ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.