ಪುತ್ತೂರು: ಪ್ರಾ.ಆ.ಕೇಂದ್ರ ವ್ಯಾಪ್ತಿಯಲ್ಲಿ ಕಾಣಿಸಿಕೊಂಡ ಡೆಂಗ್ಯೂ


Team Udayavani, Jul 8, 2017, 2:40 AM IST

Arogya-7-7.jpg

ವಿಶೇಷ ವರದಿ

ಪುತ್ತೂರು: ತಾಲೂಕಿನಲ್ಲಿ ಮಳೆ ಪ್ರಮಾಣ ಏರುತ್ತಿರುವುದರ ಬೆನ್ನಿಗೇ ಸಾಂಕ್ರಾಮಿಕ ಜ್ವರ ಪ್ರಕರಣದಲ್ಲೂ ಏರಿಕೆಯಾಗುತ್ತಿರುವುದು ಆತಂಕ ಸೃಷ್ಟಿಸಿದೆ.ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ತಪಾಸಣೆಗೆ ಬರುವವರ ಸಂಖ್ಯೆ ಹೆಚ್ಚುತ್ತಿದೆ. ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ಪ್ರಕಾರ, ಸರಕಾರಿ ಆರೋಗ್ಯ ಕೇಂದ್ರದಲ್ಲಿ ಜೂನ್‌ನಿಂದ ಜುಲೈ ಮೊದಲ ವಾರದ ತನಕ 1, 500ಕ್ಕೂ ಅಧಿಕ ಜ್ವರ ಪ್ರಕರಣಗಳು ದಾಖಲಾಗಿವೆ.

ಈ ಅಂಕಿ – ಅಂಶದಲ್ಲಿ ಸರಕಾರಿ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಲೆಕ್ಕಾಚಾರವನ್ನು ಒಳಗೊಂಡಿದ್ದು, ತಾಲೂಕಿನ ಖಾಸಗಿ ಆಸ್ಪತ್ರೆ ಹಾಗೂ ಹೊರ ತಾಲೂಕಿನ ಆಸ್ಪತ್ರೆಗಳಲ್ಲಿ ದಾಖಲಾದವರ ಸಂಖ್ಯೆ ಪ್ರತ್ಯೇಕವಾಗಿದೆ. ಹಾಗಾಗಿ ಜ್ವರ ಪ್ರಕರಣದ ಒಟ್ಟು ಸಂಖ್ಯೆ ದುಪ್ಪಟ್ಟಾಗಲಿದೆ. ಸುಮಾರು 2,500ಕ್ಕೂ ಮಿಕ್ಕಿ ಜನರು ಜ್ವರ ಬಾಧೆಗೆ ಒಳಗಾಗಿರಬಹುದೆಂದು ಶಂಕಿಸಲಾಗಿದೆ.

ತಾಲೂಕು ಆಸ್ಪತ್ರೆ ವಿವರ
ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿ 1,005 ಜ್ವರ ಪ್ರಕರಣ ಪತ್ತೆಯಾಗಿದೆ. 462 ಮಂದಿಗೆ ಮಲೇರಿಯ ತಪಾಸಣೆ ನಡೆದಿದ್ದು, ಇದರಲ್ಲಿ 8 ಪ್ರಕರಣ ದೃಢಪಟ್ಟಿದೆ. 545 ಮಂದಿಗೆ ಡೆಂಗ್ಯೂ ತಪಾಸಣೆ ನಡೆದಿದ್ದು, ಯಾವುದೇ ಪ್ರಕರಣ ದೃಢಪಟ್ಟಿಲ್ಲ. ಟೈಫಾಯಿಡ್‌ ಜ್ವರ ಸಂಬಂಧಿಸಿ 135 ಮಂದಿಯಲ್ಲಿ 2 ಪ್ರಕರಣ ದೃಢಪಟ್ಟಿದೆ. ಇಲ್ಲಿ ಈ ತನಕ ಇಲಿಜ್ವರ ಪ್ರಕರಣ ಪತ್ತೆಯಾಗಿಲ್ಲ.

ಪ್ರಾ. ಆ. ಕೇಂದ್ರ
ಹನ್ನೆರಡು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 64 ಡೆಂಗ್ಯೂ, 27 ಇಲಿ ಜ್ವರ, ಮಲೇರಿಯಾ-17 ಪ್ರಕರಣ ಪತ್ತೆಯಾಗಿವೆ. ಈಶ್ವರಮಂಗಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡೆಂಗ್ಯೂ- 3, ಇಲಿಜ್ವರ-1, ಕಡಬ ಸಮುದಾಯ ಕೇಂದ್ರದಲ್ಲಿ ಡೆಂಗ್ಯೂ- 25, ಮಲೇರಿಯ-1, ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡೆಂಗ್ಯೂ- 5, ಇಲಿ ಜ್ವರ-3, ಕೊçಲ ಆರೋಗ್ಯ ಕೇಂದ್ರದಲ್ಲಿ ಡೆಂಗ್ಯೂ-2, ಇಲಿ ಜ್ವರ-1, ಕೊಳ್ತಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಲಿ ಜ್ವರ-3. ನೆಲ್ಯಾಡಿ ಆರೋಗ್ಯ ಕೇಂದ್ರದಲ್ಲಿ ಡೆಂಗ್ಯೂ-9, ಮಲೇರಿಯಾ – 2, ಪಾಣಾಜೆ ಆರೋಗ್ಯ ಕೇಂದ್ರದಲ್ಲಿ ಡೆಂಗ್ಯೂ – 2, ಇಲಿಜ್ವರ-4, ಸರ್ವೆ ಆರೋಗ್ಯ ಕೇಂದ್ರದಲ್ಲಿ ಡೆಂಗ್ಯೂ-1, ಇಲಿಜ್ವರ-1, ಶಿರಾಡಿ ಆರೋಗ್ಯ ಕೇಂದ್ರದಲ್ಲಿ ಡೆಂಗ್ಯೂ – 4, ಇಲಿಜ್ವರ-2, ತಿಂಗಳಾಡಿ ಆರೋಗ್ಯ ಕೇಂದ್ರ ದಲ್ಲಿ ಡೆಂಗ್ಯೂ-6, ಇಲಿಜ್ವರ-2, ಮಲೇರಿಯಾ-2, ಉಪ್ಪಿನಂಗಡಿ ಸಮುದಾಯ ಕೇಂದ್ರದಲ್ಲಿ ಡೆಂಗ್ಯೂ-3, ಇಲಿಜ್ವರ -4, ಮಲೇರಿಯಾ-3 ಪ್ರಕರಣ ವರದಿಯಾಗಿವೆ.

ಹೆಚ್ಚಿದ ಸೊಳ್ಳೆ ಕಾಟ
ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸೊಳ್ಳೆ ಕಾಟವೂ ಆರಂಭಗೊಂಡಿದೆ. ಮಳೆ ನೀರಿನ ಶೇಖರಣೆಯ ಸ್ಥಳ, ಅಡಿಕೆ, ರಬ್ಬರ್‌ ಸೇರಿದಂತೆ ಕೃಷಿ ತೋಟಗಳಲ್ಲಿ ಸೊಳ್ಳೆ ವಿಪರೀತ ಪ್ರಮಾಣದಲ್ಲಿ ಕಾಣಿಸಿಕೊಂಡಿದೆ. ಮನೆ ಪರಿಸರದಲ್ಲಿ ರಾತ್ರಿ ವೇಳೆ ಸೊಳ್ಳೆ ಕಾಟ ಹೆಚ್ಚಾಗಿದೆ. 

ಜಾಗೃತಿ ಇರಲಿ ಸರ್ವರಲಿ
– ಮನೆ ಸುತ್ತಮುತ್ತ ಸ್ವಚ್ಛವಾಗಿಟ್ಟುಕೊಳ್ಳಬೇಕು.

– ಹೆಚ್ಚು ಕಾಲದಿಂದ ನೀರು ನಿಂತಿದ್ದರೆ, ತೆರವುಗೊಳಿಸಿ. 

– ಹೊಂಡಗಳಲ್ಲಿ ನೀರಿದ್ದರೆ, ಮಣ್ಣು ತುಂಬಿ ನೀರು ನಿಲ್ಲದಂತೆ ನೋಡಿಕೊಳ್ಳಿ.

– ಸೊಳ್ಳೆ ಉತ್ಪತ್ತಿ ತಾಣಗಳನ್ನು ಹುಡುಕಿ ನಾಶ ಮಾಡಿ.

– ಕೃಷಿ ತೋಟದಲ್ಲೂ ಸೊಳ್ಳೆಗಳ ಉತ್ತತ್ತಿ ತಾಣಗಳಿದ್ದರೆ (ಅಡಿಕೆ ಹಾಳೆಯಲ್ಲಿನ ನೀರು ಇತ್ಯಾದಿ) ನಾಶಪಡಿಸಿ.

– ರಾತ್ರಿ ಹೊತ್ತು ಸೊಳ್ಳೆ ಕಾಟದಿಂದ ಪಾರಾಗಲು ಸೊಳ್ಳೆ ಪರದೆಯಂಥ ರಕ್ಷಣಾ ಕ್ರಮ ಅನುಸರಿಸಿ.

– ಒಂದುವೇಳೆ ಜ್ವರದ ಸೂಚನೆ ಸಿಕ್ಕರೆ ಸ್ವಯಂ ಚಿಕಿತ್ಸೆಗೆ ಒಳಗಾಗದೇ, ಹತ್ತಿರದ ಆಸ್ಪತ್ರೆಗೆ ಹೋಗಿ ವೈದ್ಯರಿಂದ ತಪಾಸಣೆ ಮಾಡಿಸಿಕೊಳ್ಳಿ.

– ಅಗತ್ಯ ಬಿದ್ದರೆ ರಕ್ತ ತಪಾಸಣೆ ಮಾಡಿಸಿ.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

05856

Sullia: ಮರ್ಕಂಜ; ಕಾಣೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Puttur: ಬ್ಯಾಂಕ್‌ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್‌ಪಿ ಭೇಟಿ

Puttur: ಬ್ಯಾಂಕ್‌ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್‌ಪಿ ಭೇಟಿ

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

Aranthodu: ಮಿತ್ತಡ್ಕದ ಮಹಿಳೆ ನಾಪತ್ತೆ; ಬಾವಿಯಲ್ಲಿ ಹುಡುಕಾಟ

Aranthodu: ಮಿತ್ತಡ್ಕದ ಮಹಿಳೆ ನಾಪತ್ತೆ; ಬಾವಿಯಲ್ಲಿ ಹುಡುಕಾಟ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.