ನ.ಪಂ.ನಿಂದ ಬೆಲೆಬಾಳುವ ಗಿಡಗಳ ನಾಶ
Team Udayavani, Dec 3, 2017, 2:58 PM IST
ಸುಳ್ಯ: ಸುಳ್ಯ ನಗರ ಪಂಚಾಯತ್ನ ಸ್ವಚ್ಛ ಭಾರತ್ ಮಿಷನ್ ರಾಯಭಾರಿ ಸ್ಥಾನಕ್ಕೆ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ| ಕೆ.ವಿ. ಚಿದಾನಂದ ಅವರು ಶನಿವಾರ ರಾಜೀನಾಮೆ ನೀಡಿದ್ದಾರೆ.
ತಮ್ಮ ಮನೆ ಸಮೀಪ ಸುಮಾರು 60 ಸಾವಿರ ರೂ. ವೆಚ್ಚದಲ್ಲಿ ಬೆಲೆಬಾಳುವ 49 ಬೋಗನ್ವಿಲ್ಲಾ ಗಿಡಗಳನ್ನು ನೆಡಲಾಗಿತ್ತು. ಪಂ. ಎಂಜಿನಿಯರ್ ಶಿವಕುಮಾರ್ ಅವರ ಆದೇಶದಂತೆ ಈ ಗಿಡಗಳನ್ನು ಕಡಿಯಲಾಗಿರುವುದರಿಂದ ಬೇಸತ್ತು ಈ ರಾಜೀನಾಮೆ ನೀಡಿರುವುದಾಗಿ ರಾಜೀನಾಮೆ ಪತ್ರದಲ್ಲಿ ಅವರು ವಿವರಿಸಿದ್ದಾರೆ.
ರಾಜೀನಾಮೆ ಪತ್ರವನ್ನು ಪುತ್ರ ಕೆ.ಸಿ. ಅಕ್ಷಯ್ ಹಾಗೂ ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಜಗದೀಶ್ ಅಡ್ತಲೆ,
ಆಯುರ್ವವೇದ ಕಾಲೇಜು ಆಡಳಿತಾಧಿಕಾರಿ ಡಾ| ಲೀಲಾಧರ್, ಧನಂಜಯ ಮದುವೆಗದ್ದೆ ಅವರ ನೇತೃತ್ವದಲ್ಲಿ 50ಕ್ಕೂ ಅಧಿಕ ಮಂದಿಯ ನಿಯೋಗ ನ.ಪಂ. ಮುಖ್ಯಾಧಿಕಾರಿಯಾಗಿರುವ ಗೋಪಾಲ ನಾಯ್ಕ ಅವರ ಕಚೇರಿಗೆ ತೆರಳಿ ಹಸ್ತಾಂತರಿಸಿತು. ಈ ಪತ್ರವನ್ನು ಸಂಸದರು, ಕೇಂದ್ರ ಹಾಗೂ ರಾಜ್ಯ ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಜನಪ್ರತಿನಿಧಿಗಳಿಗೆ ಕಳುಹಿಸಲಾಗಿದೆ. ಪತ್ರ ಸ್ವೀಕರಿಸಿದ ಮುಖ್ಯಾಧಿಕಾರಿಗಳು ಆಡಳಿತ ಮಂಡಳಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ನಿಯೋಗಕ್ಕೆ ಭರವಸೆ ನೀಡಿದ್ದಾರೆ.
ಗಂಟೆಗೂ ಕಾಲ ಕಾದರು
ರಾಜೀನಾಮೆ ಪತ್ರ ನೀಡುವ ಬಗ್ಗೆ ಆಗಮಿಸುವುದಾಗಿ ಮುಖ್ಯಾಧಿಕಾರಿಯವರಲ್ಲಿ ಬೆಳಗ್ಗೆ ನಿಯೋಗ ತಿಳಿಸಿತ್ತು. ಮುಖ್ಯಾಧಿಕಾರಿಗಳು ಸಂಜೆ 3.15ಕ್ಕೆ ಬರುವಂತೆ ತಿಳಿಸಿದರು. ನಿಯೋಗ ತೆರಳಿದ್ದ ವೇಳೆ ಅಧಿಕಾರಿ ಹೊರಹೋಗಿದ್ದರು. ನಿಗದಿತ ಸಮಯಕ್ಕೆ ಆಗಮಿಸಿ ಫೋನಾಯಿಸಿದಾಗ ಕರ್ತವ್ಯ ನಿಮಿತ್ತ ಹೊರಹೋಗಿರುವುದಾಗಿ ತಿಳಿಸಿ, ಒಂದೂವರೆ ಗಂಟೆಗಳ ಕಾಲ ಕಾಯಿಸಿದರು.
ನನ್ನ ಬಳಿ ಚರ್ಚಿಸಿಲ್ಲ
ಗಿಡನೆಡುವ ವಿಚಾರವಾಗಿ ತನ್ನ ಬಳಿ ಚರ್ಚಿಸಿಲ್ಲ. ನೆಟ್ಟಿದ್ದ ಗಿಡವನ್ನು ತೆರವುಗೊಳಿಸುವಂತೆಯೂ ತಾನು ಸೂಚಿಸಿಲ್ಲ. ಮುಂದೆ ಆಡಳಿತ ಮಂಡಳಿ ಸಭೆಯಲ್ಲಿರಿಸಿ ಚರ್ಚಿಸಲಾಗುವುದು.
– ಗೋಪಾಲ್ ನಾಯ್ಕ
ನ.ಪಂ. ಮುಖ್ಯಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ಮೊದಲ ಕಿನ್ನಿಪಿಲಿಗೆ 48 ವರ್ಷ!; 15ರಿಂದ 75ಕ್ಕೇರಿದ ಟೀಮ್
Belthanagdy:ಹಿರಿಯ ಸಹಕಾರಿ,ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸೇವಾಸಂಘದ ಅಧ್ಯಕ್ಷ ನಿಧನ
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Putturu: ವಿದೇಶಗಳಿಂದ ಅಡಿಕೆ ಆಮದು ಪರಿಣಾಮ ಅಧ್ಯಯನ: ಸಂಸದ ಕ್ಯಾ.ಬ್ರಿಜೇಶ್ ಚೌಟ
Wild Elephant: ಧರ್ಮಸ್ಥಳ, ಚಾರ್ಮಾಡಿಯಲ್ಲಿ ಕಾಡಾನೆಗಳ ಹಾವಳಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hubbali: ಅಪಾರ್ಟ್ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.