‘ಕಲಾಭಿಮಾನಿಗಳ ಪ್ರೋತ್ಸಾಹದಿಂದ ಕಲೆಯ ಅಭಿವೃದ್ಧಿ’
Team Udayavani, Nov 26, 2017, 11:45 AM IST
ಮಹಾನಗರ: ಕಲೆಗಳ ಉಳಿವು ಹಾಗೂ ಅಭಿವೃದ್ಧಿಯಲ್ಲಿ ಕಲಾಭಿಮಾನಿಗಳ ಪಾತ್ರ ಮಹತ್ತರ. ಹಾಗಾಗಿ ಕಲೆ ಹಾಗೂ ಕಲಾವಿದರನ್ನು ಗೌರವಿಸುವ ಕೆಲಸವಾಗಬೇಕು ಎಂದು ಮಾಜಿ ಸಚಿವ ಕೃಷ್ಣ ಜಿ. ಪಾಲೆಮಾರ್ ಹೇಳಿದರು.
‘ಯಕ್ಷಾಂಗಣ ಮಂಗಳೂರು’ ಹಾಗೂ ಕರ್ನಾಟಕ ಯಕ್ಷಭಾರತಿ ಪುತ್ತೂರು ಸಹಯೋಗದಲ್ಲಿ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮವಾಗಿ ಪುರಭವನದಲ್ಲಿ ಏರ್ಪಡಿಸಿದ ಪಂಚಮ ವರ್ಷದ ನುಡಿಹಬ್ಬ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ’ ಸಮಾರೋಪದಲ್ಲಿ ಅವರು ಮಾತನಾಡಿದರು. ತಾಳಮದ್ದಳೆ ಸಪ್ತಾಹಗಳ ಮೂಲಕ ಗ್ರಾಮೀಣ ಪ್ರದೇಶ ಸೇರಿದಂತೆ ನಗರ ಪ್ರದೇಶಗಳಲ್ಲೂ ಯಕ್ಷಗಾನಗಳ ಬಗ್ಗೆ ಜನರಿಗೆ ತಿಳಿಸುವ ಕಾರ್ಯವಾಗುತ್ತಿದೆ. ಯುವ ಸಮೂಹ ಇಂತಹ ಕಾರ್ಯ ಕ್ರಮಗಳಲ್ಲಿ ಭಾಗವಹಿಸುವ ಉತ್ಸಾಹ ತೋರಬೇಕಿದೆ ಎಂದರು.
ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಪಾರ್ತಿ ಸುಬ್ಬ ಪ್ರಶಸ್ತಿ ಪುರಸ್ಕೃತ ಹಿರಿಯ ಅರ್ಥದಾರಿ, ವಿಮರ್ಶಕ ಡಾ| ಎಂ. ಪ್ರಭಾಕರ್ ಜೋಶಿ ಅವರನ್ನು ಯಕ್ಷಾಂಗಣ ಗೌರವ ಪ್ರಶಸ್ತಿ ನೀಡಿ ಸಮ್ಮಾನಿಸಲಾಯಿತು. ಉದ್ಯಮಿ ಶ್ರೀಪತಿ ಭಟ್, ನಮೀತಾ ಶ್ಯಾಂ, ದಯಾನಂದ ವರ್ಕಾಡಿ, ವಿಶಾಲ ಕೀರ್ತಿ ರೈ, ರವೀಂದ್ರ ರೈ ಉಪಸ್ಥಿತರಿದ್ದರು. ಯಕ್ಷಾಂಗಣದ ಕಾರ್ಯಾಧ್ಯಕ್ಷ ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಡಾ| ದಿನಕರ ಎಸ್. ಪಚ್ಚನಾಡಿ ನಿರೂಪಿಸಿದರು. ಬಳಿಕ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ಹಾಗೂ ಪ್ರಪುಲ್ಲಚಂದ್ರ ನೆಲ್ಯಾಡಿ ಭಾಗವತಿಕೆಯಲ್ಲಿ ಆಂಜನೇಯ 2 ಸೌಗಂಧಿಕಾಹರಣ ತಾಳಮದ್ದಳೆ ಜರಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ
Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.